ಹೃದಯ ಸಮಸ್ಯೆ ಇರುವವರಿಗೆ ಉಚಿತ ಚಿಕಿತ್ಸೆ ನೀಡುವ ರಾಜ್ಯದ ಆಸ್ಪತ್ರೆ ಇದು | This Hospital Provides Free Treatment To Hasana People With Heart Problems

ಹೃದಯ ಸಮಸ್ಯೆ ಇರುವವರಿಗೆ ಉಚಿತ ಚಿಕಿತ್ಸೆ ನೀಡುವ ರಾಜ್ಯದ ಆಸ್ಪತ್ರೆ ಇದು | This Hospital Provides Free Treatment To Hasana People With Heart Problems



ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವುಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರದ ಶ್ರೀ ಮಧುಸೂಧನ್ ಸಾಯಿ ಆಸ್ಪತ್ರೆಯು ಉಚಿತ ಹೃದಯ ಚಿಕಿತ್ಸೆ ನೀಡುತ್ತಿದೆ.

ಹಾಸನ: ಜಿಲ್ಲೆಯಲ್ಲಿ ಇಂದು ಕೂಡ ಹೃದಯಾಘಾತಕ್ಕೆ ಇಬ್ಬರು ಸಾವನ್ನಪ್ಪಿದ್ದು, ಇಡೀ ಜಿಲ್ಲೆಯಲ್ಲೇ ಹೃದಯಾಘಾತದ ಆಚಾನಕ್‌ ಸಾವಿನ ಭೀತಿ ಅವರಿಸಿದೆ. ಬರೀ ಹಾಸನ ಮಾತ್ರವಲ್ಲದೇ ಬೇರೆ ಬೇರೆ ಜಿಲ್ಲೆಗಳ ಲೆಕ್ಕಾಚಾರವನ್ನು ತೆಗೆದುಕೊಂಡರೆ ಪ್ರತಿ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಬಲಿಯಾದವರ ಹಾಗೂ ಹೃದಯದ ಸಮಸ್ಯೆಗೆ ಒಳಗಾದ ಜನರ ಸಂಖ್ಯೆ ತೀವ್ರವಾಗಿ ಹೆಚ್ಚಿದೆ. ಹೀಗಿರುವಾಗ ಹೃದಯ ಸಮಸ್ಯೆ ಇರುವವರಿಗೆ ಎಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂಬ ಬಗ್ಗೆ ನೋಡೋಣ.

ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಗಳಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ. ಈ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಲಕ್ಷಗಟ್ಟಲೆ ಖರ್ಚು ಮಾಡಬೇಕಾಗುತ್ತದೆ. ಅಂತಹವರಿಗೆ ಆಸ್ಪತ್ರೆಯೊಂದು ಉಚಿತ ಚಿಕಿತ್ಸೆ ನೀಡುತ್ತಿದೆ.

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಕೇವಲ 40 ದಿನಗಳಲ್ಲಿ 22 ಜನರು ಹೃದಯಾಘಾತದಿಂದ ಸಾವನ್ನಪ್ಪಿರುವುದು ಭಾರಿ ಸಂಚಲನ ಸೃಷ್ಟಿಸಿದೆ. ಈ ಘಟನೆಗಳ ಬಗ್ಗೆ ಸಿಎಂ ಆದೇಶದ ಮೇರೆಗೆ ಉನ್ನತ ಮಟ್ಟದ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಕೆಲವರು ಕೋವಿಡ್ ಲಸಿಕೆ ಪರಿಣಾಮದಿಂದ ಜನ ಹೃದಯಾಘಾತಕ್ಕೆ ಹೀಗೆ ಬಲಿಯಾಗುತ್ತಿದ್ದಾರೆ ಎಂದು ಶಂಕಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಹಾಗೂ ಆಸ್ಪತ್ರೆಗಳು ಈ ಹೇಳಿಕೆಯನ್ನು ನಿರಾಕರಿಸಿವೆ. ಆದರೂ ಜನರಲ್ಲಿ ಭೀತಿ ಕಡಿಮೆ ಆಗಿಲ್ಲ..

ಶ್ರೀ ಮಧುಸೂಧನ್ ಸಾಯಿ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ:

ಈ ಹೃದಯದ ಬಿಕ್ಕಟ್ಟಿನ ಸಮಯದಲ್ಲಿ, ಹಾಸನ ಜಿಲ್ಲೆಯ ಜನರಿಗೆ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಧೈರ್ಯ ತುಂಬುತ್ತಿದೆ. ಈ ಸಂಸ್ಥೆಯು ರಾಜ್ಯದ ಮುದ್ದೇನಹಳ್ಳಿಯಲ್ಲಿ 400 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಡೆಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ, ಈ ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ.

ಹೃದಯ ವೈದ್ಯಕೀಯ ತಜ್ಞರ ಸೇವೆಗಳು

ಈ ಆಸ್ಪತ್ರೆಯ ಹೃದಯ ವಿಭಾಗದಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಹೃದಯ ತಜ್ಞರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಅತ್ಯಾಧುನಿಕ ಉಪಕರಣಗಳೊಂದಿಗೆ ವಿಶ್ವ ದರ್ಜೆಯ ಚಿಕಿತ್ಸೆಯನ್ನು ಒದಗಿಸಲು ಎಲ್ಲಾ ಸೌಲಭ್ಯಗಳಿವೆ. ಹಾಸನ ಜಿಲ್ಲೆಯಲ್ಲಿ ಹೃದಯ ಸಂಬಂಧಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗಿಗಳಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.

ದೇಶಾದ್ಯಂತ 34 ಸಾವಿರ ಜನರಿಗೆ ಉಚಿತ ಶಸ್ತ್ರಚಿಕಿತ್ಸೆ

ಈ ಆಸ್ಪತ್ರೆಯನ್ನು ಜಾಗತಿಕ ಮಾನವೀಯ ಮತ್ತು ಆಧ್ಯಾತ್ಮಿಕ ನಾಯಕ ಶ್ರೀ ಮಧುಸೂದನ್ ಸಾಯಿ ನಡೆಸುತ್ತಿದ್ದಾರೆ. ಅವರು ಪ್ರಾರಂಭಿಸಿದ ಶ್ರೀ ಸತ್ಯ ಸಾಯಿ ಜಾಗತಿಕ ಮಾನವೀಯ ಮಿಷನ್, ಇದುವರೆಗೆ ದೇಶಾದ್ಯಂತ 34,000 ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದೆ. ಇದು ದೇಶದ ಅತ್ಯಂತ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ.

ಅಪಾಯಿಂಟ್ಮೆಂಟ್, ಆಸ್ಪತ್ರೆ ವಿವರಗಳು ಹಾಗೂ ಚಿಕಿತ್ಸೆಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ

ಸಂಪರ್ಕಿಸಬೇಕಾದರ ದೂರವಾಣಿ ಸಂಖ್ಯೆ: 08156 275811 (ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ).

ಸಂಪೂರ್ಣ ವಿವರಗಳಿಗಾಗಿ ಈ https://smsimsr.org/ ವೆಬ್‌ಸೈಟ್ ಅನ್ನು ಕ್ಲಿಕ್ ಮಾಡಿ.

ಆಸ್ಪತ್ರೆ ವಿಳಾಸ. ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮುದ್ದೇನಹಳ್ಳಿ, ಸತ್ಯ ಸಾಯಿ ಗ್ರಾಮ, ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ



Source link

Leave a Reply

Your email address will not be published. Required fields are marked *