ಹಾವೇರಿ ಕಾಲೇಜಿನಲ್ಲಿ ಮತ್ತೆ ಕೇಸರಿ-ಹಿಜಾಬ್ ಕಿಡಿ! ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು! | Haveri Hijab Saffron Shawl Controversy Students Protest At Akki Alur College Sat

ಹಾವೇರಿ ಕಾಲೇಜಿನಲ್ಲಿ ಮತ್ತೆ ಕೇಸರಿ-ಹಿಜಾಬ್ ಕಿಡಿ! ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು! | Haveri Hijab Saffron Shawl Controversy Students Protest At Akki Alur College Sat



ಹಾವೇರಿ ಕಾಲೇಜಿನಲ್ಲಿ ಮತ್ತೆ ಕೇಸರಿ-ಹಿಜಾಬ್ ಕಿಡಿ! ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು! | Haveri Hijab Saffron Shawl Controversy Students Protest At Akki Alur College Sat

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಮತ್ತೆ ಭುಗಿಲೆದ್ದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಿದ್ದಾರೆ.

ಹಾವೇರಿ (ಡಿ.04): ಹಾವೇರಿ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಮತ್ತೆ ಭುಗಿಲೆದ್ದಿದೆ. ಹಾನಗಲ್ ತಾಲೂಕಿನ ಅಕ್ಕಿಆಲೂರು ಪಟ್ಟಣದಲ್ಲಿರುವ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈಗ ವಿವಾದದ ಕೇಂದ್ರಬಿಂದುವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರು ನಿತ್ಯವೂ ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದಕ್ಕೆ ಪ್ರತಿಯಾಗಿ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಹಾಜರಾಗಿದ್ದು, ವಾತಾವರಣ ಉದ್ವಿಗ್ನಗೊಂಡಿದೆ.

ಹಿಜಾಬ್‌ಗೆ ಪ್ರತೀಕಾರವಾಗಿ ಕೇಸರಿ ಶಾಲು ಧಾರಣೆ

ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಕಳೆದ ಸಾಕಷ್ಟು ದಿನಗಳಿಂದ ನಿತ್ಯವೂ ಹಿಜಾಬ್ ಧರಿಸಿ ಬರುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಲೇಜು ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಹಿಂದೂ ವಿದ್ಯಾರ್ಥಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸತ್ತ ನೂರಾರು ಸಂಖ್ಯೆಯ ಹಿಂದೂ ವಿದ್ಯಾರ್ಥಿಗಳು ಇಂದು (ಡಿ.04) ಕೇಸರಿ ಶಾಲುಗಳನ್ನು ಧರಿಸಿ ಕಾಲೇಜಿಗೆ ಬಂದರು. ವಿದ್ಯಾರ್ಥಿಗಳು ಈ ಕೇಸರಿ ಶಾಲುಗಳನ್ನು ಕೇವಲ ಕಾಲೇಜು ಆವರಣದಲ್ಲಿ ಮಾತ್ರವಲ್ಲದೆ, ನೇರವಾಗಿ ಕ್ಲಾಸ್ ರೂಮ್‌ನಲ್ಲೂ ಧರಿಸಿ ಕುಳಿತಿರುವುದು ವಿವಾದದ ತೀವ್ರತೆಯನ್ನು ಹೆಚ್ಚಿಸಿದೆ.

