Headlines

Relationship ಹುಡುಗಿಯಂತೆ ಕಾಣಲು ಇನ್‌ಸ್ಟಾಗ್ರಾಂ ಫಿಲ್ಟರ್ ಬಳಕೆ, 52ರ ಹರೆಯದ ಲವರ್ ಹತ್ಯೆಗೈದ 26ರ ಯುವಕ | Instagram Filter Cause 52 Year Old Woman Death By 26 Year Old Lover In Up

Relationship ಹುಡುಗಿಯಂತೆ ಕಾಣಲು ಇನ್‌ಸ್ಟಾಗ್ರಾಂ ಫಿಲ್ಟರ್ ಬಳಕೆ, 52ರ ಹರೆಯದ ಲವರ್ ಹತ್ಯೆಗೈದ 26ರ ಯುವಕ | Instagram Filter Cause 52 Year Old Woman Death By 26 Year Old Lover In Up



Relationship ಹುಡುಗಿಯಂತೆ ಕಾಣಲು ಇನ್‌ಸ್ಟಾಗ್ರಾಂ ಫಿಲ್ಟರ್ ಬಳಕೆ, 52ರ ಹರೆಯದ ಲವರ್ ಹತ್ಯೆಗೈದ 26ರ ಯುವಕ | Instagram Filter Cause 52 Year Old Woman Death By 26 Year Old Lover In Up

ಯುವತಿಯಂತೆ ಕಾಣಲು 52ರ ಹರೆಯದ ಮಹಿಳೆಯೊಬ್ಬಳು ಇನ್‌ಸ್ಟಾಗ್ರಾಂ ಫಿಲ್ಟರ್ ಬಳಸಿ ಪೋಟೋ ಪೋಸ್ಟ್ ಮಾಡಿದ್ದಾಳೆ. ಬಳಿಕ 26ರ ಯುವಕನ ಮೋಹದ ಬಲೆಗೆ ಬೀಳಿಸಿದ್ದಾಳೆ. ಈಕೆ 52ರ ಹರೆಯದ ಮಹಿಳೆ ಅನ್ನೋದು ಗೊತ್ತಾಗುತ್ತಿದ್ದಂತೆ ಯುವಕ ತನ್ನ ಲವರ್ ಕತೆ ಮುಗಿಸಿದ ಘಟನೆ ನಡೆದಿದೆ.

ಲಖನೌ (ಸೆ.03) ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಬಳಿಕ ಸ್ನೇಹ, ಪ್ರೀತಿ ಅರ್ಥಪಡೆದ ಮದುವೆಯಾದ ಹಲವು ಊದಾಹರಣೆಗಳಿವೆ. ಇದೇ ವೇಳೆ ಸೋಶಿಯಲ್ ಮೀಡಿಯಾದಲ್ಲಿನ ಫೋಟೋ ನೋಡಿ ಪ್ರೀತಿ ಮಾಡಿ ಮೋಸ ಹೋದ ಹಲವರಿದ್ದಾರೆ. ಇದೀಗ ಇದೇ ರೀತಿ ಇನ್‌ಸ್ಟಾಗ್ರಾಂ ಫೋಟೋ ನೋಡಿ ಪ್ರೀತಿ ಹುಟ್ಟಿದ ಕತೆ ಇದೆ. ಆದರೆ ಈ ಪ್ರೀತಿ ಕೊಲೆಯಲ್ಲಿ ಅಂತ್ಯವಾಗಿದೆ. ಇನ್‌‌ಸ್ಟಾಗ್ರಾಂ ಫಿಲ್ಟರ್ ಬಳಸಿ 52ರ ಮಹಿಳೆ ಫೋಟೋ ಪೋಸ್ಟ್ ಮಾಡಿದ್ದಾಳೆ. ಈ ಫೋಟೋ ನೋಡಿ 26ರ ಯುವಕನಿಗೆ ಪ್ರೀತಿ ಶುರುವಾಗಿದೆ. ಮೆಸೇಜ್ ಬಳಿಕ ಫೋನ್ ಮೂಲಕ ಚಾಟಿಂಗ್ ಶುರುವಾಗಿದೆ. ಆದರೆ ಈ ಪ್ರೀತಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರದಲ್ಲಿ ನಡೆದಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯ

