Headlines

ಜೈಲು ಡಿಜಿಪಿ ಅಲೋಕ್‌ ಕುಮಾರ್‌ ಆದೇಶ ಕೇಳಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಕೊತ ಕೊತ! | Alok Kumar New Jail Rules Impact Actor Darshan Food Clothing Restrictions San

ಜೈಲು ಡಿಜಿಪಿ ಅಲೋಕ್‌ ಕುಮಾರ್‌ ಆದೇಶ ಕೇಳಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಕೊತ ಕೊತ! | Alok Kumar New Jail Rules Impact Actor Darshan Food Clothing Restrictions San


ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಸೇರಿದಂತೆ ರಾಜ್ಯದ ಎಲ್ಲಾ ಕೈದಿಗಳಿಗೆ ಜೈಲಿನ ಡಿಜಿಪಿ ಅಲೋಕ್‌ ಕುಮಾರ್‌ ಹೊಸ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಈ ಆದೇಶದ ಪ್ರಕಾರ, ಕೈದಿಗಳಿಗೆ ಹೊರಗಿನಿಂದ ಸರಬರಾಜು ಮಾಡುವ ಆಹಾರ, ಬಟ್ಟೆ ಮತ್ತು ಇತರ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ.

ಬೆಂಗಳೂರು (ಜ.24): ಜೈಲಿನ ಡಿಜಿಪಿ ಅಲೋಕ್‌ ಕುಮಾರ್‌ ಅವರ ಹೊಸ ಆದೇಶಕ್ಕೆ ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಕಂಗಾಲಾಗಿದ್ದಾರೆ. ಇಲ್ಲಿಯವರೆಗೂ ಹೊರಗಿನಿಂದ ಬರುವ ಹಣ್ಣು, ಬೇಕರಿ ತಿನಿಸುಗಳನ್ನು ಬೇಕಾದಷ್ಟು ಸವಿಯುತ್ತಿದ್ದ ದರ್ಶನ್‌ಗೆ ಇನ್ನು ಮುಂದೆ ಅದಕ್ಕೂ ಕಡಿವಾಣ ಬೀಳಲಿದೆ. ರಾಜ್ಯದ ಎಲ್ಲಾ ಜೈಲುಗಳಿಗೆ ಸುತ್ತೋಲೆ ಹೊರಡಿಸಿದ ಅಲೋಕ್ ಕುಮಾರ್, ಕೈದಿಗಳಿಗೆ ಆಹಾರ, ಬಟ್ಟೆ ಮತ್ತು ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೈದಿಗಳಿಗೆ ಜೈಲಿನ ನಿಯಮದ ಪ್ರಕಾರವೇ ಆಹಾರ, ಬಟ್ಟೆ ಮತ್ತು ಹಾಸಿಗೆಗಳನ್ನು ಒದಗಿಸಬೇಕು ಎಂದು ತಿಳಿಸಲಾಗಿದೆ. ಸಂದರ್ಶನದ ಸಮಯದಲ್ಲಿ ಕೈದಿಗಳಿಗೆ ಖಾಸಗಿ ವ್ಯಕ್ತಿಗಳಿಂದ ಆಹಾರ ಪೂರೈಕೆ ಮಾಡಲಾಗುತ್ತಿತ್ತು. ಇದಕ್ಕೆ ಕಡಿವಾಣ ಹೇರುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸಂದರ್ಶನ ಸಮಯದಲ್ಲಿ ಪ್ಯಾಕ್ ಮಾಡಲಾದ ಆಹಾರ ಪದಾರ್ಥಗಳನ್ನು ನೀಡಲು ಅವಕಾಶ ನೀಡಲಾಗಿದೆ. ಆದರೆ, ಅವುಗಳು ನಿರ್ದಿಷ್ಟ ಗ್ರಾಮ್‌ಗಳಲ್ಲಿಯೇ ಇರಬೇಕು ಎನ್ನವ ಷರತ್ತು ವಿಧಿಸಲಾಗಿದೆ.

