Headlines

ರಾಜಕೀಯದಲ್ಲಿ ನಾನು ಇನ್ನೂ ಅಂಬೆಗಾಲು ಇಡುತ್ತಿರುವೆ: ಬೆಳ್ಳಿ ಕಿರೀಟವನ್ನು ಮಠಕ್ಕೆ ವಾಪಸ್‌ ಕೊಟ್ಟ ಬಿವೈವಿ | I Am Still A Toddler In Politics By Vijayendra Returns Silver Crown To Matha

ರಾಜಕೀಯದಲ್ಲಿ ನಾನು ಇನ್ನೂ ಅಂಬೆಗಾಲು ಇಡುತ್ತಿರುವೆ: ಬೆಳ್ಳಿ ಕಿರೀಟವನ್ನು ಮಠಕ್ಕೆ ವಾಪಸ್‌ ಕೊಟ್ಟ ಬಿವೈವಿ | I Am Still A Toddler In Politics By Vijayendra Returns Silver Crown To Matha


ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಾಲನಹಳ್ಳಿ ಮಠದಲ್ಲಿ ಶಿವಗಂಗೋತ್ರಿ ಪ್ರಶಸ್ತಿ ಸ್ವೀಕರಿಸಿ, ತಾವಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿರುವುದಾಗಿ ಹೇಳಿದರು. ಈ ಪ್ರಶಸ್ತಿಯು ತಮ್ಮ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿ ತಮಗೆ ನೀಡಿದ ಬೆಳ್ಳಿ ಕಿರೀಟವನ್ನು ಮಠಕ್ಕೆ ಹಿಂತಿರುಗಿಸಿದರು.

ದಾಬಸ್‍ಪೇಟೆ (ಫೆ.18): ರಾಜಕೀಯದಲ್ಲಿ ನಾನಿನ್ನೂ ಅಂಬೆಗಾಲು ಇಡುತ್ತಿದ್ದೇನೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲನಹಳ್ಳಿ ಮಠದಲ್ಲಿ ಮಂಗಳವಾರ ಶ್ರೀಮಠದಿಂದ ನೀಡಲಾದ ಶಿವಗಂಗೋತ್ರಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. 

ಇದನ್ನೂ ಓದಿ: 2028ಕ್ಕೆ ಸಿದ್ದರಾಮಯ್ಯ ಅಲ್ಲ, ಡಿಕೆಶಿನೂ ಅಲ್ಲ, ವಿಜಯೇಂದ್ರ ಸಿಎಂ: ಬಿಜೆಪಿ ಮುಖಂಡನ ಭವಿಷ್ಯವಾಣಿ ನಿಜವಾಗುತ್ತಾ?

ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡುತ್ತಿದ್ದೇನೆ. ನಾನು ಇದನ್ನು ಪ್ರಶಸ್ತಿ ಎನ್ನುವುದಿಲ್ಲ, ನನ್ನ ರಾಜಕೀಯ ಜೀವನಕ್ಕೆ ಕಿರೀಟ ಎಂದು ಭಾವಿಸಿಸುತ್ತೇನೆ. ನಾನು ಇನ್ನೂ ರಾಜಕೀಯದಲ್ಲಿ ಅಂಬೆಕಾಲು ಇಡುತ್ತಿದ್ದು, ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಿದೆ ಎಂದರು.

ಈ ಸಂದರ್ಭದಲ್ಲಿ ಶಿವಗಂಗೋತ್ರಿ ಪ್ರಶಸ್ತಿಯನ್ನು ಮಾತ್ರ ಸ್ವೀಕರಿಸುತ್ತೇನೆ. ಬೆಳ್ಳಿ ಕಿರೀಟವನ್ನು ಮಠದ ಕಾರ್ಯಗಳಿಗೆ ನೀಡುತ್ತೇನೆ, ಪೂಜ್ಯರು ಸ್ವೀಕರಿಸಬೇಕೆಂದು ಮನವಿ ಮಾಡಿ ಮಠಕ್ಕೆ ಹಿಂತಿರುಗಿಸಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಹತ್ತಕ್ಕೂ ಹೆಚ್ಚು ಮಠಾಧೀಶರು ವಿಜಯೇಂದ್ರ ಅವರಿಗೆ ಹೂವು ಸುರಿದು ಮಂತ್ರಪಠಣೆ ಮಾಡಿ ಆಶೀರ್ವದಿಸಿದರು.

YouTube video player



Source link

Leave a Reply

Your email address will not be published. Required fields are marked *