Headlines

ಸತತ ನಾಲ್ಕನೇ ಸೋಲು ಕಂಡ ಬೆನ್ನಲ್ಲೇ ಬಿಸಿಸಿಐನಿಂದ ಶಿಕ್ಷೆಗೆ ಗುರಿಯಾದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ! | Ajinkya Rahane Fined 12 Lakh As Kkr Penalised For Slow Over Rate In Ipl 2026 Kvn

ಸತತ ನಾಲ್ಕನೇ ಸೋಲು ಕಂಡ ಬೆನ್ನಲ್ಲೇ ಬಿಸಿಸಿಐನಿಂದ ಶಿಕ್ಷೆಗೆ ಗುರಿಯಾದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ! | Ajinkya Rahane Fined 12 Lakh As Kkr Penalised For Slow Over Rate In Ipl 2026 Kvn



ಸತತ ನಾಲ್ಕನೇ ಸೋಲು ಕಂಡ ಬೆನ್ನಲ್ಲೇ ಬಿಸಿಸಿಐನಿಂದ ಶಿಕ್ಷೆಗೆ ಗುರಿಯಾದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ! | Ajinkya Rahane Fined 12 Lakh As Kkr Penalised For Slow Over Rate In Ipl 2026 Kvn

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಕೆಕೆಆರ್ ನಾಯಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ಆವೃತ್ತಿಯಲ್ಲಿ ಈ ರೀತಿ ದಂಡಕ್ಕೆ ಗುರಿಯಾದ ನಾಲ್ಕನೇ ತಂಡ ಕೆಕೆಆರ್ ಆಗಿದ್ದು, ಈ ಹಿಂದೆ ಶ್ರೇಯಸ್ ಅಯ್ಯರ್, ಶುಭ್‌ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ದಂಡ ತೆತ್ತಿದ್ದಾರೆ.

ಚೆನ್ನೈ: ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವಿಗಾಗಿ ಪರದಾಡುತ್ತಿದೆ. ಆಡಿದ ಐದು ಪಂದ್ಯಗಳ ಪೈಕಿ ರಹಾನೆ ನೇತೃತ್ವದ ಕೆಕೆಆರ್ ತಂಡವು ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿದೆ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲೂ ಕೆಕೆಆರ್ ತಂಡ ಹೀನಾಯ ಸೋಲು ಅನುಭವಿಸಿದೆ. ಇದರ ಬೆನ್ನಲ್ಲೇ ಬಿಸಿಸಿಐ, ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆಗೆ ಬರೋಬ್ಬರಿ 12 ಲಕ್ಷ ರುಪಾಯಿ ದಂಡ ವಿಧಿಸಿದೆ.

ಮಂಗಳವಾರ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ತಂಡವು ನಿಧಾನಗತಿಯ ಬೌಲಿಂಗ್ ನಡೆಸುವ ಮೂಲಕ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿತ್ತು. ಹೀಗಾಗಿ ಬಿಸಿಸಿಐ ಕೆಕೆಆರ್ ತಂಡದ ನಾಯಕನಿಗೆ ದಂಡದ ಶಿಕ್ಷೆ ವಿಧಿಸಿದೆ.

ಮೂರು ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಕೋಲ್ಕತಾ ನೈಟ್ ರೈಡರ್ಸ್, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ನಿಯಮ ಉಲ್ಲಂಘನೆ ಮಾಡಿದೆ. ಇದು 19ನೇ ಸೀಸನ್‌ನಲ್ಲಿ ಕೆಕೆಆರ್ ತಂಡವು ಮಾಡುತ್ತಿರುವ ಮೊದಲ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದರಿಂದ ನಾಯಕನಿಗೆ ಮಾತ್ರ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ನಾಲ್ಕನೇ ತಂಡ ಕೆಕೆಆರ್!

