Headlines

ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ; ಖರ್ಗೆ ಮಾತಿಗೆ ಕೆಂಡಾಮಂಡಲರಾದ HD ದೇವೇಗೌಡ | We Have Been Betrayed By The Congress Party Hd Deve Gowda Furious At Mallikarjun Kharge S Remarks Mrq

ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ; ಖರ್ಗೆ ಮಾತಿಗೆ ಕೆಂಡಾಮಂಡಲರಾದ HD ದೇವೇಗೌಡ | We Have Been Betrayed By The Congress Party Hd Deve Gowda Furious At Mallikarjun Kharge S Remarks Mrq



ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ; ಖರ್ಗೆ ಮಾತಿಗೆ ಕೆಂಡಾಮಂಡಲರಾದ HD ದೇವೇಗೌಡ | We Have Been Betrayed By The Congress Party Hd Deve Gowda Furious At Mallikarjun Kharge S Remarks Mrq

ತಮ್ಮ ಮತ್ತು ಮೋದಿ ಮೈತ್ರಿ ಕುರಿತು ಮಲ್ಲಿಕಾರ್ಜುನ ಖರ್ಗೆಯವರ ‘ಪ್ರೀತಿ-ಮದುವೆ’ ಟೀಕೆಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 2014ರಿಂದಲೇ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯವಿದೆ ಎಂದು ಹೇಳಿದ್ದಾರೆ.

ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆ ಆದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ನೀಡಿದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ದೇವೇಗೌಡರು, ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು.

2014ರಲ್ಲಿಯೇ ನಮ್ಮ ಮೈತ್ರಿ ಆರಂಭ

ನಿಜ ಹೇಳಬೇಕು ಎಂದರೆ, ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ದೇವೇಗೌಡರು ಹೇಳಿದರು.

ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು.

2018ರಲ್ಲಿ ಕಾಂಗ್ರೆಸ್ ಪಕ್ಷದ ಜತೆ ನಮ್ಮ ಪಕ್ಷ ಮೈತ್ರಿ ಹೊಂದಿದ್ದ ಕಾರಣಕ್ಕೆ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಸಿಎಂ ಆಗದಂತೆ ತಡೆಯಿತು. ಆಗ ಮತ್ತೆ ಮನೆ ಬಾಗಿಲಿಗೆ ಬಂದು ಮೈತ್ರಿ ಹಸ್ತ ಚಾಚಿದ ಕಾಂಗ್ರೆಸ್, ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವಂತೆ ಒತ್ತಡ ಹೇರಿತು. ಮತ್ತೆ ಒಂದೇ ವರ್ಷದಲ್ಲಿ ಕಾಂಗ್ರೆಸ್ ನಮಗೆ ದ್ರೋಹ ಬಗೆಯಿತು. ಈ ಎಲ್ಲಾ ವಿವರಗಳು ಖರ್ಗೆ ಅವರಿಗೆ ಗೊತ್ತಿವೆ ಎಂದು ದೇವೇಗೌಡರು ಹೇಳಿದರು.

1962ರಲ್ಲಿ ನಾನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡುವುದಾಗಿ ಹೇಳಿತ್ತು. ನೀಲಂ ಸಂಜೀವರೆಡ್ಡಿ ಅವತ್ತಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಆದರೆ, ನನಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತು ಎಂದು ಸ್ಮರಿಸಿದರು.

ಕಾಂಗ್ರೆಸ್ ಪಕ್ಷದಿಂದ ದ್ರೋಹ

ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ, ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ ಎಂದು ದೇವೇಗೌಡರು ಹೇಳಿದರು.

ಈ ಸಂದರ್ಭದಲ್ಲಿ ತಮ್ಮ ಕಾಲದ ಕರ್ನಾಟಕ ರಾಜ್ಯದ ರಾಜಕಾರಣವನ್ನು ಮೆಲುಕು ಹಾಕಿದ ಮಾಜಿ ಪ್ರಧಾನಿಗಳು, ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಅವರು ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗಿದ್ದೆವು ಎಂದು ಟೀಕಾ ಪ್ರಹಾರ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂದು ನಾವೆಲ್ಲರೂ ಆಶಿಸಿದ್ದೆವು. ಆದರೆ, ಅವರ ಸ್ವಂತ ಪಕ್ಷವೇ ಅವರನ್ನು ಸಿಎಂ ಆಗಲು ಬಿಡಲಿಲ್ಲ ಎಂದೂ ಮಾಜಿ ಪ್ರಧಾನಿಗಳು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.



Source link

Leave a Reply

Your email address will not be published. Required fields are marked *