₹40 ಲಕ್ಷ ವಹಿವಾಟಿಗೆ ದಾಖಲೆ ಕೊಟ್ರೆ ಪ್ರಕರಣ ಮುಕ್ತಾಯ: ವಾಣಿಜ್ಯ ತೆರಿಗೆ ಇಲಾಖೆ | 40 Lakh Transactions Documents Commercial Tax Gvd

₹40 ಲಕ್ಷ ವಹಿವಾಟಿಗೆ ದಾಖಲೆ ಕೊಟ್ರೆ ಪ್ರಕರಣ ಮುಕ್ತಾಯ: ವಾಣಿಜ್ಯ ತೆರಿಗೆ ಇಲಾಖೆ | 40 Lakh Transactions Documents Commercial Tax Gvd



ವರ್ಷದಲ್ಲಿ 40 ಲಕ್ಷಕ್ಕಿಂತ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿದವರಿಗೆ ಸ್ಪಷ್ಟಿಕರಣ ಕೇಳಿ ನೋಟಿಸ್‌ ನೀಡಲಾಗಿದ್ದು, ಸೂಕ್ತ ದಾಖಲೆ ವಿವರಣೆ ನೀಡಿದರೆ ಪ್ರಕರಣ ಮುಕ್ತಾಯಗೊಳಿಸಲಾಗುವುದು ಎಂದು ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಚಂದ್ರಶೇಖರ್ ನಾಯಕ್ ಹೇಳಿದ್ದಾರೆ.

ಬೆಂಗಳೂರು (ಜು.17): ಜನ, ವ್ಯಾಪಾರಿಗಳು ಆತಂಕಗೊಳ್ಳಬೇಕಾಗಿಲ್ಲ. ವರ್ಷದಲ್ಲಿ 40 ಲಕ್ಷಕ್ಕಿಂತ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿದವರಿಗೆ ಸ್ಪಷ್ಟಿಕರಣ ಕೇಳಿ ನೋಟಿಸ್‌ ನೀಡಲಾಗಿದ್ದು, ಸೂಕ್ತ ದಾಖಲೆ ವಿವರಣೆ ನೀಡಿದರೆ ಪ್ರಕರಣ ಮುಕ್ತಾಯಗೊಳಿಸಲಾಗುವುದು ಎಂದು ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಚಂದ್ರಶೇಖರ್ ನಾಯಕ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಎಸ್‌ಟಿ ಕಾಯ್ದೆಯಡಿ ಯಾವುದೇ ವ್ಯಾಪಾರಿ ಒಂದು ವರ್ಷದಲ್ಲಿ 40 ಲಕ್ಷಕ್ಕಿಂತ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿದವರಿಗೆ ನೋಟಿಸ್‌ ನೀಡಲಾಗಿದೆ ಎಂದರು.

ಕಳೆದ 2021 ರಿಂದ 2024 ವರೆಗೆ ಪ್ರತಿ ವರ್ಷ 40 ಲಕ್ಷಕ್ಕಿಂತ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿದವರಿಗೆ ನೋಟಿಸ್‌ ನೀಡಲಾಗಿದೆ. ಇದು ಸ್ಪಷ್ಟೀಕರಣ ಕೇಳಿ ನೀಡಿರುವ ನೋಟಿಸ್ ಆಗಿದ್ದು, ಯುಪಿಐ ಮೂಲಕ ಪಾವತಿಯಾದ ಹಣದ ಆಧಾರದಲ್ಲಿ ನೋಟಿಸ್‌ ನೀಡಿಲ್ಲ. ಬ್ಯಾಂಕ್‌ ದಾಖಲೆಗಳ ಆಧಾರದಲ್ಲಿ ನೋಟಿಸ್‌ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಯಾವ ವ್ಯಾಪಾರ ವಹಿವಾಟಿನಿಂದ ಪ್ರತಿ ವರ್ಷ 40 ಲಕ್ಷ ರು. ವಹಿವಾಟು ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟಿಕರಣ ಬೇಕಾಗಿದೆ. ವ್ಯಾಪಾರ ಮಾಡಿ ಸರಕು ಜಿಎಸ್‌ಟಿ ಅಡಿ ಬಾರದಿದ್ದರೆ ಅದಕ್ಕೆ ಸೂಕ್ತ ವಿವರಣೆ ನೀಡಬೇಕಿದೆ. ಒಂದು ವೇಳೆ ಜಿಎಸ್‌ಟಿ ಅಡಿ ಬಂದರೆ, ವಾಣಿಜ್ಯ ತೆರಿಗೆ ಇಲಾಖೆ ಪ್ರಕರಣವನ್ನು ಮುಕ್ತಾಯಗೊಳಿಸಲಿದೆ ಎಂದು ತಿಳಿಸಿದರು.