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಇದುವರೆಗೂ ಯಶಸ್ವಿಯಾಗಿ 22 ಪಂದ್ಯಗಳು ಮುಕ್ತಾಯವಾಗಿವೆ. ಈ ಪೈಕಿ ನಿಧಾನಗತಿಯ ಬೌಲಿಂಗ್‌ ನಡೆಸಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ನಾಲ್ಕನೇ ತಂಡ ಎನ್ನುವ ಕುಖ್ಯಾತಿಗೆ ಇದೀಗ ಕೆಕೆಆರ್ ತಂಡ ಪಾತ್ರವಾಗಿದೆ. ಈಗಾಗಲೇ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಎರಡು ಬಾರಿ ನಿಧಾನಗತಿಯ ಬೌಲಿಂಗ್ ನಡೆಸಿ ದಂಡ ತೆತ್ತಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ಬಾರಿ ನಿಧಾನಗತಿಯ ಬೌಲಿಂಗ್ ನಡೆಸಿದ ತಪ್ಪಿಗೆ ದಂಡ ತೆತ್ತಿದ್ದಾರೆ.

ಐಪಿಎಲ್‌ ನಿಯಮಾವಳಿಯಲ್ಲಿ ಮಹತ್ವದ ಬದಲಾವಣೆ:

ಅಂದಹಾಗೆ ಈ ಮೊದಲು ಮೂರು ಬಾರಿ ತಂಡವೊಂದು ಮಂಧಗತಿಯಲ್ಲಿ ಬೌಲಿಂಗ್ ನಡೆಸುವ ಮೂಲಕ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದರೆ ಮುಂದಿನ ಒಂದು ಪಂದ್ಯದ ಮಟ್ಟಿಗೆ ನಾಯಕ ಆ ಪಂದ್ಯದಿಂದ ಹೊರಗುಳಿಯಬೇಕಾಗುತ್ತಿತ್ತು. ಆದರೆ ಹೊಸದಾಗಿ ಐಪಿಎಲ್ ನಿಯಮಾವಳಿಗಳನ್ನು ಪರಿಷ್ಕರಿಸಲಾಗಿದ್ದು, ನಾಯಕ ಬ್ಯಾನ್ ಆಗುವ ನಿಯಮವನ್ನು ತೆಗೆದು ಹಾಕಲಾಗಿದೆ.

ಅಭಿಷೇಕ್ ಶರ್ಮಾಗೂ ಬಿಸಿ ಮುಟ್ಟಿಸಿದ ಬಿಸಿಸಿಐ!

ಇನ್ನು ಕೋಲ್ಕತಾ ನೈಟ್ ರೈಡರ್ಸ್ ಎದುರಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಅಭಿಷೇಕ್ ಶರ್ಮಾ ಅನುಚಿತ ವರ್ತನೆ ಮಾಡಿದ ತಪ್ಪಿಗೆ ಪಂದ್ಯದ ಸಂಭಾವನೆಯ 25% ದಂಡವನ್ನು ಬಿಸಿಸಿಐ ವಿಧಿಸಿದೆ. ಆದರೆ ಯಾವ ಪ್ರಕರಣಕ್ಕೆ ದಂಡ ವಿಧಿಸಿದೆ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಚೆನ್ನೈ-ಕೆಕೆಆರ್ ನಡುವಿನ ಮ್ಯಾಚ್ ಹೇಗಿತ್ತು?

2024ರ ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಪಾತಾಳಕ್ಕೆ ಕುಸಿದಿದ್ದು, ಸಿಎಸ್‌ಕೆ ಎದುರು ಗೆಲುವಿನ ಖಾತೆ ತೆರೆಯಬಹುದು ಎನ್ನುವ ನಿರೀಕ್ಷೆ ಕೂಡಾ ಹುಸಿಯಾಗಿದೆ. ಕೆಕೆಆರ್ ಎದುರು ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು 32 ರನ್ ಅಂತರದ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ತಂಡವು 5 ವಿಕೆಟ್ ಕಳೆದುಕೊಂಡು 192 ರನ್ ಕಲೆ ಹಾಕಿತು. ಇನ್ನು ಗುರಿ ಬೆನ್ನತ್ತಿದ ಕೆಕೆಆರ್ ತಂಡವು 7 ವಿಕೆಟ್ ಕಳೆದುಕೊಂಡು 160 ರನ್ ಗಳಿಸಲಷ್ಟೇ ಶಕ್ತವಾಯಿತು.



Source link

Leave a Reply

Your email address will not be published. Required fields are marked *