Headlines

PSI Scam Update: ಎಡಿಜಿಪಿ ಅಮೃತ್ ಪಾಲ್ ಸೇರಿ ಇಬ್ಬರ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು | Karnataka Govt Psi Recruitment Scam Ed Attaches Ips Amrit Paul Properties Sat

PSI Scam Update: ಎಡಿಜಿಪಿ ಅಮೃತ್ ಪಾಲ್ ಸೇರಿ ಇಬ್ಬರ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು | Karnataka Govt Psi Recruitment Scam Ed Attaches Ips Amrit Paul Properties Sat



PSI Scam Update: ಎಡಿಜಿಪಿ ಅಮೃತ್ ಪಾಲ್ ಸೇರಿ ಇಬ್ಬರ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು | Karnataka Govt Psi Recruitment Scam Ed Attaches Ips Amrit Paul Properties Sat

ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಅವರಿಗೆ ಸೇರಿದ 1.53 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದರು.

ಬೆಂಗಳೂರು (ಜ.24): ರಾಜ್ಯ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದ್ದ ಪಿಎಸ್ಐ (ಪೊಲೀಸ್ ಸಬ್-ಇನ್ಸ್‌ಪೆಕ್ಟರ್) ನೇಮಕಾತಿ ಅಕ್ರಮ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED), ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಿಗಿಪಾಶ ಹಾಕಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಅಡಿಯಲ್ಲಿ ಕ್ರಮ ಕೈಗೊಂಡಿರುವ ಇಡಿ ಅಧಿಕಾರಿಗಳು, ಜನವರಿ 23, 2026 ರಂದು ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಎಚ್ ಅವರಿಗೆ ಸೇರಿದ ಒಟ್ಟು 1.53 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಹಗರಣದ ಹಿನ್ನೆಲೆ

2021-22ನೇ ಸಾಲಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಬೃಹತ್ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮತ್ತು ಸಿಐಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧಾರದ ಮೇಲೆ ಇಡಿ ತನ್ನ ತನಿಖೆಯನ್ನು ಆರಂಭಿಸಿತ್ತು. ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ಭ್ರಷ್ಟಾಚಾರ ಮತ್ತು ವಂಚನೆಯ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಇಡಿ ತನಿಖೆಯಲ್ಲಿ ಬಯಲಾದ ಬೆಚ್ಚಿಬೀಳಿಸುವ ಸತ್ಯ

ನೇಮಕಾತಿ ವಿಭಾಗದ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ ಅಮೃತ್ ಪಾಲ್ ಅವರು ಈ ಸಂಚಿನಲ್ಲಿ ಪ್ರಮುಖ ಪಾತ್ರ ವಹಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಓಎಂಆರ್ (OMR) ಉತ್ತರ ಪತ್ರಿಕೆಗಳನ್ನು ಇಡಲಾಗಿದ್ದ ಸ್ಟ್ರಾಂಗ್ ರೂಮ್‌ನ ಕೀಗಳನ್ನು ಅಮೃತ್ ಪಾಲ್ ಅವರು ಡಿವೈಎಸ್‌ಪಿ ಶಾಂತಕುಮಾರ್ ಅವರಿಗೆ ಹಸ್ತಾಂತರಿಸಿದ್ದರು. ಈ ಮೂಲಕ ಅನರ್ಹ ಅಭ್ಯರ್ಥಿಗಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು ಓಎಂಆರ್ ಶೀಟ್‌ಗಳನ್ನು ತಿದ್ದಲು ಅವಕಾಶ ಮಾಡಿಕೊಡಲಾಗಿತ್ತು.

ಕೋಟಿ ಕೋಟಿ ಲಂಚದ ವಹಿವಾಟು

ಆರೋಪಿಗಳು ಒಬ್ಬೊಬ್ಬ ಅಭ್ಯರ್ಥಿಯಿಂದ 30 ಲಕ್ಷ ರೂಪಾಯಿಯಿಂದ 70 ಲಕ್ಷ ರೂಪಾಯಿ ವರೆಗೂ ಭಾರಿ ಪ್ರಮಾಣದ ಲಂಚದ ಹಣವನ್ನು ವಸೂಲಿ ಮಾಡಿದ್ದರು ಎಂಬ ಅಂಶ ಬಯಲಾಗಿದೆ. ಈ ರೀತಿ ಸಂಗ್ರಹಿಸಿದ ಅಕ್ರಮ ಹಣವನ್ನು ‘ಕೈಗಡ’ (Hand Loans) ಎಂಬ ಸೋಗಿನಲ್ಲಿ ಹಂತ ಹಂತವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಅಕ್ರಮ ಹಣದ ಮೂಲವನ್ನೇ ಬಳಸಿಕೊಂಡು ಆರೋಪಿಗಳು ವಸತಿ ಆಸ್ತಿಗಳನ್ನು ನಿರ್ಮಿಸಿದ್ದರು ಎಂದು ಇಡಿ ವರದಿಯಲ್ಲಿ ತಿಳಿಸಿದೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದ್ದು, ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆ ಅಪರಾಧವನ್ನು ಪರಿಗಣನೆಗೆ ತೆಗೆದುಕೊಂಡಿದೆ. ಸದ್ಯ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಅಮೃತ್ ಪಾಲ್ ಮತ್ತು ಶ್ರೀಧರ್ ಅವರ ವಸತಿ ಆಸ್ತಿಗಳು ಸೇರಿವೆ. ಪ್ರಕರಣದ ಕುರಿತು ಮತ್ತಷ್ಟು ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಭಾವಿಗಳ ಮೇಲೆ ಇಡಿ ಕಣ್ಣು ಬೀಳುವ ಸಾಧ್ಯತೆಯಿದೆ.



Source link

Leave a Reply

Your email address will not be published. Required fields are marked *