Bengaluru Tragic incident: ಮಗುವಿಗೆ ವಿಷ ನೀಡಿ ತಾನೂ ಸೇವಿಸಿ ಆತ್ಮಹತ್ಯೆಗೆ ಮುಂದಾದ ತಾಯಿ! ಕಂದ ಸಾವು, ಹೆತ್ತವಳು ಆಸ್ಪತ್ರೆಗೆ ದಾಖಲು! | Bengaluru Family Feud Mother And Child Attempt To Drink Poison Rav

Bengaluru Tragic incident: ಮಗುವಿಗೆ ವಿಷ ನೀಡಿ ತಾನೂ ಸೇವಿಸಿ ಆತ್ಮಹತ್ಯೆಗೆ ಮುಂದಾದ ತಾಯಿ! ಕಂದ ಸಾವು, ಹೆತ್ತವಳು ಆಸ್ಪತ್ರೆಗೆ ದಾಖಲು! | Bengaluru Family Feud Mother And Child Attempt To Drink Poison Rav



Bengaluru Tragic incident: ಮಗುವಿಗೆ ವಿಷ ನೀಡಿ ತಾನೂ ಸೇವಿಸಿ ಆತ್ಮಹತ್ಯೆಗೆ ಮುಂದಾದ ತಾಯಿ! ಕಂದ ಸಾವು, ಹೆತ್ತವಳು ಆಸ್ಪತ್ರೆಗೆ ದಾಖಲು! | Bengaluru Family Feud Mother And Child Attempt To Drink Poison Rav

ಬ್ಯಾಡರಹಳ್ಳಿಯಲ್ಲಿ ಹಣಕಾಸಿನ ಸಮಸ್ಯೆ ಮತ್ತು ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮಗುವಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ದುರದೃಷ್ಟವಶಾತ್ ಮಗು ಮೃತಪಟ್ಟಿದ್ದು, ತಾಯಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬೆಂಗಳೂರು (ಜು.31): ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಿನ್ನೆ ಸಂಜೆ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ 24 ವರ್ಷದ ಚಂದ್ರಿಕಾ ಎಂಬ ತಾಯಿ ತನ್ನ ಒಂದು ವರ್ಷ ಎಂಟು ತಿಂಗಳ ಮಗು ಚಾರ್ವಿಗೆ ಟೀಗೆ ಇಲಿಪಾಷಾಣ ಬೆರೆಸಿ ಕುಡಿಸಿ, ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಈ ಘಟನೆಯಲ್ಲಿ ಮಗು ಚಾರ್ವಿ ಮೃತಪಟ್ಟಿದ್ದು, ಚಂದ್ರಿಕಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಣಕಾಸಿನ ಸಮಸ್ಯೆ ಮತ್ತು ಕುಟುಂಬದ ಜಗಳದಿಂದ ಬೇಸತ್ತ ಚಂದ್ರಿಕಾ, ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಚಂದ್ರಿಕಾ ತನ್ನ ಗಂಡ ಯೋಗೇಶ್‌ನೊಂದಿಗೆ ಹಣಕಾಸಿನ ವಿಚಾರಕ್ಕೆ ದಿನನಿತ್ಯ ಜಗಳದಿಂದ ಬೇಸತ್ತ ಹಿನ್ನೆಲೆಯಲ್ಲಿ ಈ ದಾರುಣ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಘಟನೆಯ ಸಂದರ್ಭದಲ್ಲಿ ಯೋಗೇಶ್ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾಗ ಚಂದ್ರಿಕಾ ಈ ಕೃತ್ಯಕ್ಕೆ ಮುಂದಾಗಿದ್ದಾಳೆ. ನಂತರ ಚಂದ್ರಿಕಾ ತನ್ನ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಕೂಡಲೇ ಮನೆಗೆ ಧಾವಿಸಿದ ಯೋಗೇಶ್, ಪತ್ನಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಚಾರ್ವಿ ಮೃತಪಟ್ಟಿದ್ದಾಳೆ.

ಸದ್ಯ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.



Source link

Leave a Reply

Your email address will not be published. Required fields are marked *