ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು, ಮಸಾಲಾ ಜಯರಾಮ್ vs ಕೃಷ್ಣಪ್ಪ | Conflict Between Jds And Bjp Alliance In Turuvekere Assembly Seat Contests Gow

ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು, ಮಸಾಲಾ ಜಯರಾಮ್ vs ಕೃಷ್ಣಪ್ಪ | Conflict Between Jds And Bjp Alliance In Turuvekere Assembly Seat Contests Gow



ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಶಾಸಕ ಮಸಾಲಾ ಜಯರಾಮ್ ಮತ್ತು ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ನಡುವೆ ಚುನಾವಣಾ ಪೈಪೋಟಿ ಭುಗಿಲೆದ್ದಿದೆ. ಜಯರಾಮ್ ತಾವು ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ ಎಂದು ಘೋಷಿಸಿದ್ದಾರೆ.  

ಎಂಎಲ್‌ಎ ಚುನಾವಣೆಗೆ ಇನ್ನೂ ಎರಡು ವರ್ಷಕ್ಕೂ ಹೆಚ್ಚು ಅವಧಿ ಬಾಕಿಯಿರುವಾಗಲೇ ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಶಾಸಕ ಮಸಾಲಾ ಜಯರಾಮ್ ಮತ್ತು ಜೆಡಿಎಸ್‌ನ ಹಾಲಿ ಶಾಸಕ ಎಂ.ಟಿ. ಕೃಷ್ಣಪ್ಪ ನಡುವಿನ ಅಭ್ಯರ್ಥಿ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿ ಬೆಳಕಿಗೆ ಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಈಗಾಗಲೇ ಬಿರುಕು ಆರಂಭವಾಗಿದೆ. ಕ್ಷೇತ್ರದಲ್ಲಿ ಇಬ್ಬರೂ ನಾಯಕರು ತಮ್ಮದೇ ಅಭ್ಯರ್ಥಿ ಹಕ್ಕನ್ನು ಘೋಷಣೆ ಮಾಡುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲೂ ಗೊಂದಲಕ್ಕೆ ಕಾರಣವಾಗಿದೆ.

ಮಾಧ್ಯಮದೊಂದಿಗೆ ಮಾತನಾಡಿದ ಮಸಾಲಾ ಜಯರಾಮ್, “ಮುಂದಿನ ದಿನಗಳಲ್ಲಿ ಸೂರ್ಯ-ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ನಾನು ತುರುವೇಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಸಹ ಅಷ್ಟೇ ಸತ್ಯ. ಯಾವುದೇ ಒತ್ತಡಕ್ಕೆ ಬಗ್ಗದೆ, ನಾನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಕಾರ್ಯಕರ್ತರು ಆತಂಕಪಡಬೇಡಿ,” ಎಂದು ಹೇಳಿದರು. ಮುಂದುವರೆದು, “ನನಗೆ ರಾಜ್ಯ ಹಾಗೂ ಕೇಂದ್ರದ ನಾಯಕರು ಕರೆ ಮಾಡಿ ಮಾತನಾಡಿದ್ದಾರೆ. ಮುಂದೆ ನಾನು ಬಿಜೆಪಿ ಅಭ್ಯರ್ಥಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ನನ್ನ ಕಾರ್ಯಕರ್ತರು ಎದೆಗುಂದಬಾರದು, ಎಂದು ತಮ್ಮ ದೃಢ ನಿಲುವನ್ನು ವ್ಯಕ್ತಪಡಿಸಿದರು.

ಅದಕ್ಕೆ ಅವರು ಮತಗಳ ಗಣತಿ ನೀಡುತ್ತಾ, ನಾನು ಮೂರು ಬಾರಿ ಸ್ಪರ್ಧಿಸಿದ್ದರೂ ಯಾವತ್ತೂ 60 ಸಾವಿರಕ್ಕಿಂತ ಕಡಿಮೆ ಮತಗಳನ್ನು ಪಡೆದಿಲ್ಲ. ಕೆಜೆಪಿಯಲ್ಲಿ ನಿಂತಾಗಲೂ ನನಗೆ 60 ಸಾವಿರ ಮತಗಳು ಬಿದ್ದಿದ್ದವು. ಅದಾದ ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದು 63 ಸಾವಿರ ಮತಗಳನ್ನು ಪಡೆದಿದ್ದೇನೆ. ಸೋತ ಸಂದರ್ಭದಲ್ಲಿ ಸಹ ನನಗೆ 60 ಸಾವಿರ ಮತಗಳು ಬಿದ್ದಿವೆ. ಯಾವತ್ತೂ 60 ಸಾವಿರಕ್ಕಿಂತ ಕಡಿಮೆ ಮತ ನನಗೆ ಬಂದಿಲ್ಲ,” ಎಂದರು.

ತಮ್ಮ ಕಾರ್ಯಕರ್ತರಿಗೆ ಉತ್ಸಾಹ ತುಂಬಿದ ಅವರು, “ನಮ್ಮ ಕಾರ್ಯಕರ್ತರು ಹೋರಾಟ ಮಾಡಬೇಕು. ನಾನೂ ನಿಮ್ಮ ಜೊತೆ ಇರುತ್ತೇನೆ. ಮುಂದಿನ ದಿನಗಳಲ್ಲಿ ನಾನು ಮತ್ತೆ ಅಭ್ಯರ್ಥಿಯಾಗುತ್ತೇನೆ. ನಮ್ಮ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ. ನಾವು ಸರ್ಕಾರ ರಚಿಸುತ್ತೇವೆ ಎಂಬುದು ಖಚಿತ. ಕಾರ್ಯಕರ್ತರ ಶಕ್ತಿ ಬಿಜೆಪಿಗೆ ತುಂಬಾ ಅಗತ್ಯ. ನನ್ನನ್ನು ಗೆಲ್ಲಿಸಿ ಆಶೀರ್ವದಿಸಬೇಕು. ಇಂದಿನಿಂದಲೇ ಹೋರಾಟ ಪ್ರಾರಂಭಿಸಿ,” ಎಂದು ಕರೆ ನೀಡಿದರು. ಈ ಮೂಲಕ ತುರುವೇಕೆರೆ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವಿನ ರಾಜಕೀಯ ಕಸರತ್ತು ಈಗಾಗಲೇ ಆರಂಭವಾಗಿರುವುದು ಸ್ಪಷ್ಟವಾಗಿದೆ.



Source link

Leave a Reply

Your email address will not be published. Required fields are marked *