Headlines

Vastu tips:ದೇಗುಲದಲ್ಲಿರಬೇಕಾದ ಕೀರ್ತಿಮುಖವನ್ನು ತಪ್ಪಿಯೂ ಮನೆಯ ಮುಂದೆ ನಿಲ್ಲಿಸಬೇಡಿ! | Vastu Tips Not Install Kirthimukha Face In Front Of Your Home Bni

Vastu tips:ದೇಗುಲದಲ್ಲಿರಬೇಕಾದ ಕೀರ್ತಿಮುಖವನ್ನು ತಪ್ಪಿಯೂ ಮನೆಯ ಮುಂದೆ ನಿಲ್ಲಿಸಬೇಡಿ! | Vastu Tips Not Install Kirthimukha Face In Front Of Your Home Bni



Vastu tips:ದೇಗುಲದಲ್ಲಿರಬೇಕಾದ ಕೀರ್ತಿಮುಖವನ್ನು ತಪ್ಪಿಯೂ ಮನೆಯ ಮುಂದೆ ನಿಲ್ಲಿಸಬೇಡಿ! | Vastu Tips Not Install Kirthimukha Face In Front Of Your Home Bni

ದೇವಾಲಯಗಳಲ್ಲಿ ಕಂಡುಬರುವ ಭಯಾನಕ ರಾಕ್ಷಸ ಮುಖದ ಹಿಂದೆ ಸ್ವಾರಸ್ಯಕರ ಕತೆಯಿದೆ. ಆದರೆ ಇದು ದೇವಾಲಯದಲ್ಲೇ ಇರಬೇಕು. ವಾಸ್ತು (Vastu tips) ಪ್ರಕಾರ , ಮನೆಯಲ್ಲಿ ಕೀರ್ತಿಮುಖ ಇಡುವುದು ಶುಭವಲ್ಲ. ಅದೇಕೆ? 

ಸಾಮಾನ್ಯವಾಗಿ ಯಾವುದೇ ದೇವಾಲಯದಲ್ಲಿ ಕಂಡುಬರುವ ರಾಕ್ಷಸನ ಮುಖವಿದು. ಇತ್ತೀಚೆಗೆ ಕೆಲವರು ಇದನ್ನು ಮನೆಯ ಮೇಲ್ಬದಿಯಲ್ಲಿ, ನಿರ್ಮಾಣ ಹಂತದ ಕಟ್ಟಡಗಳ ಮುಂದೆ ನಿಲ್ಲಿಸುವುದನ್ನು (Vastu tips) ನಾವು ಕಾಣಬಹುದು. ಆದರೆ ತಪ್ಪಿಯೂ ಈ ತಪ್ಪು ಮಾಡಬೇಡಿ. ಇದರಿಂದ ತೊಂದರೆ ಖಚಿತ. ಹೇಗೆ ತೊಂದರೆ ಎಂದು ತಿಳಿಯುವ ಮೊದಲು ಇದರ ಕತೆಯೇನು ಎಂದು ತಿಳಿದುಕೊಂಡು ಬರೋಣ.

ಯಾವುದೇ ದೇಗುಲಕ್ಕೆ ಹೋಗಿ. ಗರ್ಭಗುಡಿಯಲ್ಲಿ ದೇವರ ಹಿಂಬದಿಯ ಪ್ರಭಾವಳಿಯಲ್ಲಿ ಈ ವಿಚಿತ್ರವಾದ ರಾಕ್ಷಸ ಮುಖವನ್ನು ನೀವು ಕಾಣಬಹುದು. ಕೋರೆ ದಾಡೆ ಹಾಗೂ ನಾಲಿಗೆಯನ್ನ ಚಾಚಿದ ಈ ಭಯಂಕರ ದೈತ್ಯ ಮುಖ ಅದು. ಗರ್ಭಗುಡಿಗಳಲ್ಲಿ ಮಾತ್ರವಲ್ಲ, ಕೆಲವು ಪ್ರಾಚೀನ ದೇವಾಲಯಗಳ ವಾಸ್ತು ಹಾಗೂ ಶಿಲ್ಪಶಾಸ್ತ್ರದ ಭಾಗವಾಗಿ ಗೋಪುರಗಳಲ್ಲಿ ಈ ರಾಕ್ಷಸ ಮುಖವನ್ನು ಅಲಂಕಾರಿಕ ವಸ್ತುವಾಗಿ ಬಳಸಿರುವುದನ್ನು ನೋಡಬಹುದು. ಈ ರಾಕ್ಷಸ ಮುಖವನ್ನು ನಮ್ಮ ಸಂಸ್ಕೃತಿಯಲ್ಲಿ ‘ಕೀರ್ತಿಮುಖ’ ಎಂಬ ಹೆಸರಿನಿಂದ ಕರೆಯಲಾಗಿದೆ. ಭಾರತೀಯರ ದೇಗುಲಗಳಿಗೆ ಈ ಕೀರ್ತಿಮುಖ ಹೊಸದೇನೂ ಅಲ್ಲ.

