ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ತುಮಕೂರಿನಲ್ಲಿ ಶಂಕಿತನ ವಿಚಾರಣೆ, ಯಾರು ಈ ಮುಜಾಯುದ್ದೀನ್? | Delhi Car Bomb Blast Case Tumakuru Mujayuddin Terror Suspect History

ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ತುಮಕೂರಿನಲ್ಲಿ ಶಂಕಿತನ ವಿಚಾರಣೆ, ಯಾರು ಈ ಮುಜಾಯುದ್ದೀನ್? | Delhi Car Bomb Blast Case Tumakuru Mujayuddin Terror Suspect History



ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ತುಮಕೂರಿನಲ್ಲಿ ಶಂಕಿತನ ವಿಚಾರಣೆ, ಯಾರು ಈ ಮುಜಾಯುದ್ದೀನ್? | Delhi Car Bomb Blast Case Tumakuru Mujayuddin Terror Suspect History

ದೆಹಲಿಯ ಕೆಂಪುಕೋಟೆ ಬಳಿಯ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಿಂದೆ ‘ಕಲಿಫತ್’ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಈತನಿಗೆ, ಪ್ರಸ್ತುತ ಸ್ಫೋಟ ಸಂಬಂಧ ವಿಚಾರಣೆ ನಡೆಸಿ ಬಿಟ್ಟುಕಳಿಸಲಾಗಿದೆ.

ತುಮಕೂರು(ನ.13): ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ PH ಕಾಲೋನಿ ನಿವಾಸಿ ಮುಜಾಯುದ್ದೀನ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ಫೋಟ ನಡೆದ ಮರುದಿನವೇ ಈ ವಿಚಾರಣೆ ನಡೆದಿದ್ದು, ಘಟನೆಯಲ್ಲಿ ಭಾಗಿಯಾಗಿ ಎಂಬುದು ಖಾತರಿ ಹಿನ್ನೆಲೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ವಿಚಾರಣೆ ಬಳಿಕ ಬಿಟ್ಟು ಕಳಿಸಿದ್ದಾರೆ.

ದೆಹಲಿ ಸ್ಫೋಟ ಬಳಿಕ ಅಲರ್ಟ್ ಆಗಿರುವ ರಾಜ್ಯ ಪೊಲೀಸರು, ಎಲ್ಲಾ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ‘ಖಾಕಿ ಡ್ರಿಲ್’ ನಡೆಸುತ್ತಿದ್ದಾರೆ. ಈ ಸರಣಿಯ ಭಾಗವಾಗಿ, ಮುಜಾಯುದ್ದೀನ್ ಅವರನ್ನು ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಡಿಸಲಾಯಿತು. ವಿಚಾರಣೆಯನ್ನು ನಡೆಸಿದ ಎಸ್‌ಪಿ ಪುರುಷೋತ್ತಮ್ ಅವರು, ಮುಜಾಯುದ್ದೀನ್ ಅವರಿಗೆ ದೆಹಲಿ ಸ್ಫೋಟದಲ್ಲಿ ಯಾವುದೇ ಕೈವಾಡ ಇಲ್ಲ. ತೀವ್ರ ವಿಚಾರಣೆ ನಂತರ ಬಿಟ್ಟುಕಳುಹಿಸಲಾಗಿದೆ.

ಯಾರು ಈ ಮುಜಾಯುದ್ದೀನ್‌ನ?

ಮುಜಾಯುದ್ದೀನ್ ತುಮಕೂರಿನ PH ಕಾಲೋನಿ ನಿವಾಸಿಯಾಗಿದ್ದಾರೆ. ಹಿಂದೆ ‘ಕಲಿಫತ್’ ಎಂಬ ಉಗ್ರವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಆರೋಪಿ, ಈ ಸಂಘಟನೆಯ ಮುಖ್ಯಸ್ಥರಿಗೆ ತುಮಕೂರಿನಲ್ಲಿ ಸಭೆಗಳನ್ನು ಆಯೋಜಿಸುವಲ್ಲಿ ಅವರು ಸಹಾಯ ಮಾಡಿದ್ದರು ಎಂದು ಆರೋಪವಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ತಪಾಸಣೆ ಏಜೆನ್ಸಿ (ಎನ್‌ಐಎ) ಅವರನ್ನು ಬಂಧಿಸಿ, ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ವರ್ಷಗಳ ಶಿಕ್ಷೆಯನ್ನು ಅನುಭವಿಸಿ, ತಿಹಾರ್ ಜೈಲಿನಿಂದ ಹೊರಬಂದಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಸ್ಫೋಟದ ಮರುದಿನ ಪೊಲೀಸರು ಮತ್ತೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ಆದರೆ ವಿಚಾರಣೆಯಲ್ಲಿ ಯಾವುದೇ ಸಂಶಯಾಸ್ಪದ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಬಿಟ್ಟುಕಳಿಸಿದ್ದಾರೆ.

ದೆಹಲಿ ಸ್ಫೋಟದ ಸಂಕ್ಷಿಪ್ತ ಮಾಹಿತಿ:

ನವೆಂಬರ್ 12 ರಂದು ದೆಹಲಿಯ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಹಲವು ಜನರು ಮೃತಪಟ್ಟಿದ್ದರು, ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಆಂತರಿಕ ಭಯೋತ್ಪಾದಕ ಗುಂಪುಗಳ ಕೈ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆ ರಾಷ್ಟ್ರೀಯ ಮಟ್ಟದಲ್ಲಿ ಈಗ ತೀವ್ರ ತಪಾಸಣೆ ನಡೆಯುತ್ತಿದ್ದು, ಕರ್ನಾಟಕ ಪೊಲೀಸ್ ಸಹ ಸ್ಥಳೀಯ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದಾರೆ.



Source link

Leave a Reply

Your email address will not be published. Required fields are marked *