ಸರ್ಕಾರದ ಆದೇಶಕ್ಕೆ ಎದುರಾದ ಸವಾಲು

ಕಳೆದ ವರ್ಷ ರಾಜ್ಯದಲ್ಲಿ ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಂತಿಮವಾಗಿ ಸರ್ಕಾರವು ಶಾಲಾ-ಕಾಲೇಜುಗಳ ಆವರಣದಲ್ಲಿ ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶದ ಹೊರತಾಗಿಯೂ ಅಕ್ಕಿಆಲೂರು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಇದನ್ನು ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದಿದ್ದಾಗ, ಹಿಂದೂ ವಿದ್ಯಾರ್ಥಿಗಳು ಪ್ರತೀಕಾರವಾಗಿ ಕೇಸರಿ ಶಾಲುಗಳನ್ನು ಧರಿಸಿ ಬಂದಿದ್ದಾರೆ. ಈ ಬೆಳವಣಿಗೆಯು ರಾಜ್ಯದಲ್ಲಿ ಮತ್ತೆ ಕೋಮು ಸೂಕ್ಷ್ಮತೆಯನ್ನು ಕೆರಳಿಸಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಮವಸ್ತ್ರ (Uniform) ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಒತ್ತಾಯ ಕೇಳಿಬಂದಿದೆ.

ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ?

ವಿದ್ಯಾರ್ಥಿಗಳ ಪ್ರತಿಭಟನೆಯ ಹಿಂದಿನ ಮುಖ್ಯ ಕಾರಣ, ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಎಂದು ತಿಳಿದುಬಂದಿದೆ. ಹಿಜಾಬ್ ಧಾರಣೆ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದರೂ, ಆಡಳಿತ ಮಂಡಳಿ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನಿದ್ದ ಕಾರಣದಿಂದಾಗಿ, ಹಿಂದೂ ವಿದ್ಯಾರ್ಥಿಗಳು ಈ ರೀತಿಯ ಪ್ರತಿಭಟನೆಯ ಮಾರ್ಗವನ್ನು ಅನುಸರಿಸಿದ್ದಾರೆ. ಈಗ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿ ತುರ್ತಾಗಿ ಸಭೆ ಕರೆದು, ವಿದ್ಯಾರ್ಥಿಗಳೊಂದಿಗೆ ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಿ, ಸರ್ಕಾರದ ಸಮವಸ್ತ್ರ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅನಿವಾರ್ಯತೆ ಎದುರಾಗಿದೆ. ಪರಿಸ್ಥಿತಿ ಕೈಮೀರಿ ಹೋಗದಂತೆ ಪೊಲೀಸರು ಕೂಡ ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಬೇಕಿದೆ.

ದೊಡ್ಡ ವಿವಾದವಾಗಿದ್ದ ಹಿಜಾಬ್ ಧಾರಣೆ:

ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುದಕ್ಕೆ ಹೋಗುವುದನ್ನು ಹಿಂದಿನ ಬಿಜೆಪಿ ಸರ್ಕಾರ ನಿಷೇಧಿಸಿತ್ತು. ಇದಾದ ನಂತರ ಉಡುಪಿ, ಮಂಗಳೂರಿನ ಭಾಗದ ಕೆಲವು ಮಹಿಳಾ ವಿದ್ಯಾರ್ಥಿಗಳು ಕಾಲೇಜು ಪರೀಕ್ಷೆ ಬರಯುವುದರಿಂದ ದೂರ ಉಳಿದಿದ್ದರು. ಇದಾದ ನಂತರ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್‌ನಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದು ಸಮವಸ್ತ್ರ ಧರಿಸುವುದು ಕಡ್ಡಾಯ ಎಂದು ಹೇಳಿತು. ಇನ್ನು ಮುಂದುವರೆದು ಸ್ಥಳೀಯವಾಗಿ ಸಮಿತಿ ರಚಿಸಿ ಸ್ಥಾನಿಕವಾಗಿ ಕೈಗೊಳ್ಳುವ ತೀರ್ಮಾನವನ್ನು ಪಾಲಿಸುವುದಕ್ಕೆ ಅನುಮತಿ ಕೊಡಲಾಗಿದೆ. ಇನ್ನು ಸುಪ್ರೀಂ ಕೋರ್ಟ್ ವರೆಗೂ ಈ ಪ್ರಕರಣ ಮೆಟ್ಟಿಲೇರಿದ್ದು, ದ್ವಿದಸ್ಯ ಪೀಠದಲ್ಲಿಯೂ ಒಕ್ಕೂರಲ ಆದೇಶ ಬರದ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿದೆ.



Source link

Leave a Reply

Your email address will not be published. Required fields are marked *