ಇದರ ಹಿಂದಿರುವ ಕತೆ ಹೀಗಿದೆ:

ಇಂಥದೊಂದು ವಿಚಿತ್ರ ಮುಖದ ಹಿಂದೆ ಬಹುದೊಡ್ಡ ಪರಂಪರೆ ಇದೆ. ರಕ್ಕಸನೊಬ್ಬನ ಮುಖ, ದೇಗುಲಗಳ ಗೋಡೆ ಹಾಗೂ ಗರ್ಭಗುಡಿಯ ಪ್ರಭಾವಳಿಯಲ್ಲಿ ಸ್ಥಾನ ಪಡೆದಿದ್ದರ ಹಿಂದೆ ಒಂದು ಕುತೂಹಲಕಾರಿ ಕಥೆಯೂ ಇದೆ. ನೀವು ಶಿವಪುರಾಣದಲ್ಲಿ ಬರುವ ಅಸುರರ ರಾಜ ಜಲಂಧರನ ಕಥೆಯನ್ನು ಓದಿರಬಹುದು. ರಾಕ್ಷಸರ ಗುರು ಶುಕ್ರಾಚಾರ್ಯರ ಪರಮ ಶಿಷ್ಯ ಆತ. ಸ್ವತಃ ಪಾರ್ವತಿಯನ್ನೇ ಮೋಹಿಸಲು ಮುಂದಾಗಿದ್ದ ಹಠಮಾರಿ ಅಸುರ ರಾಜ. ಒಂದು ದಿನ ಈ ಅಸುರ ರಾಜ, ಶಿವನ ತಲೆಯ ಮೇಲೆ ಸದಾ ತಂಪು ಸೂಸುವ ಚಂದ್ರ ಮೇಲೆ ಕಣ್ಣು ಹಾಕುತ್ತಾನೆ. ಪರಮಶಿವನ ಆಭರಣವೇ ಆಗಿರುವ ಆ ಚಂದ್ರಮನನ್ನು ಕಿತ್ತು ತರುವಂತೆ ತನ್ನ ಪರಮ ಸ್ನೇಹಿತನಾಗಿದ್ದ ರಾಹುವಿಗೆ ಆದೇಶಿಸುತ್ತಾನೆ.