26ರ ಹರೆಯದ ಅರುಣ್ ರಜಪೂತ್ ಹೆಚ್ಚು ಸಮಯ ಸೋಶಿಯಲ್ ಮೀಡಿಯಾದಲ್ಲೇ ಈಜಾಡುತ್ತಿದ್ದ. ಸುಂದರ ಹುಡುಗಿಯರ ಫೋಟೋ ಇರುವ ಪ್ರೊಫೈಲ್ ಇದ್ದರೆ ಸಾಕು ಮೆಸೇಜ್ ಮಾಡುತ್ತಿದ್ದ. ಹೀಗೆ ಪಿಯುಸಿ ಹುಡುಗಿಯಂತೆ ಕಾಣುತ್ತಿದ್ದ 52ರ ಹರೆಯದ ರಾಣಿಗೂ ಮೇಸೇಜ್ ಹಾಕಿದ್ದಾನೆ. ಕೆಲ ದಿನಗಳ ಬಳಿಕ ರಾಣಿಯಿಂದ ಪ್ರತಿಕ್ರಿಯೆ ಬಂದಿದೆ. ಅರುಣ್ ರಜಪೂತ್‌ಗೆ ಖುಷಿಗೆ ಪಾರವೇ ಇರಲಿಲ್ಲ. ಈತನೂ ಮೇಸೇಜ್ ಮಾಡಿದ್ದ. ಅಲ್ಲಿಗೆ ಅರುಣ್ ರಜಪೂತ್ ಹಾಗೂ ರಾಣಿ ನಡುವೆ ಸ್ನೇಹ ಆರಂಭಗೊಂಡಿತ್ತು.

ಫೋನ್ ಮೂಲಕ ಮಾತುಕತೆ, ಯುವಕನ ಆರ್ಥಿಕ ಸಂಕಷ್ಟಕ್ಕೂ ನೆರವು

ಫಿಲ್ಟರ್ ಬಳಸಿ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದ ಕಾರಣ 52ರ ಹರೆಯದ ರಾಣಿ ಹುಡುಗಿಯಂತೆ ಕಂಗೊಳಿಸಿದ್ದಳು. ಬಳಿಕ ಇವರಿಬ್ಬರ ಸ್ನೇಹ ಘಾಡವಾಗಿದೆ. ಫೋನ್ ನಂಬರ್ ವಿನಿಮಯ ಮಾಡಿದ್ದಾರೆ. ಫೋನ್ ಮೂಲಕ ಮಾತುಕತೆ ಶುರುವಾಗಿದೆ. ಆಕೆಯೂ ತನ್ನ ವಯಸ್ಸು ಹೇಳಲಿಲ್ಲ. ಈತ ಕೂಡ ಕೇಳಲಿಲ್ಲ. ಮಾತುಗಳು ಕೊನೆಗೆ ರೋಮ್ಯಾಂಟಿಕ್ ಮೂಡ್‌ಗೆ ತಲುಪಿದೆ. ಇದರ ನಡುವೆ ಯುವಕನ ಆರ್ಥಿಕ ಸಂಕಷ್ಟಕ್ಕೂ ಆಕೆ ನೆರವು ನೀಡಿದ್ದಾಳೆ. ಒಂದಿಷ್ಟು ಹಣ ನೀಡುತ್ತಾ ಬಂದಿದ್ದಾಳೆ.