ಹೂ, ಹಣ್ಣು, ಹಾಲು ಸೇರಿ ಮೊದಲಾದವು ಜಿಎಸ್‌ಟಿಯಿಂದ ಹೊರಗೆ ಉಳಿದಿದ್ದು, ಅಂತಹ ವ್ಯಾಪಾರಿಗಳು ಸ್ಪಷ್ಟೀಕರಣ ನೀಡಬಹುದು. ಸರಕು ಖರೀದಿ ವೇಳೆ ಜಿಎಸ್‌ಟಿ ಪಾವತಿ ಮಾಡಿದ್ದರೆ ಮಾರಾಟದಲ್ಲಿ ಜಿಎಸ್‌ಟಿ ಪಾವತಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಅದಕ್ಕೆ ಪೂರಕ ದಾಖಲೆಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಒದಗಿಸಬೇಕಾಗಲಿದೆ ಎಂದರು. ಯುಪಿಐ ಬಂದ್‌ ಮಾಡುವುದು ಇದಕ್ಕೆ ಪರಿಹಾರವಲ್ಲ. ಸಾರ್ವಜನಿಕರು ಹಣ ಪಾವತಿ ಮಾಡುವುದಕ್ಕೆ ಯುಪಿಐ ಸುಲಭ ಮತ್ತು ಸರಳ ವಿಧಾನ ಎಂದು ಅರಿತುಕೊಂಡಿದ್ದಾರೆ. ನೋಟಿಸ್‌ ನೀಡುತ್ತಿರುವುದು ಮುಂದಿನ ದಿನಗಳಲ್ಲಿ ಸರಿಯಾದ ತೆರಿಗೆ ಸಂಗ್ರಹಿಸುವುದು ಇದರ ಮುಖ್ಯ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ 25ರಂದು ವ್ಯಾಪಾರಿಗಳ ಬಂದ್‌: ಯುಪಿಐ ಮೂಲಕ ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವುದನ್ನು ಖಂಡಿಸಿ ಜು.25ರಂದು ಸ್ವಾತಂತ್ರ್ಯಉದ್ಯಾನದಲ್ಲಿ ಕುಟುಂಬ ಸಮೇತ ಹೋರಾಟ ನಡೆಸಲು ಸಣ್ಣ ವ್ಯಾಪಾರಿಗಳು ಮುಂದಾಗಿದ್ದಾರೆ. ಏಕಾಏಕಿ ನೋಟಿಸ್ ನೀಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂಡಿಮೆಂಟ್ಸ್, ಬೇಕರಿ ಅಂಗಡಿಕಾರರು, ತರಕಾರಿ, ಮಾಂಸ, ಸಣ್ಣ ಪ್ರಮಾಣದ ಎಲೆಕ್ಟ್ರಾನಿಕ್‌ ಸೇರಿ ಬೀದಿಬದಿ ವ್ಯಾಪಾರಸ್ಥರು ಹೋರಾಟಕ್ಕೆ ತೀರ್ಮಾನಿಸಿದ್ದಾರೆ.

ಜು.23ರಿಂದಲೇ ಹಾಲು ಮಾರಾಟ, ಜು.24ರಿಂದ ಗುಟ್ಕಾ ಸಿಗರೇಟ್‌ ವ್ಯಾಪಾರ ಬಂದ್‌ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಯೋಚನೆಯೂ ಇದೆ. ಜು.25ರಂದು ಕಾಂಡಿಮೆಂಟ್ಸ್, ಬೇಕರಿ ಹಾಗೂ ಸಣ್ಣ ಪುಟ್ಟ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಸ್ವಾತಂತ್ರ್ಯಉದ್ಯಾನದಲ್ಲಿ ಕುಟುಂಬ ಸಮೇತ ಹೋರಾಟ ನಡೆಸುವುದಾಗಿ ರಾಜ್ಯ ಕಾರ್ಮಿಕ ಪರಿಷತ್‌ ತಿಳಿಸಿದೆ.



Source link

Leave a Reply

Your email address will not be published. Required fields are marked *