ಬೀದರ್ ಹಾಸ್ಟೆಲ್‌ನಲ್ಲಿ ವಿಚಿತ್ರ ಆಕೃತಿ ನೋಡಿ ಬೆಚ್ಚಿಬಿದ್ದ ಮಕ್ಕಳು! ವಿದ್ಯಾರ್ಥಿನಿಯರಿಗೆ ಸಾಯಬೇಕೆನ್ನೋ ಕೆಟ್ಟಕನಸು! | Students Panic After Seeing Mysterious Figure On Hostel Wall In Bidar

ಬೀದರ್ ಹಾಸ್ಟೆಲ್‌ನಲ್ಲಿ ವಿಚಿತ್ರ ಆಕೃತಿ ನೋಡಿ ಬೆಚ್ಚಿಬಿದ್ದ ಮಕ್ಕಳು! ವಿದ್ಯಾರ್ಥಿನಿಯರಿಗೆ ಸಾಯಬೇಕೆನ್ನೋ ಕೆಟ್ಟಕನಸು! | Students Panic After Seeing Mysterious Figure On Hostel Wall In Bidar



ಬೀದರ್ ಹಾಸ್ಟೆಲ್‌ನಲ್ಲಿ ವಿಚಿತ್ರ ಆಕೃತಿ ನೋಡಿ ಬೆಚ್ಚಿಬಿದ್ದ ಮಕ್ಕಳು! ವಿದ್ಯಾರ್ಥಿನಿಯರಿಗೆ ಸಾಯಬೇಕೆನ್ನೋ ಕೆಟ್ಟಕನಸು! | Students Panic After Seeing Mysterious Figure On Hostel Wall In Bidar

ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ಗೋಡೆಯ ಮೇಲೆ ವಿಚಿತ್ರ ಆಕೃತಿಯೊಂದು ಕಾಣಿಸಿಕೊಂಡು ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದೆ. ನಿರಂತರವಾಗಿ ಕೆಟ್ಟ ಕನಸುಗಳು ಬೀಳುತ್ತಿರುವುದರಿಂದ ಭಯಭೀತರಾದ ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ.

ಬೀದರ್: ಗೋಡೆಯ ಮೇಲೆ ಕಂಡುಬಂದ ವಿಚಿತ್ರ ಆಕೃತಿಯೊಂದು ವಸತಿ ನಿಲಯದ ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿಟಗುಪ್ಪಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರು ಭಯದಿಂದ ಚೀರುತ್ತಾ, ಅಳುತ್ತಾ ಹಾಸ್ಟೆಲ್‌ನಿಂದ ಹೊರಗೆ ಓಡಿ ಬಂದ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಫೆಬ್ರವರಿ 09 ರಾತ್ರಿ ಸುಮಾರು 8 ರಿಂದ 9 ಗಂಟೆಯ ನಡುವೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವಸತಿ ನಿಲಯದ ಗೋಡೆಯ ಮೇಲೆ ಅಸಹಜ ಹಾಗೂ ವಿಚಿತ್ರ ಆಕೃತಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಇದನ್ನು ಕಂಡ ವಿದ್ಯಾರ್ಥಿನಿಯರು ತೀವ್ರ ಭಯಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಕೆಟ್ಟ ಕನಸುಗಳಿಂದ ವಿದ್ಯಾರ್ಥಿನಿಯರಲ್ಲಿ ಭೀತಿ

ಇನ್ನೂ ಆತಂಕಕಾರಿ ಸಂಗತಿಯೆಂದರೆ, ಹಾಸ್ಟೆಲ್‌ನಲ್ಲಿ ಮಲಗಿದ ಬಳಿಕ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಭಯಾನಕ ಹಾಗೂ ಕೆಟ್ಟ ಕನಸುಗಳು ಬೀಳುತ್ತಿವೆಯಂತೆ. “ನಾನು ಮೇಲಕ್ಕೆ ಹೋಗಬೇಕು”, “ನೇಣು ಹಾಕಿಕೊಳ್ಳಬೇಕು” ಎಂಬ ರೀತಿಯ ಕನಸುಗಳು ಕಾಣಿಸುತ್ತಿವೆ ಎಂದು ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕನಸುಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿರುವಂತೆಯೇ ಅನುಭವವಾಗುತ್ತಿದ್ದು, ಇದರಿಂದ ವಸತಿ ನಿಲಯದ ವಿದ್ಯಾರ್ಥಿನಿಯರಲ್ಲಿ ಭೀತಿಯ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.

ಈ ಅಸಾಮಾನ್ಯ ಘಟನೆಗಳಿಂದ ಭಯಭೀತರಾದ ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್‌ನೊಳಗೆ ಉಳಿಯಲು ನಿರಾಕರಿಸಿ, ಹೊರಗೆ ಓಡಿ ಬಂದು ಅಳಲು ತೋಡಿಕೊಂಡಿದ್ದಾರೆ. ವಿಷಯ ತಿಳಿದ ಸ್ಥಳೀಯರು ಹಾಗೂ ಪಾಲಕರು ತಕ್ಷಣ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಅಧಿಕಾರಿಗಳ ಭೇಟಿ, ಪರಿಶೀಲನೆ

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಈ ವಸತಿ ನಿಲಯದಲ್ಲಿ 6ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ವಾಸವಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಮನಸ್ಥಿತಿ ಶಾಂತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಸ್ಥಳೀಯರು ಹಾಗೂ ಹಾಸ್ಟೆಲ್ ಸಿಬ್ಬಂದಿಯ ಸಹಕಾರದೊಂದಿಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ವಿದ್ಯಾರ್ಥಿನಿಯರಲ್ಲಿ ಉಂಟಾಗಿರುವ ಭಯವನ್ನು ದೂರ ಮಾಡುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಒಟ್ಟಾರೆ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯದಲ್ಲಿ ನಡೆದ ಈ ವಿಚಿತ್ರ ಘಟನೆ ವಿದ್ಯಾರ್ಥಿನಿಯರು ಹಾಗೂ ಪಾಲಕರಲ್ಲಿ ಆತಂಕ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.



Source link

Leave a Reply

Your email address will not be published. Required fields are marked *