Headlines

ಶ್ರೇಯಸ್ ಅಯ್ಯರ್ ಗಾಯದ ಕುರಿತಂತೆ ಮಹತ್ವದ ಅಪ್‌ಡೇಟ್ ಕೊಟ್ಟ ಬಿಸಿಸಿಐ! ಐಸಿಯುನಿಂದ ಶಿಫ್ಟ್ | Shreyas Iyer Shifted Out Of Icu Bcci Confirms Steady Improvement Kvn

ಶ್ರೇಯಸ್ ಅಯ್ಯರ್ ಗಾಯದ ಕುರಿತಂತೆ ಮಹತ್ವದ ಅಪ್‌ಡೇಟ್ ಕೊಟ್ಟ ಬಿಸಿಸಿಐ! ಐಸಿಯುನಿಂದ ಶಿಫ್ಟ್ | Shreyas Iyer Shifted Out Of Icu Bcci Confirms Steady Improvement Kvn



ಶ್ರೇಯಸ್ ಅಯ್ಯರ್ ಗಾಯದ ಕುರಿತಂತೆ ಮಹತ್ವದ ಅಪ್‌ಡೇಟ್ ಕೊಟ್ಟ ಬಿಸಿಸಿಐ! ಐಸಿಯುನಿಂದ ಶಿಫ್ಟ್ | Shreyas Iyer Shifted Out Of Icu Bcci Confirms Steady Improvement Kvn

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದ ಭಾರತೀಯ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರ ಗುಲ್ಮದಲ್ಲಿ ಗಾಯವಾಗಿರುವುದು ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾಗಿದೆ. ಸದ್ಯ ತೀವ್ರ ನಿಗಾ ಘಟಕದಿಂದ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದ ಭಾರತೀಯ ಆಟಗಾರ ಶ್ರೇಯಸ್ ಅಯ್ಯರ್ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಶ್ರೇಯಸ್ ಅವರ ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ. ವೈದ್ಯರ ನಿಗಾದಲ್ಲಿರುವ ಶ್ರೇಯಸ್, ಇನ್ನೂ ಒಂದು ವಾರ ಸಿಡ್ನಿಯ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಈ ಮಧ್ಯೆ, ಶ್ರೇಯಸ್ ಅವರ ಪೋಷಕರು ಸಿಡ್ನಿಗೆ ಬರಲು ತುರ್ತು ವೀಸಾಗಾಗಿ ಬಿಸಿಸಿಐ ಅನ್ನು ಸಂಪರ್ಕಿಸಿದ್ದಾರೆ.

ಶ್ರೇಯಸ್ ಅಯ್ಯರ್ ಗಾಯದ ಬಗ್ಗೆ ಬಿಸಿಸಿಐ ಮಹತ್ವದ ಅಪ್‌ಡೇಟ್

ಶ್ರೇಯಸ್ ಅವರ ಗಾಯದ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಹೇಳಿಕೆ ಪ್ರಕಟಿಸಿದ್ದು, ‘ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಯತ್ನಿಸುವಾಗ ಬಿದ್ದು ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿನ ಬಳಿ ಗಾಯವಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ಮಾಡಿದಾಗ ಅವರ ಗುಲ್ಮದಲ್ಲಿ (spleen) ಗಾಯವಾಗಿರುವುದು ಪತ್ತೆಯಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ಅವರ ಆರೋಗ್ಯದಲ್ಲಿ ಈಗ ಸುಧಾರಣೆ ಕಂಡುಬಂದಿದ್ದು, ಆತಂಕಪಡುವ ಅಗತ್ಯವಿಲ್ಲ’ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

Scroll to load tweet…

ಸಿಡ್ನಿಯ ಆಸ್ಪತ್ರೆಯ ತಜ್ಞ ವೈದ್ಯರೊಂದಿಗೆ ಬಿಸಿಸಿಐ ವೈದ್ಯಕೀಯ ತಂಡ ಮತ್ತು ಭಾರತದ ವೈದ್ಯರು ಶ್ರೇಯಸ್ ಅಯ್ಯರ್ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಶ್ರೇಯಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವವರೆಗೂ ಭಾರತ ತಂಡದ ವೈದ್ಯರು ಸಿಡ್ನಿಯಲ್ಲಿಯೇ ಇರುತ್ತಾರೆ ಎಂದು ಬಿಸಿಸಿಐ ತಿಳಿಸಿದೆ. ಆಂತರಿಕ ರಕ್ತಸ್ರಾವದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅವರ ಆರೋಗ್ಯದ ಬಗ್ಗೆ ಈ ಹಿಂದೆ ಬಂದ ವರದಿಗಳು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದವು.

ಮೂರನೇ ಏಕದಿನ ಪಂದ್ಯದಲ್ಲಿ ಗಾಯಗೊಂಡ ಶ್ರೇಯಸ್ ಅಯ್ಯರ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಹಿಡಿಯಲು ಹಿಂದಕ್ಕೆ ಓಡುವಾಗ ಶ್ರೇಯಸ್ ಅಯ್ಯರ್ ಕೆಳಗೆ ಬಿದ್ದರು. ಕ್ಯಾಚ್ ಪೂರ್ಣಗೊಳಿಸಿದ ನಂತರ, ಪಕ್ಕೆಲುಬಿನ ನೋವಿನಿಂದಾಗಿ ಅವರು ಮೈದಾನವನ್ನು ತೊರೆದರು ಮತ್ತು ನಂತರ ಬ್ಯಾಟಿಂಗ್‌ಗೆ ಇಳಿಯುವ ಪರಿಸ್ಥಿತಿ ಬರಲಿಲ್ಲ. ಡ್ರೆಸ್ಸಿಂಗ್ ರೂಮ್‌ಗೆ ಬಂದ ನಂತರ ರಕ್ತದೊತ್ತಡ ಕಡಿಮೆಯಾದ ಕಾರಣ ಅವರನ್ನು ಹೆಚ್ಚಿನ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಂತರಿಕ ರಕ್ತಸ್ರಾವ ಪತ್ತೆಯಾಯಿತು. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಭಾರತ ತಂಡದ ಉಪನಾಯಕರಾಗಿದ್ದರು. ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೂಡಿ ಅರ್ಧಶತಕ ಗಳಿಸಿ ಬ್ಯಾಟಿಂಗ್‌ನಲ್ಲೂ ಮಿಂಚಿದ್ದರು.



Source link

Leave a Reply

Your email address will not be published. Required fields are marked *