Headlines

Congress High Command: ಪ್ರತಿ ತಿಂಗಳು ಸಚಿವರು, ಶಾಸಕರ ಬಗ್ಗೆ ಹೈಕಮಾಂಡ್‌ಗೆ ವರದಿ: ಡಿ.ಕೆ.ಶಿವಕುಮಾರ್ | Congress High Command Monthly Review Dk Shivakumar Reaction Gvd

Congress High Command: ಪ್ರತಿ ತಿಂಗಳು ಸಚಿವರು, ಶಾಸಕರ ಬಗ್ಗೆ ಹೈಕಮಾಂಡ್‌ಗೆ ವರದಿ: ಡಿ.ಕೆ.ಶಿವಕುಮಾರ್ | Congress High Command Monthly Review Dk Shivakumar Reaction Gvd



Congress High Command: ಪ್ರತಿ ತಿಂಗಳು ಸಚಿವರು, ಶಾಸಕರ ಬಗ್ಗೆ ಹೈಕಮಾಂಡ್‌ಗೆ ವರದಿ: ಡಿ.ಕೆ.ಶಿವಕುಮಾರ್ | Congress High Command Monthly Review Dk Shivakumar Reaction Gvd

ರಾಜ್ಯ ಸರ್ಕಾರದ ಶಾಸಕರು, ಸಚಿವರ ಕಳೆದ ಮೂರು ತಿಂಗಳ ಕಾರ್ಯವೈಖರಿ ಕುರಿತು ಹೈಕಮಾಂಡ್‌ ವರದಿ ಪಡೆಯುತ್ತಿದೆ ಎಂಬ ವಿಚಾರ ನನಗೆ ತಿಳಿದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು (ಅ.31): ರಾಜ್ಯ ಸರ್ಕಾರದ ಸಚಿವರ ಕಳೆದ ಮೂರು ತಿಂಗಳ ಕಾರ್ಯವೈಖರಿ ಕುರಿತು ಹೈಕಮಾಂಡ್‌ ವರದಿ ಪಡೆಯುತ್ತಿದೆ ಎಂಬ ವಿಚಾರ ನನಗೆ ತಿಳಿದಿಲ್ಲ. ಆದರೆ ಪ್ರತಿ ತಿಂಗಳು ಶಾಸಕರು, ಸಚಿವರ ವರದಿಯನ್ನು ಹೈಕಮಾಂಡ್‌ ಪಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್‌ ನೇಮಿಸಿರುವ ತಂಡದಿಂದ ಪ್ರತಿ ತಿಂಗಳು ಸರ್ವೇ ನಡೆಯುತ್ತಿರುತ್ತದೆ. ಶಾಸಕರ, ಸಚಿವರ, ಕೆಪಿಸಿಸಿ ಪ್ರಮುಖ ಹುದ್ದೆಯಲ್ಲಿರುವವರ ಕಾರ್ಯವೈಖರಿ ಬಗ್ಗೆ ತಂಡ, ವರದಿ ಸಿದ್ಧಪಡಿಸಿ ಹೈಕಮಾಂಡ್ ನಾಯಕರಿಗೆ ನೀಡುತ್ತಿದೆ. ಪಕ್ಷದಲ್ಲಿ ನಡೆದಿರುವ ಚಟುವಟಿಕೆ, ಶಾಸಕರ ಕೆಲಸಗಳ ಮಾಹಿತಿ ಹೈಕಮಾಂಡ್‌ ನಾಯಕರಿಗಿದೆ ಎಂದು ಹೇಳಿದರು.

ಧರ್ಮಸ್ಥಳ ಕೇಸಲ್ಲಿ ಎಸ್‌ಐಟಿ ವರದಿ ಬಂದ ನಂತರ ಸತ್ಯ ಬಯಲು: ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖಾ ವರದಿ ಬಂದ ನಂತರ ಹಲವು ವಿಚಾರಗಳು ಬಹಿರಂಗವಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಮತ್ತು ಒಂದು ಕುಟುಂಬದ ತೇಜೋವಧೆ ಮಾಡಲು ಸಾಕಷ್ಟು ಷಡ್ಯಂತ್ರಗಳು ನಡೆದಿವೆ. ಅವುಗಳಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಇದೀಗ ಎಫ್‌ಐಆರ್‌ ರದ್ದು ಕೋರಿ ಆರೋಪಿತರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಕಾನೂನಿನಂತೆ ಕ್ರಮ ಕೈಗೊಳ್ಳಲಿದೆ ಎಂದರು. ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಶವ ಹೂತಿಟ್ಟ ಆರೋಪ ಸಂಬಂಧ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಇನ್ನೂ ತನಿಖಾ ವರದಿ ಸಲ್ಲಿಸಿಲ್ಲ. ಎಸ್‌ಐಟಿಯಿಂದ ತನಿಖಾ ವರದಿ ಸಲ್ಲಿಕೆಯಾದ ನಂತರ ಮತ್ತಷ್ಟು ವಿಚಾರಗಳು ಹೊರಬರಲಿವೆ. ನ್ಯಾಯ ಉಳಿಯಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ

ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಆನೇಕಲ್‌ನ ಮುತ್ತನಲ್ಲೂರಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು ಕಷ್ಟವಾಗಲಿದೆ. ಅದಕ್ಕೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಬಯೋಕಾನ್ ಸಂಸ್ಥೆಯು ಪಂಚಾಯತಿ ‌ವ್ಯಾಪ್ತಿಯಲ್ಲಿ ಇದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ಪಂಚಾಯತಿ ವ್ಯಾಪ್ತಿ ಬೇರೆ, ಬೇರೆ. ಈ ಬಗ್ಗೆ ಈಗಾಗಲೇ ಮಾತನಾಡಿದ್ದೇ‌ನೆ ಎಂದು ಹೇಳಿದರು.



Source link

Leave a Reply

Your email address will not be published. Required fields are marked *