ಜಲಂಧರನ ಆಜ್ಞೆಯಂತೆ ಚಂದ್ರನನ್ನು ತರಲು ಕೈಲಾಸಕ್ಕೆ ಹೊರಟ ರಾಹು, ಅದೇ ಚಂದ್ರನ ಬೆಳಕಿನಲ್ಲಿ ಧ್ಯಾನಸ್ಥನಾಗಿದ್ದ ಪರಮಶಿವನನ್ನು ನೋಡುತ್ತಾನೆ. ಶಿವನ ತಲೆಯ ಮೇಲಿರುವ ಚಂದ್ರನನ್ನು ಕಿತ್ತುಕೊಳ್ಳುವ ಅವಸರದಲ್ಲಿ ಶಿವನ ಧ್ಯಾನಕ್ಕೆ ಭಂಗವುಂಟುಮಾಡುತ್ತಾನೆ. ತನ್ನ ತಪೋಭಂಗಗೊಳಿಸಿದ ರಾಹುವಿನ ಕುಚೇಷ್ಟೆಗಳಿಂದ ಕುಪಿತನಾದ ಶಿವ, ತನ್ನ 3ನೇ ಕಣ್ಣಿನಿಂದ ಅಗ್ನಿಜ್ವಾಲೆಗಳನ್ನ ಸ್ಫೋಟಿಸಿಬಿಡುತ್ತಾನೆ. ಶಿವ ಸ್ಫೋಟಿಸಿದ ಆ ಅಗ್ನಿಜ್ವಾಲೆ ಶಿವ ಸ್ಫೋಟಿಸಿದ ಆ ಅಗ್ನಿಜ್ವಾಲೆಗಳಿಂದ ಸಿಂಹಮುಖಿ ಎಂಬ ಭಯಾನಕ ರಕ್ಕಸನೊಬ್ಬ ಹುಟ್ಟಿಕೊಳ್ಳುತ್ತಾನೆ. ಆಗ ಶಿವ, ತನ್ನ ತಪಸ್ಸಿಗೆ ಭಂಗ ತಂದ ರಾಹುವನ್ನು ನುಂಗಿಹಾಕುವಂತೆ ಆ ಸಿಂಹಮುಖಿ ರಕ್ಕಸನಿಗೆ ಆದೇಶಿಸುತ್ತಾನೆ. ಇದರಿಂದ ನಡುಗಿ ಹೋದ ರಾಹು, ತನ್ನಿಂದಾದ ಪ್ರಮಾದವನ್ನ ಕ್ಷಮಿಸುವಂತೆ ಶಿವನನ್ನು ಪರಿಪರಿಯಾಗಿ ಬೇಡಿಕೊಳ್ಳುತ್ತಾನೆ. ಶಿವನಿಂದ ಸೃಷ್ಟಿಯಾದ ಆ ಸಿಂಹಮುಖಿ ರಕ್ಕಸನಿಂದಲೂ ತನ್ನನ್ನು ರಕ್ಷಿಸುವಂತೆ ಕೇಳುತ್ತಾನೆ.

ರಾಹುವಿನ ಕ್ಷಮಾಯಾಚನೆಯಿಂದ ತಣ್ಣಗಾದ ಶಿವ, ಆತನನ್ನು ಬಿಟ್ಟುಬಿಡುವಂತೆ ಸಿಂಹಮುಖಿಗೆ ಹೇಳುತ್ತಾನೆ. ಆದರೆ ಆ ಹೊತ್ತಿಗಾಗಲೇ ಭಯಾನಕ ಹಸಿವಿನಿಂದ ಕುದ್ದುಹೋಗಿದ್ದ ಆ ಸಿಂಹಮುಖಿ, ತನ್ನ ಹಸಿವು ನೀಗಿಸಿದರೆ ಮಾತ್ರ ರಾಹುವನ್ನು ಬಿಡುವುದಾಗಿ ಹೇಳುತ್ತಾನೆ. ಆಗ ಪರಶಿವ, ‘ನಿನ್ನನ್ನೇ ನೀನು ತಿಂದು ಹಸಿವು ನೀಗಿಸಿಕೋ!’ ಎನ್ನುತ್ತಾನೆ. ಶಿವನ ಆಜ್ಞೆಯಂತೆ ಆ ಸಿಂಹಮುಖಿ ಕಾಲಿನ ಭಾಗದಿಂದ ತನ್ನನ್ನು ತಾನೇ ತಿನ್ನಲು ಆರಂಭಿಸುತ್ತಾನೆ. ಮೊದಲು ಕಾಲು, ಆನಂತರ ಹೊಟ್ಟೆ, ಎದೆಯ ಭಾಗ… ಹೀಗೆ ಒಂದೊಂದಾಗಿ ತನ್ನೆಲ್ಲ ಅವಯವಗಳನ್ನು ತಾನೇ ತಿಂದು ಮುಗಿಸಿದ ಸಿಂಹಮುಖಿ, ಕೊನೆಗೆ ಉಳಿದಿದ್ದ ತನ್ನೆರಡು ಕೈಗಳನ್ನೂ ತಿನ್ನೋದಕ್ಕೆ ಶುರುವಿಟ್ಟುಕೊಳ್ಳುತ್ತಾನೆ. ಇನ್ನೇನು ಆ ರಕ್ಕಸ ತನ್ನೆರಡು ಕೈಗಳನ್ನು ತಿಂದು ಮುಗಿಸಬೇಕು ಎನ್ನುವಷ್ಟರಲ್ಲಿ ಶಿವ, ಆ ರಕ್ಕಸನಿಗೆ ತಿನ್ನೋದನ್ನು ನಿಲ್ಲಿಸುವಂತೆ ಸೂಚಿಸುತ್ತಾನೆ.

