Headlines

ಸುಡು ಬಿಸಿಲಿಗೆ ಬೆಂದ ಕರ್ನಾಟಕ: ದಾಖಲೆ ಬರೆದ ತಾಪಮಾನ, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್! | Karnataka Heatwave Alert Kalaburagi Hits 42 C Bengaluru Records Rising Temperatures Gdp

ಸುಡು ಬಿಸಿಲಿಗೆ ಬೆಂದ ಕರ್ನಾಟಕ: ದಾಖಲೆ ಬರೆದ ತಾಪಮಾನ, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್! | Karnataka Heatwave Alert Kalaburagi Hits 42 C Bengaluru Records Rising Temperatures Gdp



ಸುಡು ಬಿಸಿಲಿಗೆ ಬೆಂದ ಕರ್ನಾಟಕ: ದಾಖಲೆ ಬರೆದ ತಾಪಮಾನ, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್! | Karnataka Heatwave Alert Kalaburagi Hits 42 C Bengaluru Records Rising Temperatures Gdp

ರಾಜ್ಯಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ ದಾಖಲೆ ಬಿಸಿಲು ಕಂಡುಬಂದಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ರಾಜ್ಯಾದ್ಯಂತ ಉರಿಯುತ್ತಿರುವ ಬಿಸಿಲು ಜನಜೀವನವನ್ನು ಕಂಗೆಡಿಸಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿ ಕಂಡುಬರುತ್ತಿದ್ದು, ಜನರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ.

ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಹಂಗಾಮಿನ ಗರಿಷ್ಠ ಮಟ್ಟಗಳಲ್ಲಿ ಒಂದಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇದಲ್ಲದೆ, ಬೀದರ್, ಬಳ್ಳಾರಿ, ವಿಜಯನಗರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ (Heatwave) ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ಭಾರೀ ಮಳೆಯ ಲಕ್ಷಣಗಳು ಕಾಣಿಸದಿದ್ದರೂ, ಏಪ್ರಿಲ್ 17ರ ನಂತರ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ದಾಖಲೆ ಮೀರಿದ ತಾಪಮಾನ

ಇನ್ನೊಂದೆಡೆ, ಬೆಂಗಳೂರು ನಗರದಲ್ಲಿಯೂ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ನಿನ್ನೆ ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ವರ್ಷದ ಮಾರ್ಚ್ ತಿಂಗಳ 35.4 ಡಿಗ್ರಿ ದಾಖಲೆಯನ್ನು ಮೀರಿಸಿದೆ. HAL ಪ್ರದೇಶದಲ್ಲಿ 36.8 ಡಿಗ್ರಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 36.1 ಡಿಗ್ರಿ ತಾಪಮಾನ ದಾಖಲಾಗಿರುವುದು ಗಮನಾರ್ಹವಾಗಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಹೆಚ್ಚು ತಾಪಮಾನ ದಾಖಲಾಗುತ್ತಿರುವುದರಿಂದ ಜನರಿಗೆ ಹೆಚ್ಚು ಬಿಸಿಯ ಅನುಭವವಾಗುತ್ತಿದೆ.

ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದ್ದು, ಇನ್ನೂ ಒಂದು ತಿಂಗಳು ಇದೇ ರೀತಿಯ ಬಿಸಿಲಿನ ತೀವ್ರತೆ ಮುಂದುವರಿಯುವ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ತಜ್ಞರಾದ ಶ್ರೀನಿವಾಸ್ ರೆಡ್ಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿಲ್ಲದಿದ್ದರೆ ಹೊರಗೆ ಹೋಗಬಾರದು, ವಿಶೇಷವಾಗಿ ಮಧ್ಯಾಹ್ನ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ತಿಳಿಸಿದ್ದಾರೆ. ಹೊರಗೆ ತೆರಳುವಾಗ ಕೊಡೆ, ಟೋಪಿ ಹಾಗೂ ಕಣ್ಣುಗಾಗಲು (ಸನ್‌ಗ್ಲಾಸ್) ಬಳಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ಸಾಕಷ್ಟು ನೀರು, ಹಣ್ಣು ರಸ (ಜ್ಯೂಸ್) ಹಾಗೂ ಹಣ್ಣುಗಳನ್ನು ಸೇವಿಸಬೇಕು. ವಿಶೇಷವಾಗಿ ವೃದ್ಧರು, ಮಕ್ಕಳು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಒಟ್ಟಾರೆ, ರಾಜ್ಯದಲ್ಲಿ ಉಷ್ಣತೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿದ್ದು, ಜನರು ಆರೋಗ್ಯದ ದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಅಗತ್ಯವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ 17ರವರೆಗೂ ಭಾರಿ ಬಿಸಿ ಗಾಳಿ ಅಲೆ: ಎಚ್ಚರಿಕೆ

ಈಗಾಗಲೇ ಉರಿ ಬಿಸಿಲಿನಿಂದಾಗಿ ತತ್ತರಿಸಿರುವ ಜಿಲ್ಲೆಗೆ ಏ.17ರವರೆಗೆ ಭಾರಿ ಬಿಸಿ ಗಾಳಿಯ ಅಲೆಗಳ ಎಲ್ಲೋ ಅಲರ್ಟ್‌ ನೀಡಲಾಗಿದೆ. ಹೀಟ್‌ವೇವ್‌ನಿಂದ ಆರೋಗ್ಯ ತೊಂದರೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಮಧ್ಯಾಹ್ನ 12ರಿಂದ ಸಂಜೆ 5ರವರೆಗೂ ಹೊರಗೆ ಅಡ್ಡಾಡದಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣೆ ಸಂಸ್ಥೆಯಿಂದ ಸಾರ್ವಜನಿಕವಾಗಿ 20ಕ್ಕೂ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿ ಹೀಟ್‌ವೇವ್‌ನಿಂದ ಹೇಗೆ ಸುರಕ್ಷಿತವಾಗಿರಬೇಕು ಎಂದು ಎಚ್ಚರಿಸಲಾಗಿದೆ. ಈಗಾಗಲೇ ಕಳೆ 3 ದಿನದಿಂದ ಬಿಸಿಗಾಳಿಯ ಹೊಡೆತಕ್ಕೆ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಮತ್ತಷ್ಟು ಬಿಸಿಗಾಲಿ ಅಲೆಗಳು ಜಿಲ್ಲೆಯತ್ತ ಅಪ್ಪಳಿಸೋದನ್ನು ಕೇಳಿ ಆತಂಕಪಡುವಂತಾಗಿದೆ. ಸಾಕಷ್ಟು ಪ್ರಮಾಣದಲ್ಲಿ ನೀರು ಹಾಗೂ ಮಜ್ಜಿಗೆ ಸೇರಿದಂತೆ ತಂಪು ಪದಾರ್ಥ ಸೇವಿಸಲು ಸಲಹೆ ನೀಡಲಾಗಿದೆ.



Source link

Leave a Reply

Your email address will not be published. Required fields are marked *