
Chamundi Betta Priest Dies Dasara Darshan Temporarily Suspended in Mysuru ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾದ ಬೆನ್ನಲ್ಲೇ ಚಾಮುಂಡಿ ಬೆಟ್ಟದ ಶಿವಾರ್ಚಕರಾದ ವಿ. ರಾಜು ಅವರು ಹಠಾತ್ ನಿಧನರಾಗಿದ್ದಾರೆ.
ಮೈಸೂರು (ಸೆ.23): ದಸರಾ ಆರಂಭದ ಬೆನ್ನಲ್ಲಿಯೇ ಚಾಮುಂಡಿ ಬೆಟ್ಟದ ಶಿವಾರ್ಚಕ ಮಂಗಳವಾರ ನಿಧರಾಗಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಅದ್ದೂರಿ ಚಾಲನೆ ಸಿಕ್ಕಿತ್ತು. ಇದರ ನಡುವೆಯೇ ಈ ಅವಗಢ ಸಂಭವಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರಾಗಿದ್ದ ವಿ. ರಾಜು ಹಠಾತ್ ನಿಧನರಾಗಿದ್ದಾರೆ. ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧ ಮಾಡಲಾಗಿದೆ. ಸೋಮವಾರ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ,ರಾಜು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಈ ಕಾರಣದಿಂದಾಗಿ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನ ಇರೋದಿಲ್ಲ. ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ವರದಿಯಾಗಿದೆ.