Taliban Bans WiFi: ಅಫ್ಘಾನಿಸ್ತಾನದಲ್ಲಿ ಅನೈತಿಕತೆ ತಡೆಯಲು ವೈ-ಫೈ ಸೇವೆಯನ್ನೇ ಬಂದ್ ಮಾಡಿದ ತಾಲಿಬಾನ್ | Taliban Bans Wifi In Afghanistan India Us Trade Talks Resume

Taliban Bans WiFi: ಅಫ್ಘಾನಿಸ್ತಾನದಲ್ಲಿ ಅನೈತಿಕತೆ ತಡೆಯಲು ವೈ-ಫೈ ಸೇವೆಯನ್ನೇ ಬಂದ್ ಮಾಡಿದ ತಾಲಿಬಾನ್ | Taliban Bans Wifi In Afghanistan India Us Trade Talks Resume



Taliban Bans WiFi: ಅಫ್ಘಾನಿಸ್ತಾನದಲ್ಲಿ ಅನೈತಿಕತೆ ತಡೆಯಲು ವೈ-ಫೈ ಸೇವೆಯನ್ನೇ ಬಂದ್ ಮಾಡಿದ ತಾಲಿಬಾನ್ | Taliban Bans Wifi In Afghanistan India Us Trade Talks Resume

ಅಫ್ಘಾನಿಸ್ತಾನದ ಬಾಲ್ಖ್ ಪ್ರಾಂತ್ಯದಲ್ಲಿ ಅನೈತಿಕತೆ ತಡೆಯಲು ತಾಲಿಬಾನ್ ವೈ-ಫೈ ನಿಷೇಧಿಸಿದೆ. ಮತ್ತೊಂದೆಡೆ, ಟ್ರಂಪ್ ಆಡಳಿತದ ತೆರಿಗೆ ನೀತಿಗಳ ನಡುವೆಯೂ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆ ಸಕಾರಾತ್ಮಕವಾಗಿ ನಡೆದಿದೆ. 

ಅಫ್ಘಾನಿಸ್ತಾನದಲ್ಲಿ ಅನೈತಿಕತೆ ತಡೆಯಲು ವೈ-ಫೈ ಸೇವೆಯನ್ನೇ ಬಂದ್ ಮಾಡಿದ ತಾಲಿಬಾನ್

ಜಲಾಲಬಾದ್‌: 2021ರಲ್ಲಿ ಅಫ್ಘಾನಿಸ್ತಾನದ ಆಡಳಿತ ವಹಿಸಿಕೊಂಡಾಗಿನಿಂದ ಒಂದಲ್ಲ ಒಂದು ರೀತಿಯ ನಿರ್ಬಂಧ ನೀತಿಯನ್ನು ಅನುಸರಿಸುತ್ತಿರುವ ತಾಲಿಬಾನ್ ಸರ್ಕಾರ ಇದೀಗ ದೇಶಾದ್ಯಂತ ವೈಫೈ ಇಂಟರ್ನೆಟ್ ನಿಷೇಧಿಸಿದೆ. ಇಲ್ಲಿನ ಬಾಲ್ಖ್‌ ಪ್ರಾಂತ್ಯದಲ್ಲಿ ಅನೈತಿಕತೆಯನ್ನು ತಡೆಯುವ ನಿಟ್ಟಿನಲ್ಲಿ ವೈಫೈ ನಿಷೇಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಘೋಷಿಸಿದ್ದಾರೆ. ವೈಫೈಗೆ ಪರ್ಯಾಯವಾಗಿ ಬೇರೆ ವ್ಯವಸ್ಥೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದರಿಂದಾಗಿ ಸರ್ಕಾರಿ ಕಚೇರಿಗಳು, ಖಾಸಗಿ ನೆಲೆಗಳಲ್ಲಿ ವೈಫೈ ರದ್ದಾಗಿದೆ. ವೈಫೈ ನಿಷೇಧದ ಹೊರತು ಮೊಬೈಲ್ ಇಂಟರ್ನೆಟ್‌ ಸೇವೆ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಟ್ರಂಪ್‌ ತೆರಿಗೆ ಕಿರಿಕ್‌ ಬಳಿಕ ಮತ್ತೆ ವ್ಯಾಪಾರ ಒಪ್ಪಂದ ಚರ್ಚೆ ಸುಗಮ

