
<p>ದುಬೈ: 2025ರ ಏಷ್ಯಾಕಪ್ ಟೂರ್ನಿಯ ಫೈನಲ್ನಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಭಾರತವನ್ನು ಸೋಲಿಸಲು ಪಾಕಿಸ್ತಾನಕ್ಕೆ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಮಾಸ್ಟರ್ ಪ್ಲಾನ್ ಹೇಳಿಕೊಟ್ಟಿದ್ದಾರೆ. ಏನದು ನೋಡೋಣ ಬನ್ನಿ.</p><img><p>ಏಷ್ಯಾಕಪ್ ಟೂರ್ನಿಯ ಸೂಪರ್-4 ಹಂತದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಒಂದು ರೀತಿ ವರ್ಚುವಲ್ ಸೆಮಿಫೈನಲ್ ಪಂದ್ಯ ಎನಿಸಿಕೊಂಡಿದ್ದ ಕಾದಾಟದಲ್ಲಿ ಪಾಕಿಸ್ತಾನ ತಂಡವು 11 ರನ್ ರೋಚಕ ಜಯ ಸಾಧಿಸುವ ಮೂಲಕ ಫೈನಲ್ಗೆ ಲಗ್ಗೆಯಿಟ್ಟಿದೆ.</p><img><p>ಇದೀಗ ಏಷ್ಯಾಕಪ್ ಫೈನಲ್ನಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಈ ಪಂದ್ಯವು ಸೆಪ್ಟೆಂಬರ್ 28ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದೆ.</p><img><p>ಅಂದಹಾಗೆ 41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾಕಪ್ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಸಾಕಷ್ಟು ಕುತೂಹಲ ಗರಿಗೆದರಿವೆ.</p><img><p>ಈಗಾಗಲೇ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಬದ್ದ ಎದುರಾಳಿ ಪಾಕಿಸ್ತಾನ ಎದುರು ಗ್ರೂಪ್ ಹಂತದಲ್ಲಿ ಹಾಗೂ ಸೂಪರ್-4 ಹಂತದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿದ್ದು, ಇದೀಗ ಹ್ಯಾಟ್ರಿಕ್ ಗೆಲುವಿನೊಂದಿಗೆ 9ನೇ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದೆ.</p><img><p>ಇನ್ನೊಂದೆಡೆ ಫೈನಲ್ನಲ್ಲಿ ಭಾರತ ಎದುರು ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ಪಾಕಿಸ್ತಾನಕ್ಕೆ, ಭಾರತವನ್ನು ಸೋಲಿಸಲು ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಮಾಸ್ಟರ್ ಪ್ಲಾನ್ ಹೇಳಿಕೊಟ್ಟಿದ್ದಾರೆ.</p><img><p>ಪಾಕಿಸ್ತಾನ ಚಾನೆಲ್ವೊಂದರಲ್ಲಿ ಭಾಗವಹಿಸಿ ಮಾತನಾಡಿದ ಶೋಯೆಬ್ ಅಖ್ತರ್, ಅಭಿಷೇಕ್ ಶರ್ಮಾ ಟೀಂ ಇಂಡಿಯಾಗೆ ವಿಸ್ಪೋಟಕ ಆರಂಭ ಒದಗಿಸಿಕೊಡುತ್ತಿದ್ದಾರೆ. ಪಾಕಿಸ್ತಾನ ತಂಡವು ಆತನನ್ನು ಮೊದಲ ಎರಡು ಓವರ್ನೊಳಗೆ ಔಟ್ ಮಾಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ.</p><img><p>ಪಾಕಿಸ್ತಾನವು 20 ಓವರ್ ಬೌಲಿಂಗ್ ಮಾಡಬೇಕಿಲ್ಲ, ಅಷ್ಟರೊಳಗಾಗಿ ಭಾರತವನ್ನು ಆಲೌಟ್ ಮಾಡಬೇಕು ಎನ್ನುವುದು ನೆನಪಿರಲಿ. ಆಗ ಭಾರತ ಗೇಮ್ ಪ್ಲಾನ್ ಚೇಂಜ್ ಮಾಡಲಿದೆ. ಮೊದಲ ಎರಡು ಓವರ್ನಲ್ಲೇ ಅಭಿಷೇಕ್ ಶರ್ಮಾ ಔಟ್ ಮಾಡಿದ್ರೆ, ಭಾರತದ ತಲೆನೋವು ಹೆಚ್ಚಲಿದೆ ಎಂದು ಅಖ್ತರ್ ಹೇಳಿದ್ದಾರೆ.</p>
Source link
ಏಷ್ಯಾಕಪ್ ಫೈನಲ್ನಲ್ಲಿ ಭಾರತ ಸೋಲಿಸಲು ಪಾಕ್ಗೆ ಮಾಸ್ಟರ್ ಪ್ಲಾನ್ ಹೇಳಿಕೊಟ್ಟ ಶೋಯೆಬ್ ಅಖ್ತರ್!