ಕೊನೆಗೆ ತಿನ್ನದೇ ಉಳಿದಿದ್ದು ಸಿಂಹಮುಖಿ ರಕ್ಕಸನ ಮುಖ ಮಾತ್ರ. ಆ ಸಿಂಹಮುಖಿ ತಿನ್ನದೇ ಉಳಿಸಿದ ಆತನದ್ದೇ ಮುಖಕ್ಕೆ ಪರಶಿವ, ಕೀರ್ತಿಮುಖ ಅನ್ನೋ ಬಿರುದನ್ನು ನೀಡುತ್ತಾನೆ. ತನ್ನನ್ನು ತಾನು ಇಲ್ಲವಾಗಿಸಿಕೊಂಡ ಈ ರಕ್ಕಸನ ಮುಖ ದೇಗುಲಗಳಲ್ಲಿ ಕೀರ್ತಿಮುಖವಾಗಿ ವಿರಾಜಿಸಲಿ ಎಂದು ಆಶೀರ್ವದಿಸಿದನಂತೆ ಪರಶಿವ. ಹೀಗೆ ಗರ್ಭಗುಡಿಯ ಪ್ರಭಾವಳಿಯಲ್ಲಿ, ಗೋಪುರದಲ್ಲಿರುವ ಈ ರಾಕ್ಷಸ ಮುಖದ ಹಿಂದೆ ನಮ್ಮ ಹಿರಿಯರು ಅದ್ಭುತ ಜೀವನ ಪಾಠವನ್ನು ಹೇಳೋದಕ್ಕೆ ಯತ್ನಿಸಿದ್ದಾರೆ. ಮನುಷ್ಯನ ಆತ್ಮೋನ್ನತಿಯಾಗಬೇಕಾದರೆ, ತನ್ನೊಳಗಿರೋ ಅಹಂ ಇಲ್ಲವಾಗಿಸಿಕೊಳ್ಳಬೇಕು. ತನ್ನ ದೇಹವನ್ನು ತಾನೇ ತಿಂದು ಮುಗಿಸಿದ ಆ ಅಸುರನಂತೆ ನಮ್ಮೊಳಗಿನ ಅಹಂ ನೀಗಿಸಿಕೊಳ್ಳಬೇಕು. ಆಗ ಮಾತ್ರವೇ ಆತ್ಮೋನ್ನತಿ ಸಾಧ್ಯ ಎಂಬುದು ಈ ಕೀರ್ತಿಮುಖದ ಹಿಂದಿರುವ ಸಂದೇಶ.

ಆದರೆ ವಾಸ್ತು ಪ್ರಕಾರ ಇದು ಇರಬೇಕಾದ್ದು ದೇವಾಲಯದಲ್ಲಿ. ದೇವಾಲಯ ಎಂದರೆ ಭಕ್ತ ತನ್ನ ʼಸ್ವಯಂʼ ಅನ್ನು ಕಳೆದುಕೊಳ್ಳುವ ತಾಣ. ಅಲ್ಲಿ ಭಕ್ತ ತನ್ನದೆನ್ನುವ ಎಲ್ಲ ಭಾವನೆಯನ್ನು ಕಳೆದುಕೊಂಡು ದೇವರಲ್ಲಿ ಮಗ್ನವಾಗಬೇಕು. ಆದರೆ ಮನೆ ಇದಕ್ಕೆ ಸೂಕ್ತವಾದ ತಾಣವಲ್ಲ. ಮನೆಯಲ್ಲಿ ವ್ಯಕ್ತಿ ತನ್ನ ಅಧಿಕಾರ, ಸ್ವಾಭಿಮಾನ, ಲೌಕಿಕತೆ ಇವುಗಳನ್ನು ಪೂರ್ತಿಯಾಗಿ ಕಳೆದುಕೊಂಡು ವ್ಯವಹರಿಸುವಂತಿಲ್ಲ. ಹಾಗೆಯೇ ಕೀರ್ತಿಮುಖನ ಭಯಾನಕ ನೋಟ ಮನೆಯ ಏಳಿಗೆಗೂ ಸೂಕ್ತವಲ್ಲ. ಇದರ ಹಿಂದೆ ರಾಹು ಮತ್ತು ಸಿಂಹಮುಖ ಇರುವುದರಿಂದ ಮನೆಯ ಒಳಿತಿನ ದೃಷ್ಟಿಯಿಂದ ಇದು ಆಪ್ತವಲ್ಲ.



Source link

Leave a Reply

Your email address will not be published. Required fields are marked *