Navodaya schools in Tamil Nadu: ನವೋದಯ ವಿವಾದ: ‘ನಮ್ಮದು ಒಕ್ಕೂಟ ಸಮಾಜ’ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತಪರಾಕಿ | Identify Land For Navodaya Vidyalayas Supreme Court Tells Tamil Nadu Government

Navodaya schools in Tamil Nadu: ನವೋದಯ ವಿವಾದ: ‘ನಮ್ಮದು ಒಕ್ಕೂಟ ಸಮಾಜ’ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತಪರಾಕಿ | Identify Land For Navodaya Vidyalayas Supreme Court Tells Tamil Nadu Government



Navodaya schools in Tamil Nadu: ನವೋದಯ ವಿವಾದ: ‘ನಮ್ಮದು ಒಕ್ಕೂಟ ಸಮಾಜ’ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತಪರಾಕಿ | Identify Land For Navodaya Vidyalayas Supreme Court Tells Tamil Nadu Government

ದ್ವಿಭಾಷಾ ಸೂತ್ರದ ಕಾರಣ ನೀಡಿ ಜವಾಹರ್‌ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ಒಡ್ಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ. ಇದು ಒಕ್ಕೂಟ ವ್ಯವಸ್ಥೆಯಾಗಿದ್ದು, ಪ್ರತಿಕೂಲ ಮನೋಭಾವ ಬಿಟ್ಟು ಕೇಂದ್ರದೊಂದಿಗೆ ಸಮಾಲೋಚಿಸಿ ಶಾಲೆ ಸ್ಥಾಪನೆಗೆ ಮುಂದಾಗುವಂತೆ ನ್ಯಾಯಾಲಯ ಸೂಚಿಸಿದೆ.

ಪಿಟಿಐ ನವದೆಹಲಿ (ಡಿ.16): ದ್ವಿಭಾಷಾ ಸೂತ್ರದ ಕಾರಣ ನೀಡಿ ಕೇಂದ್ರ ಸರ್ಕಾರದ ಜವಾಹರ್‌ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ಒಡ್ಡಿದ್ದ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ‘ನಮ್ಮದು ಒಕ್ಕೂಟ ಸಮಾಜ’ ಎಂದಿರುವ ಅದು, ‘ರಾಜ್ಯದಲ್ಲಿ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಸ್ಥಾಪನೆ ಕುರಿತು ಕೇಂದ್ರದೊಂದಿಗೆ ಜಂಟಿ ಸಮಾಲೋಚನೆ ನಡೆಸಿ’ ಎಂದು ಸೂಚಿಸಿದೆ.

ನಮ್ಮದು ಒಕ್ಕೂಟ ಸಮಾಜ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ತಪರಾಕಿ

‘ನವೋದಯ ವಿದ್ಯಾಲಯಗಳ ಮೂಲಕ ಹಿಂದಿ (ತ್ರಿಭಾಷಾ ಸೂತ್ರ) ಹೇರಲಾಗುತ್ತದೆ. ಆದರೆ ತಮಿಳುನಾಡಿನಲ್ಲಿ ದ್ವಿಭಾಷಾ ಸೂತ್ರ ಮಾತ್ರ ಇದೆ’ ಎಂಬ ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸಿದ ನ್ಯಾ। ಬಿ.ವಿ. ನಾಗರತ್ನ ಮತ್ತು ನ್ಯಾ। ಆರ್. ಮಹಾದೇವನ್ ಅವರ ಪೀಠವು, ರಾಜ್ಯ ಸರ್ಕಾರವು ಪ್ರತಿಕೂಲ ಮನೋಭಾವವನ್ನು ಅಳವಡಿಸಿಕೊಳ್ಳಬಾರದು ಮತ್ತು ಒಕ್ಕೂಟ ವ್ಯವಸ್ಥೆಯಡಿ ಚರ್ಚೆ ನಡೆಯಬೇಕು. ತಮಿಳುನಾಡಿನ ಪ್ರತಿ ಜಿಲ್ಲೆಯಲ್ಲಿ ನವೋದಯ ವಿದ್ಯಾಲಯ ಸ್ಥಾಪಿಸಲು ಅಗತ್ಯವಿರುವ ಭೂಮಿಯ ಪ್ರಮಾಣವನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿತು.

ಭಾಷಾ ಸಮಸ್ಯೆಯನ್ನಾಗಿ ಮಾಡಬೇಡಿ:

‘ಇದನ್ನು ಭಾಷಾ ಸಮಸ್ಯೆಯನ್ನಾಗಿ ಮಾಡಬೇಡಿ. ನಮ್ಮ ರಾಜ್ಯ ನಮ್ಮ ರಾಜ್ಯ ಎನ್ನಬೇಡಿ. ನಮ್ಮದು ಫೆಡರಲ್ ಸಮಾಜ. ನೀವು ಗಣರಾಜ್ಯದ ಭಾಗ. ನೀವು ಒಂದು ಹೆಜ್ಜೆ ಮುಂದೆ ಬಂದರೆ, ಅವರು ಕೂಡ ಒಂದು ಹೆಜ್ಜೆ ಮುಂದೆ ಬರುತ್ತಾರೆ. ದಯವಿಟ್ಟು ಸಕಾರಾತ್ಮಕ ಮನೋಭಾವವನ್ನು ಹೊಂದಿರಿ’ ಎಂದು ಅವರು ಹೇಳಿತು.

‘ಆಂಧ್ರಪ್ರದೇಶ ವಿಭಜನೆಯ ನಂತರ, ತಮಿಳುನಾಡು ಎಲ್ಲಾ ವೈಭವ ಪಡೆದುಕೊಂಡಿದೆ. ಇದು ದಕ್ಷಿಣ ಭಾರತದ ಅತಿದೊಡ್ಡ ಔದ್ಯಮಿಕ ರಾಜ್ಯವಾಗಿದೆ. ಶಾಲೆ ಸ್ಥಾಪನೆಯನ್ನು (ಹಿಂದಿ) ಹೇರಿಕೆಯಾಗಿ ತೆಗೆದುಕೊಳ್ಳಬೇಡಿ, ಇದು ರಾಜ್ಯದ ವಿದ್ಯಾರ್ಥಿಗಳಿಗೆ ಒಂದು ಅವಕಾಶ. ನಮ್ಮದು ದ್ವಿಭಾಷಾ ನೀತಿ ಎಂದು ನೀವು ಹೇಳಬಹುದು. ಅವರು (ಕೇಂದ್ರ) ಇದನ್ನು ಪರಿಶೀಲಿಸುತ್ತಾರೆ. ಕೇಂದ್ರವು ರಾಜ್ಯದ ನೀತಿಗೆ ಭಂಗ ತರದು’ ಎಂದು ಪೀಠವು ತಮಿಳ್ನಾಡು ಸರ್ಕಾರಕ್ಕೆ ಹೇಳಿದರು.



Source link

Leave a Reply

Your email address will not be published. Required fields are marked *