ನವದೆಹಲಿ: ಭಾರತ-ಅಮೆರಿಕ ನಡುವಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ಮಂಗಳವಾರ 6ನೇ ಸುತ್ತಿನ ಮಾತುಕತೆ ನಡೆದಿದ್ದು, ಆದಷ್ಟು ಬೇಗ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ಎರಡೂ ಕಡೆಯಿಂದ ವ್ಯಕ್ತವಾಗಿದೆ. ಭಾರತದ ಆಮದುಗಳ ಮೇಲೆ ಅಧ್ಯಕ್ಷ ಟ್ರಂಪ್‌ ಶೇ.50ರಷ್ಟು ತೆರಿಗೆ ಹೇರಿರುವ ನಡುವೆಯೂ, ಆ ಬಗ್ಗೆ ಚರ್ಚೆ ನಡೆಸಲು ಅಮೆರಿಕಾದ ಸಂಧಾನಕಾರ ಬ್ರೆಂಡನ್ ಲಿಂಚ್ ಅವರ ತಂಡ ಭಾರತಕ್ಕೆ ಆಗಮಿಸಿದ್ದು, ರಾಜೇಶ್‌ ಅಗರ್ವಾಲ್‌ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಯಾವೆಲ್ಲಾ ತೀರ್ಮಾನ ಕೈಗೊಳ್ಳಲಾಯಿತು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ. ಆದರೆ ಮಾತುಕತೆ ಸಕಾರಾತ್ಮಕವಾಗಿತ್ತು ಎಂದು ಉಭಯ ದೇಶಗಳು ಹೇಳಿವೆ.

ಬಂಗಾಳದಲ್ಲೂ ಮತಪಟ್ಟಿ ಪರಿಷ್ಕರಣೆಗೆ ಆಯೋಗ ಸಿದ್ಧತೆ: ತರಬೇತಿ ಶುರು

ಕೋಲ್ಕತಾ: ಬಿಹಾರದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಚುನಾವಣಾ ಆಯೋಗದ ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ನೆರೆಯ ಪಶ್ಚಿಮ ಬಂಗಾಳದಲ್ಲಿಯೂ ನಡೆಸಲು ಆಯೋಗ ತಯಾರಿ ಆರಂಭಿಸಿದೆ. ಇದರ ಭಾಗವಾಗಿ ಮಂಗಳವಾರದಿಂದ ರಾಜ್ಯದಲ್ಲಿರುವ ಪ್ರತಿ ಜಿಲ್ಲೆಯ ಜಿಲ್ಲಾ ಉಪ ವಿಭಾಗಾಧಿಕಾರಿ ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ ತರಬೇತಿ ಆರಂಭಿಸಲಿದೆ. ಒಮ್ಮೆ ಎಡಿಎಂ ಮತ್ತು ಇಆರ್‌ಒಗಳಿಗೆ ತರಬೇತಿ ಪೂರ್ಣಗೊಂಡ ಬಳಿಕ ಅವರು ಬೂತ್‌ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಿದ್ದಾರೆ. ಬೂತ್‌ ಅಧಿಕಾರಿಗಳು ಜನರಿಗೆ ಕಾರ್ಯದ ಕುರಿತು ವಿವರಿಸಲಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದೆ.

ಇದನ್ನೂ ಓದಿ: ಬೆಟ್ಟಿಂಗ್‌ ಆ್ಯಪ್‌ ಪ್ರಚಾರ: ಉತ್ತಪ್ಪ, ಯುವಿ, ಸೋನು ಸೂದ್‌ಗೆ ಇಡಿ ಸಮನ್ಸ್‌: ಭೂವಂಚನೆ ಕೇಸಲ್ಲಿ ಯೂಸುಫ್ ಪಠಾಣ್

ಇದನ್ನೂ ಓದಿ: ದೇಗುಲದ ಹುಂಡಿ ಹಣ ಸತ್ಕಾರ್ಯಕ್ಕೆ ಬಳಸಿ ಮದುವೆ ಹಾಲ್‌ಗೆ ಅಲ್ಲ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಚಾಟಿ



Source link

Leave a Reply

Your email address will not be published. Required fields are marked *