ಬಾಳೆಹಣ್ಣು, ಸೇಬು, ಮಾವು, ಪೇರಲೆ ಹಾಗೂ ಸಪೋಟ ಹಣ್ಣುಗಳು2 ಕೆಜಿ ಆಗುವಷ್ಟು ನೀಡಬಹುದು. ಅದಕ್ಕಿಂತ ಹೆಚ್ಚು ಇರುವಂತಿಲ್ಲ. ಒಣ ಹಣ್ಣುಗಳು ಹಾಗೂ ಬೇಕರಿ ತಿಂಡಿಗಳು ಅರ್ಧ ಕೆ.ಜಿ ಮೀರುವಂತಿಲ್ಲ. ಇನ್ನು ಎರಡು ಜೊತೆ ಬಟ್ಟೆ ಹಾಗೂ ಎರಡು ಒಳಉಡುಪು ನೀಡಬಹುದು ಎನ್ನಲಾಗಿದೆ. ಇದು ವಿಚಾರಣಾಧೀನ ಕೈದಿಗಳಿಗೆ ಮಾತ್ರ ಅನ್ವಯ. ಇದಕ್ಕಿಂತ ಹೆಚ್ಚಿನ ಬಟ್ಟೆಗಳನ್ನು ನೀಡುವಂತಿಲ್ಲ ಎಂದು ತಿಳಿಸಲಾಗಿದೆ.

ಜೈಲಿನಲ್ಲಿ ಎರಡು ರೀತಿಯ ತಪಾಸಣೆ ಆಗಬೇಕು. ಮೊದಲು ದೈಹಿಕ ತಪಾಸಣೆ ನಂತರ ಸೆಕ್ಯುರಿಟಿ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅವಶ್ಯಕತೆ ಬಿದ್ದಲ್ಲಿ ಜೈಲಾಧಿಕಾರಿಗಳು ಯಾವುದೇ ರೀತಿಯ ತಪಾಸಣೆ ಕೂಡ ನಡೆಸಬಹದು. ತಕ್ಷಣವೇ ಈ ನಿಯಮಗಳು ಜಾರಿಗೆ ಬರಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಇರುವ ಪರಪ್ಪನ ಅಗ್ರಹಾರ ಜೈಲು ಸೇರಿದಂತೆ, ರಾಜ್ಯದ ಎಲ್ಲಾ ಜೈಲುಗಳಿಗೂ ಅಲೋಕ್‌ ಕುಮಾರ್‌ ಈ ಆದೇಶ ಮಾಡಿದ್ದಾರೆ.

ಸುತ್ತೋಲೆ ಹೊರಡಿಸಲು ಕಾರಣವೇನು?

ಕಾರಗೃಹಗಳಲ್ಲಿ ಕೆಲವರಿಗೆ ವಿಶೇಷ ಸವಲತ್ತು ಹಾಗೂ ತಾರತಮ್ಯದ ಆರೋಪಗಳು ಬಂದಿದ್ದವು. ಈ ಬಗ್ಗೆ ಹೈಕೋರ್ಟ್ ನಲ್ಲಿ ರೇಣುಕಾಸ್ವಾಮಿ ಪರ ವಕೀಲರು ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ ಯಾರು ಯಾರಿಗೆ ವಿಶೇಷ ಸೌಲಭ್ಯ ನೀಡಲಾಗಿದೆ ಎಂಬ ಮಾಹಿತಿಯನ್ನೂ ಹೈಕೋರ್ಟ್‌ ಕೇಳಿತ್ತು. ಇದರ ಬೆನ್ನಲ್ಲಿಯೇ ಎಲ್ಲಾ ಜೈಲುಗಳಿಗೂ ಸುತ್ತೋಲೆ ಹೊರಡಿಸಲಾಗಿದೆ. ದರ್ಶನ್ ಗ್ಯಾಂಗ್ ಸೇರಿದಂತೆ ಕಾರಗೃಹದಲ್ಲಿರುವ ಎಲ್ಲಾ ಕೈದಿಗಳಿಗೂ ಈ ಸೂಚನೆ ಅನ್ವಯವಾಗಲಿದೆ.



Source link

Leave a Reply

Your email address will not be published. Required fields are marked *