Headlines

ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?’ ಬಿಜೆಪಿ ಶಾಸಕನ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ | Cant Ask Hens To Lay Cheap Eggs Minister Madhu Bangarappa On School Egg Price

ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?’ ಬಿಜೆಪಿ ಶಾಸಕನ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ | Cant Ask Hens To Lay Cheap Eggs Minister Madhu Bangarappa On School Egg Price



ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?’ ಬಿಜೆಪಿ ಶಾಸಕನ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ | Cant Ask Hens To Lay Cheap Eggs Minister Madhu Bangarappa On School Egg Price

ವಿಧಾನಸಭೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸುವ ಮೊಟ್ಟೆಯ ದರ ಏರಿಳಿತದ ಕುರಿತು ನಡೆದ ಚರ್ಚೆಯಲ್ಲಿ, ದರ ನಿಯಂತ್ರಣದ ಸವಾಲಿನ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾರ್ಮಿಕವಾಗಿ ಉತ್ತರಿಸಿದರು. ಮೊಟ್ಟೆ ದರವನ್ನು ಸ್ಥಿರವಾಗಿರಿಸಲು ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಸಭೆ (ಡಿ.18): ವಿಧಾನಸಭಾ ಅಧಿವೇಶನದಲ್ಲಿ ಇಂದು ಶಾಲಾ ಮಕ್ಕಳಿಗೆ ವಿತರಿಸುವ ಮೊಟ್ಟೆಯ ದರದ ಕುರಿತು ಶಾಸಕ ಹರೀಶ್ ಪೂಂಜಾ ಅವರು ಪ್ರಶ್ನೆ ಎತ್ತಿದರು. ಮಾರುಕಟ್ಟೆಯಲ್ಲಿ ಮೊಟ್ಟೆ ದರ ಏರಿಳಿತವಾಗುತ್ತಿರುವುದರಿಂದ ಶಾಲೆಗಳಲ್ಲಿ ವಿತರಣೆಗೆ ತೊಂದರೆಯಾಗುತ್ತಿದೆ ಎಂಬ ವಿಷಯ ಸದನದ ಗಮನಕ್ಕೆ ಬಂತು. ಈ ವೇಳೆ ಮಾತನಾಡಿದ ಸ್ಪೀಕರ್ ಹಾಗೂ ಇತರ ಸದಸ್ಯರು, ಮೊಟ್ಟೆಯ ದರವು ವರ್ಷಪೂರ್ತಿ ಒಂದೇ ರೀತಿ ಇರುವಂತೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸಲಹೆ ನೀಡಿದರು.

ನಾವು ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?

ಶಾಸಕರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಮೊಟ್ಟೆ ದರದ ಬಗ್ಗೆ ನನಗೂ ಸಾಕಷ್ಟು ಒತ್ತಡಗಳು ಬಂದಿವೆ. ಪ್ರಸ್ತುತ 5 ರೂಪಾಯಿ ನೀಡಿ ಮೊಟ್ಟೆ ಖರೀದಿ ಮಾಡಲಾಗುತ್ತಿದೆ. ಆದರೆ ಮೊಟ್ಟೆ ದರವನ್ನು ನಿಯಂತ್ರಿಸುವುದು ಕಷ್ಟ ನಾವು ಕೋಳಿಗೆ ಹೋಗಿ ಚೀಪ್ ಆಗಿ (ಕಡಿಮೆ ಬೆಲೆಗೆ) ಮೊಟ್ಟೆ ಇಡು ಎಂದು ಹೇಳಲು ಆಗುವುದಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.

ಮೊಟ್ಟೆ ದರ ಹೆಚ್ಚಾಗದಂತೆ ನೋಡ್ಕೊಳ್ಳಿ: ಸ್ಪೀಕರ್

ರಾಜ್ಯದ ಮಕ್ಕಳ ಪೌಷ್ಟಿಕ ಆಹಾರಕ್ಕಾಗಿ ಅಜೀಂ ಪ್ರೇಮ್‌ಜಿ ಅವರು 1591 ಕೋಟಿ ರೂಪಾಯಿಗಳ ಬೃಹತ್ ನೆರವು ನೀಡುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್, ಇಷ್ಟು ದೊಡ್ಡ ಮೊತ್ತದ ನೆರವು ಸಿಗುತ್ತಿರುವಾಗ ಮೊಟ್ಟೆಯ ದರ ಹೆಚ್ಚಾಗದಂತೆ ಮತ್ತು ಒಂದೇ ದರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಿ ಎಂದು ಸೂಚಿಸಿದರು.

ಶಿಕ್ಷಕರ ವಿತರಣೆ ಶಿಕ್ಷಕರಿಗೆ ಹೊರೆ:

ಮೊಟ್ಟೆ ವಿತರಣೆಯ ಜವಾಬ್ದಾರಿಯಿಂದ ಶಿಕ್ಷಕರಿಗೆ ಹೊರೆಯಾಗುತ್ತಿದೆ ಎಂದು ಜೆಡಿಎಸ್ ಶಾಸಕ ಬಾಲಕೃಷ್ಣ ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಧ್ವನಿಗೂಡಿಸಿದ ನಾರಾಯಣಸ್ವಾಮಿ ಅವರು, ‘ಮೊಟ್ಟೆ ದರ ಜಾಸ್ತಿಯಾದಾಗ ಶಿಕ್ಷಕರು ಮಕ್ಕಳಿಗೆ ಮೊಟ್ಟೆ ನೀಡಲು ಕಷ್ಟಪಡುತ್ತಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ 100% ಇದ್ದಾಗ ಬಜೆಟ್ ಮತ್ತು ವಿತರಣೆಯಲ್ಲಿ ವ್ಯತ್ಯಾಸ ಉಂಟಾಗುತ್ತದೆ ಎಂದು ಸಮಸ್ಯೆಯನ್ನು ವಿವರಿಸಿದರು. ಮುಂದಿನ ದಿನಗಳಲ್ಲಿ ಮೊಟ್ಟೆ ದರ ಸ್ಥಿರವಾಗಿರುವಂತೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಶಿಕ್ಷಣ ಕ್ಷೇತ್ರದ ಚರ್ಚೆಗೆ ಎರಡು ದಿನ ಮೀಸಲಿಡಲು ಪಕ್ಷಾತೀತ ಒತ್ತಾಯ

ಶಿಕ್ಷಣ ಇಲಾಖೆಯ ಸಮಸ್ಯೆಗಳು ಮತ್ತು ಪರಿಹಾರಗಳ ಬಗ್ಗೆ ಚರ್ಚಿಸಲು ಕೇವಲ ಅಲ್ಪ ಸಮಯ ಸಾಕಾಗುವುದಿಲ್ಲ ಎಂದು ಬಿಜೆಪಿ ಸದಸ್ಯರಾದ ಸುರೇಶ್ ಕುಮಾರ್, ಸುರೇಶ್ ಗೌಡ ಹಾಗೂ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಸೇರಿದಂತೆ ಹಲವರು ಆಗ್ರಹಿಸಿದರು. ಶಿಕ್ಷಣ ಕ್ಷೇತ್ರದ ಸಮಗ್ರ ಸುಧಾರಣೆಗಾಗಿ ಅಧಿವೇಶನದಲ್ಲಿ ಕನಿಷ್ಠ ಎರಡು ದಿನಗಳ ಕಾಲ ಸಮಯ ಮೀಸಲಿಡಬೇಕೆಂದು ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಪಕ್ಷಾತೀತವಾಗಿ ಒತ್ತಾಯಿಸಿದರು.



Source link

Leave a Reply

Your email address will not be published. Required fields are marked *