ಹಾಸನ, ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ದಿಢೀರ್ ಬದಲಾವಣೆ! ಹಲವು ರೈಲುಗಳು ರದ್ದು! | Train Services Cancelled On March 16 Due To Underpass Construction Between Hassan And Mavinakere Stations Gdp

ಹಾಸನ, ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ದಿಢೀರ್ ಬದಲಾವಣೆ! ಹಲವು ರೈಲುಗಳು ರದ್ದು! | Train Services Cancelled On March 16 Due To Underpass Construction Between Hassan And Mavinakere Stations Gdp



ಹಾಸನ, ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ದಿಢೀರ್ ಬದಲಾವಣೆ! ಹಲವು ರೈಲುಗಳು ರದ್ದು! | Train Services Cancelled On March 16 Due To Underpass Construction Between Hassan And Mavinakere Stations Gdp

ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಕೆಳಸೇತುವೆ ನಿರ್ಮಾಣ ಕಾಮಗಾರಿಯಿಂದಾಗಿ, ದಕ್ಷಿಣ ಪಶ್ಚಿಮ ರೈಲ್ವೆಯು ಮಾರ್ಚ್ 16 ರಂದು ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳು ಅಂದು ಸಂಚರಿಸುವುದಿಲ್ಲ.

ದಕ್ಷಿಣ ಪಶ್ಚಿಮ ರೈಲ್ವೆಯ ವತಿಯಿಂದ ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವಿನ ಭಾಗದಲ್ಲಿ ಕೆಳಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ಕಾಮಗಾರಿಯನ್ನು ಸುರಕ್ಷಿತವಾಗಿ ಮತ್ತು ವೇಗವಾಗಿ ಪೂರ್ಣಗೊಳಿಸಲು ಕೆಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಕಾಮಗಾರಿಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್ 16ರಂದು ಕೆಲವು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ದಿನ ಪ್ರಯಾಣ ಮಾಡಲು ಯೋಜಿಸಿದ್ದ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಂಡುಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

ಮಾರ್ಚ್ 16ರಂದು ರದ್ದುಪಡಿಸಲಾದ ರೈಲು

ಮಾರ್ಚ್ 16ರಂದು ರದ್ದುಪಡಿಸಲಾದ ರೈಲುಗಳಲ್ಲಿ ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಪ್ರಮುಖವಾಗಿದೆ. ಈ ರೈಲು ಸಾಮಾನ್ಯವಾಗಿ ದಿನನಿತ್ಯ ಪ್ರಯಾಣಿಕರಿಗೆ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದ್ದು, ಅದರ ಸಂಚಾರ ಆ ದಿನ ನಡೆಯುವುದಿಲ್ಲ.

ಅದೇ ರೀತಿ ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಕೂಡ ಮಾರ್ಚ್ 16ರಂದು ಸಂಚರಿಸುವುದಿಲ್ಲ. ಈ ರೈಲು ಮೈಸೂರು ಹಾಗೂ ತಾಳಗುಪ್ಪ ನಡುವಿನ ಪ್ರಯಾಣಿಕರಿಗೆ ಮಹತ್ವದ ಸಂಪರ್ಕ ಕಲ್ಪಿಸುವ ಸೇವೆಯಾಗಿದೆ.

ಇದರ ಜೊತೆಗೆ ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲು ಸಂಚಾರವೂ ಆ ದಿನ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾಮಗಾರಿ ಪೂರ್ಣಗೊಂಡ ನಂತರ ರೈಲು ಸಂಚಾರ ಮತ್ತಷ್ಟು ಸುಗಮ

ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ನಡೆಯುತ್ತಿರುವ ಕೆಳಸೇತುವೆ ನಿರ್ಮಾಣ ಕಾಮಗಾರಿ ರೈಲು ಮಾರ್ಗದ ಸುರಕ್ಷತೆ ಹಾಗೂ ಭವಿಷ್ಯದ ಸಂಚಾರ ಸುಗಮತೆಗೆ ಅಗತ್ಯವಾಗಿದೆ. ಈ ಕಾಮಗಾರಿ ಪೂರ್ಣಗೊಂಡ ನಂತರ ರೈಲು ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಆದ್ದರಿಂದ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆ ಮಾಡುವ ಮುನ್ನ ರೈಲುಗಳ ವೇಳಾಪಟ್ಟಿ ಮತ್ತು ಸಂಚಾರ ಸ್ಥಿತಿಯನ್ನು ಪರಿಶೀಲಿಸಿ ಬಳಿಕವೇ ಟಿಕೆಟ್‌ಗಳನ್ನು ಬುಕ್ ಮಾಡಿಕೊಳ್ಳುವುದು ಉತ್ತಮ ಎಂದು ರೈಲ್ವೆ ಇಲಾಖೆ ಸಲಹೆ ನೀಡಿದೆ.



Source link

Leave a Reply

Your email address will not be published. Required fields are marked *