ಪುರುಷರ ಬೆವರ ವಾಸನೆಯಿಂದ ಮಹಿಳೆಯರಿಗೆ ಏನೇನೋ ಸುಖ ಸಿಗತ್ತಂತೆ! ಅಧ್ಯಯನ ಏನ್ ಹೇಳಿದೆ ನೋಡಿ

ಮೊದಲ ಭೇಟಿಯಲ್ಲೇ ಯುವಕನಿಗೆ ನಿರಾಸೆ

ಯುವಕ ಕೂಡ ಮದುವೆಯಾಗುವುದಾಗಿ ಮಾತು ಕೊಟ್ಟಿದ್ದಾನೆ. ಬಳಿಕ ಇವರಿಬ್ಬರು ಭೇಟಿಯಾಗಲು ನಿರ್ಧರಿಸಿದ್ದಾರೆ. ಟಿಪ್ ಟಾಪ್ ಆಗಿ ರೆಡಿಯಾಗಿ ತನ್ನ ಲವರ್ ಭೇಟಿಯಾಗಲು ಅರುಣ್ ರಜಪೂತ್ ತೆರಳಿದ್ದಾನೆ. ತನ್ನ ಆಪ್ತ ಗೆಳೆಯರ ಬಳಿ ಗೆಳತಿ ಭೇಟಿಯಾಗುತ್ತಿರುವ ಸಂತೋಷವನ್ನು ಹಂಚಿಕೊಂಡಿದ್ದ. ಎಲ್ಲಾ ತಯಾರಿಯೊಂದಿಗೆ ಲವರ್ ಭೇಟಿಯಾಗಿದಾ ಅರುಣ್ ರಜಪೂತ್‌ಗೆ ಭಾರಿ ನಿರಾಸೆಯಾಗಿದೆ. ಆಕೆ ಹುಡುಗಿ, ಯವತಿ ಅಲ್ಲ ಮುದುಕಿ ಎಂದು ಆಕ್ರೋಶಗೊಂಡಿದ್ದಾನೆ.

1 ರಿಂದ 1.5 ಲಕ್ಷ ರೂಪಾಯಿ ಆಕೆಯಿಂದ ಅರುಣ್ ರಜಪೂತ್ ಪಡೆದುಕೊಂಡಿದ್ದ. ಮದುವೆಯಾಗುವುದಾಗಿ ಮಾತು ಕೊಟ್ಟಿದ್ದ. ಇದರ ಜೊತೆಗೆ ರೊಮ್ಯಾಂಟಿಕ್ ಮಾತುಕತೆಗಳು ನಡೆದಿದೆ. ಮೊದಲ ಭೇಟಿಯಲ್ಲೇ ರಾಣಿ ತನ್ನ ಮದುವೆಯಾಗುವಂತೆ ಅರುಣ್ ರಜಪೂತ್‌ಗೆ ಒತ್ತಾಯ ಮಾಡಿದ್ದಾಳೆ. ಆದರೆ ಇದನ್ನು ಯುವಕ ನಿರಾಕರಿಸಿದ್ದಾನೆ. ಫಿಲ್ಟರ್ ಫೋಟೋ ನೋಡಿ ಇಷ್ಚಪಟ್ಟೆ. ಆದರೆ ವಯಸ್ಸು ಇಷ್ಟಾಗಿದೆ. ಹೇಗೆ ಮದುವೆಯಾಗಲಿ, ಸಾಧ್ಯವಿಲ್ಲ ಎಂದಿದ್ದಾನೆ. ಅಲ್ಲಿಗೆ ಇಬ್ಬರಿಗೂ ಜಗಳ ಶುರುವಾಗಿದೆ. ತನ್ನಿಂದ ಪಡೆದುಕೊಂಡಿರವ ಹಣ ವಾಪಾಸ್ ನೀಡುವಂತೆ ಸೂಚಿಸಿದ್ದಾಳೆ. ಇಷ್ಟೇ ಅಲ್ಲ ಪ್ರೀತಿಸಿ ವಂಚಿಸಿದ ಅರುಣ್ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾಳೆ.

ಮತ್ತೊಂದು ಭೇಟಿಯಲ್ಲಿ ಲವರ್ ಕತೆ ಕ್ಲೋಸ್

ಮದುವೆಯಾಗುವಂತೆ ಒತ್ತಾಯ, ಹಣ ವಾಪಸ್ ನೀಡುವಂತೆ ಎಚ್ಚರಿಕೆಯಿಂದ ಅರುಣ್ ರಜಪೂತ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ. ಈ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಬಳಿಕ ಆಕೆಯ ದುಪ್ಪಟದಿಂದ ಬಿಗಿದು ಲವರ್ ಹತ್ಯೆ ಮಾಡಿದ್ದಾನೆ. ನಿರ್ಜನ ಪ್ರದೇಶದಲ್ಲೇ ಆಕೆಯ ಮೃತದೇಹ ಎಸೆದು ಪರಾರಿಯಾಗಿದ್ದಾನೆ. ತಿಖೆ ನಡೆಸಿದ ಪೊಲೀಸರು ಅರುಣ್ ರಜಪೂತ್ ಬಂಧಿಸಿ ವಿಚಾರಣೆ ನಡೆಸಿದಾಗ ನಡೆಗ ಘಟನೆ ಬಯಲಾಗಿದೆ.

 



Source link

Leave a Reply

Your email address will not be published. Required fields are marked *