Headlines

ಬಳ್ಳಾರಿ ಜಿ-ಸ್ಕೈರ್ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:ಎಫ್‌ಎಸ್‌ಎಲ್ ಎಂಟ್ರಿ, ಮಾಡೆಲ್ ಹೌಸ್ ಸುಟ್ಟಿದ್ದು ಆಕಸ್ಮಿಕವೋ, ವ್ಯವಸ್ಥಿತ ಸಂಚೋ? | Ballari G Square Fire Fsl Probe Begins Accident Or Planned Conspiracy

ಬಳ್ಳಾರಿ ಜಿ-ಸ್ಕೈರ್ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:ಎಫ್‌ಎಸ್‌ಎಲ್ ಎಂಟ್ರಿ, ಮಾಡೆಲ್ ಹೌಸ್ ಸುಟ್ಟಿದ್ದು ಆಕಸ್ಮಿಕವೋ, ವ್ಯವಸ್ಥಿತ ಸಂಚೋ? | Ballari G Square Fire Fsl Probe Begins Accident Or Planned Conspiracy



ಬಳ್ಳಾರಿ ಜಿ-ಸ್ಕೈರ್ ಬೆಂಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:ಎಫ್‌ಎಸ್‌ಎಲ್ ಎಂಟ್ರಿ, ಮಾಡೆಲ್ ಹೌಸ್ ಸುಟ್ಟಿದ್ದು ಆಕಸ್ಮಿಕವೋ, ವ್ಯವಸ್ಥಿತ ಸಂಚೋ? | Ballari G Square Fire Fsl Probe Begins Accident Or Planned Conspiracy

allari G Square Fire ಬಳ್ಳಾರಿಯ ಜೀ ಸ್ಕೈರ್ ಲೇಔಟ್‌ ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಬೆಂಕಿಯ ಕಾರಣ ಪತ್ತೆಹಚ್ಚಲು ಎಫ್‌ಎಸ್‌ಎಲ್ ತಂಡ ತನಿಖೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಮುಖಂಡರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬಳ್ಳಾರಿ (ಜ.23): ಬಳ್ಳಾರಿಯ ಜೀ ಸ್ಕೈರ್ ಲೇಔಟ್‌ನಲ್ಲಿರುವ ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದ ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ನಗರದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಭೇಟಿ ನೀಡಿದ್ದು, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ

ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಬೆಂಕಿಯ ಮೂಲವನ್ನು ಪತ್ತೆಹಚ್ಚಲು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಸ್ಥಳಕ್ಕೆ ಆಗಮಿಸಿದೆ. ಬೆಂಕಿ ಆಕಸ್ಮಿಕವಾಗಿ ಹತ್ತಿಕೊಂಡಿದೆಯೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ಹಚ್ಚಿದ್ದಾರೆಯೇ ಎಂಬ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಪೆಟ್ರೋಲ್ ಅಥವಾ ಡೀಸೆಲ್‌ನಂತಹ ದ್ರವಗಳನ್ನು ಬಳಸಲಾಗಿದೆಯೇ ಎಂಬ ಬಗ್ಗೆ ತಂಡವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕುತ್ತಿದೆ.

ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ

ಇತ್ತ ಪ್ರಕರಣವನ್ನು ಖಂಡಿಸಿ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಮಾಜಿ ಸಂಸದ ಫಕೀರಪ್ಪ ಹಾಗೂ ಮಾಜಿ ಶಾಸಕ ಸುರೇಶ್ ಬಾಬು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಟೈರ್ ಸುಡಲು ಯತ್ನ, ಪೊಲೀಸರೊಂದಿಗೆ ವಾಗ್ವಾದ

ಪ್ರತಿಭಟನೆಯ ವೇಳೆ ಉದ್ರಿಕ್ತರಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಸ್ತೆಯಲ್ಲೇ ಟೈರ್ ಸುಟ್ಟು ಆಕ್ರೋಶ ಹೊರಹಾಕಲು ಮುಂದಾದರು. ಆದರೆ ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ನೀಡದಿದ್ದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು. ಎಎಸ್‌ಪಿ ರವಿಕುಮಾರ್ ಅವರೊಂದಿಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮಾತಿನ ಚಕಮಕಿ ನಡೆಸಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

ನಗರದಲ್ಲಿ ಪೊಲೀಸ್ ಸರ್ಪಗಾವಲು

ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಯಲ್ ವೃತ್ತದ ಸುತ್ತಮುತ್ತ ಪೊಲೀಸರು ಸರ್ಪಗಾವಲು ಹಾಕಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.



Source link

Leave a Reply

Your email address will not be published. Required fields are marked *