Asia Cup 2025 Final: ಭಾರತ-ಪಾಕಿಸ್ತಾನ ಕಾದಾಟದಲ್ಲಿ ಯಾರಾಗ್ತಾರೆ ಚಾಂಪಿಯನ್? ಅಚ್ಚರಿ ಭವಿಷ್ಯ ನುಡಿದ ವಾಸೀಂ ಅಕ್ರಂ

Asia Cup 2025 Final: ಭಾರತ-ಪಾಕಿಸ್ತಾನ ಕಾದಾಟದಲ್ಲಿ ಯಾರಾಗ್ತಾರೆ ಚಾಂಪಿಯನ್? ಅಚ್ಚರಿ ಭವಿಷ್ಯ ನುಡಿದ ವಾಸೀಂ ಅಕ್ರಂ



Asia Cup 2025 Final: ಭಾರತ-ಪಾಕಿಸ್ತಾನ ಕಾದಾಟದಲ್ಲಿ ಯಾರಾಗ್ತಾರೆ ಚಾಂಪಿಯನ್? ಅಚ್ಚರಿ ಭವಿಷ್ಯ ನುಡಿದ ವಾಸೀಂ ಅಕ್ರಂ
<p>ದುಬೈ: 2025ರ ಏಷ್ಯಾಕಪ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದ್ದು, ಫೈನಲ್‌ನಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ – ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಗೆಲ್ಲೋರು ಯಾರು ಎನ್ನುವ ಕುರಿತಂತೆ ಪಾಕ್ ದಿಗ್ಗಜ ಕ್ರಿಕೆಟಿಗ ವಾಸೀಂ ಅಕ್ರಂ ಅಚ್ಚರಿ ಭವಿಷ್ಯ ನುಡಿದಿದ್ದಾರೆ.</p><p>&nbsp;</p><img><p>2025ರ ಏಷ್ಯಾಕಪ್ ಫೈನಲ್‌ಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 8 ಗಂಟೆಯಿಂದ ಆರಂಭವಾಗಲಿರುವ ಹೈವೋಲ್ಟೇಜ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.</p><img><p>41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಸಲ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡುತ್ತಿವೆ. ಈ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದ್ದು, ಈಗಾಗಲೇ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.</p><img><p>ಭಾರತ ತಂಡವು ಈಗಾಗಲೇ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿದ್ದು, ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಇನ್ನು ಎರಡು ಸಲ ಭಾರತಕ್ಕೆ ಶರಣಾಗಿರುವ ಪಾಕಿಸ್ತಾನ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.</p><img><p>ಹೀಗಿರುವಾಗಲೇ ಏಷ್ಯಾಕಪ್ ಫೈನಲ್ ಗೆಲ್ಲುವವರು ಯಾರು ಎನ್ನುವ ಕುತೂಹಲ ಜೋರಾಗಿದೆ. ಈ ಕುರಿತಂತೆ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಅಚ್ಚರಿ ಭವಿಷ್ಯ ನುಡಿದಿದ್ದಾರೆ.</p><img><p>ಭಾರತ ಈ ಬಾರಿ ಏಷ್ಯಾಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಪಾಕಿಸ್ತಾನ ಯಾವಾಗ ಬೇಕಿದ್ದರೂ ತಿರುಗೇಟು ನೀಡಬಹುದು. ಫೈನಲ್‌ ಗೆಲ್ಲಲು ಪಾಕಿಸ್ತಾನಕ್ಕೆ ವಾಸೀಂ ಅಕ್ರಂ ಹೊಸ ಸಲಹೆ ನೀಡಿದ್ದಾರೆ.</p><img><p>ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಫೈನಲ್‌ನಲ್ಲಿ ಭಾನುವಾರ ಪಾಕ್ ಬೌಲರ್‌ಗಳು ಮಾರಕ ದಾಳಿ ನಡೆಸುವ ವಿಶ್ವಾಸವಿದೆ. ಈ ಪಂದ್ಯದಲ್ಲಿ ಖಂಡಿತ ಭಾರತ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದೆ.</p><img><p>ಆದರೆ ಈ ಮಾದರಿಯ ಕ್ರಿಕೆಟ್‌ನಲ್ಲಿ ಏನು ಬೇಕಾದರೂ ಆಗಬಹುದು, ಒಂದೊಳ್ಳೆಯ ಇನ್ನಿಂಗ್ಸ್‌, ಒಂದೊಳ್ಳೆಯ ಸ್ಪೆಲ್ ಪಂದ್ಯದ ದಿಕ್ಕನ್ನೇ ಬದಲಿಸಬಹುದು ಎಂದು ವಾಸೀಂ ಅಕ್ರಂ ಹೇಳಿದ್ದಾರೆ.</p><img><p>ಭಾರತದ ಅರಂಭಿಕ ಜೋಡಿಯಾದ ಶುಭ್‌ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಅವರನ್ನು ಆದಷ್ಟು ಬೇಗ ಔಟ್ ಮಾಡಬೇಕು. ಪಾಕ್ ಬೌಲರ್‌ಗಳು ಹೀಗೆ ಮಾಡಿದರೆ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಒತ್ತಡಕ್ಕೆ ಸಿಲುಕಲಿದ್ದಾರೆ ಎನ್ನುವ ಕಿವಿಮಾತನ್ನು ಅಕ್ರಂ ಪಾಕ್‌ ಬೌಲರ್‌ಗಳಿಗೆ ಹೇಳಿದ್ದಾರೆ.</p><img><p>ಪಾಕಿಸ್ತಾನ ತಂಡವು ಆತ್ಮವಿಶ್ವಾಸದಿಂದ ಇರಬೇಕು, ಜವಾಬ್ದಾರಿಯುತ ಆಟವಾಡಬೇಕು. ಒಂದುವೇಳೆ ಪಾಕಿಸ್ತಾನ ಆರಂಭದಲ್ಲೇ ವಿಕೆಟ್ ಕಬಳಿಸಿದರೆ ಭಾರತವನ್ನು ಬ್ಯಾಕ್‌ಫುಟ್‌ಗೆ ತಳ್ಳಬಹುದು. ಯಾವ ತಂಡ ಸರ್ವಶ್ರೇಷ್ಠ ಪ್ರದರ್ಶನ ನೀಡುತ್ತೋ ಆ ತಂಡ ಗೆಲ್ಲಲಿದೆ ಎಂದು ಅಕ್ರಂ ಹೇಳಿದ್ದಾರೆ.</p>



Source link

Leave a Reply

Your email address will not be published. Required fields are marked *