ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ | Sculptor Ram Sutar Passed Away Who Sculpted Statue Of Unity In Gujrat

ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ | Sculptor Ram Sutar Passed Away Who Sculpted Statue Of Unity In Gujrat



ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ | Sculptor Ram Sutar Passed Away Who Sculpted Statue Of Unity In Gujrat

ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯ ಶಿಲ್ಪಿ, ಪದ್ಮವಿಭೂಷಣ ಪುರಸ್ಕೃತ ರಾಮ್ ಸುತರ್ ಅವರು ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸರ್ದಾರ್ ಪಟೇಲ್ ಪ್ರತಿಮೆಯಲ್ಲದೆ, ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಮತ್ತು ಶಿವಾಜಿ ಪ್ರತಿಮೆಗಳಂತಹ ಅನೇಕ ಸ್ಮರಣೀಯ ಕಲಾಕೃತಿಗಳನ್ನು ಅವರು ರಚಿಸಿದ್ದರು.

ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಗಳಿಸಿದ ಭಾರತದ ಏಕತಾ ಪ್ರತಿಮೆಯನ್ನು ಕೆತ್ತಿದ್ದ ಹಿರಿಯ ಶಿಲ್ಪಿ ರಾಮ್‌ ಸುತರ್ ಅವರು ನಿಧನರಾಗಿದ್ದಾರೆ. ಗುಜರಾತ್‌ನಲ್ಲಿರುವ ಸರ್ದಾರ್ ವಲ್ಲಭಬಾಯ್ ಪಟೇಲ್‌ ಅವರ ಸ್ಮರಣಾರ್ಥ ನಿರ್ಮಾಣವಾಗಿದ್ದ ಏಕತಾ ಪ್ರತಿಮೆಯನ್ನು ರಾಮ್ ಸುತರ್ ಅವರು ಕೆತ್ತನೆ ಮಾಡಿದ್ದರು. ಬುಧವಾರ ತಡರಾತ್ರಿ ನೋಯ್ಡಾದಲ್ಲಿರುವ ಅವರ ಮನೆಯಲ್ಲಿ ರಾಮ್ ಸುತರ್ ಅವರು ನಿಧನರಾಗಿದ್ದಾರೆ ಎಂದು ಅವರ ಪುತ್ರ ತಿಳಿಸಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ಅವರು ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಬಹಳ ವಿಷಾದ ಹಾಗೂ ದುಃಖದೊಂದಿಗೆ ನಮ್ಮ ತಂದೆ ಶ್ರೀ ರಾಮ್ ವಂಜಿ ಸುತರ್ ಅವರು ಡಿಸೆಂಬರ್ 17ರ ಮಧ್ಯರಾತ್ರಿ ನೋಯ್ಡಾದ ನಮ್ಮ ಮನೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸುತ್ತಿದ್ದೇವೆ ಎಂದು ಇವರ ಪುತ್ರ ಅನಿಲ್ ಸುತರ್ ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.

ರಾಮ್ ಸುತರ್ ಅವರು ಪ್ರಸ್ತುತ ಮಹಾರಾಷ್ಟ್ರದಲ್ಲಿರುವ ಧುಲೆ ಜಿಲ್ಲೆಯ ಗೊಂಡುರ್ ಗ್ರಾಮದ ಸುಸಂಸ್ಕೃತ ಕುಟುಂಬದಲ್ಲಿ 1925ರ ಫೆಬ್ರವರಿ 19ರಂದು ಜನಿಸಿದ್ದರು. ಬಾಲ್ಯದಿಂದಲೂ ಅವರಿಗೆ ಕೆತ್ತನೆಯಲ್ಲಿ ವಿಶೇಷವಾದ ಆಸಕ್ತಿ ಇತ್ತು. ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ & ಅರ್ಕಿಟೆಕ್ಚರ್‌ನಲ್ಲಿ ಚಿನ್ನದ ಪದಕ ಗಳಿಸಿದ ರಾಮ್ ಸುತರ್ ಅವರ ಸಾಧನೆಯ ಉದ್ದವಾದ ಪಟ್ಟಿಯೇ ಇದೆ. ಸಂಸತ್ ಆವರಣದಲ್ಲಿರುವ ಧ್ಯಾನದ ಸ್ಥಿತಿಯಲ್ಲಿರುವ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಐತಿಹಾಸಿಕ ಪ್ರತಿಮೆ ಹಾಗೂ ಛತ್ರಪತಿ ಶಿವಾಜಿ ಕುದುರೆ ಓಡಿಸುತ್ತಿರುವಂತಹ ಪ್ರತಿಮೆ ಅವರ ಅದ್ಭುತ ಕಲಾ ಕೆತ್ತನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಜ್ಯೂಸ್ ಕೊಡಿಸ್ತಿನಿ ಎಂದು ಕರೆದೊಯ್ದು ಹಲವು ಅಪ್ರಾಪ್ತರ ಮೇಲೆ 45 ವರ್ಷದ ಕಾಮುಕನಿಂದ ಅತ್ಯಾ*ಚಾರ

ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹಸಚಿವರಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಸ್ಮರಣಾರ್ಥ ನಿರ್ಮಾಣವಾದ ಏಕತಾ ಪ್ರತಿಮೆಯೂ ಕೂಡ ಇವರದ್ದೇ ಒಂದು ಅದ್ಭುತ ಕೊಡುಗೆಯಾಗಿದೆ. ವಾಸ್ತುಶಿಲ್ಪ ಹಾಗೂ ಶಿಲ್ಪಗಳ ಕೆತ್ತನೇ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗಾಗಿ 1999ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಹಾಗೆಯೇ 2016ರಲ್ಲಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದರ ಜೊತೆಗೆ ಮಾರಾಷ್ಟ್ರ ರಾಜ್ಯದ ಅತ್ಯುನ್ನತ ಪುರಸ್ಕಾರವಾದ ಮಹಾರಾಷ್ಟ್ರ ಭೂಷಣ ಪುರಸ್ಕಾರವನ್ನು ಅವರಿಗೆ ಇತ್ತಿಚೆಗೆ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ: ಪುಸ್ತಕ ಪಕ್ಕಕ್ಕಿಟ್ಟು ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್



Source link

Leave a Reply

Your email address will not be published. Required fields are marked *