Headlines

ಪಾಕ್ ಎದುರು ಹೊಸ ಅಸ್ತ್ರ ಕಣಕ್ಕಿಳಿಯಲು ಮಾಸ್ಟರ್ ಪ್ಲಾನ್ ಮಾಡಿದ ಸೂರ್ಯ-ಗಂಭೀರ್ ಜೋಡಿ!

ಪಾಕ್ ಎದುರು ಹೊಸ ಅಸ್ತ್ರ ಕಣಕ್ಕಿಳಿಯಲು ಮಾಸ್ಟರ್ ಪ್ಲಾನ್ ಮಾಡಿದ ಸೂರ್ಯ-ಗಂಭೀರ್ ಜೋಡಿ!



ಪಾಕ್ ಎದುರು ಹೊಸ ಅಸ್ತ್ರ ಕಣಕ್ಕಿಳಿಯಲು ಮಾಸ್ಟರ್ ಪ್ಲಾನ್ ಮಾಡಿದ ಸೂರ್ಯ-ಗಂಭೀರ್ ಜೋಡಿ!
<p>ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಏನದು ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.</p><p>&nbsp;</p><img><p>ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಟೂರ್ನಿಯಲ್ಲಿ ಯುಎಇ ಎದುರು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಇದೀಗ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಿಸಲು ಸಜ್ಜಾಗಿದೆ.</p><img><p>ಯುಎಇ ತಂಡವನ್ನು ಮೊದಲಿಗೆ ಕೇವಲ 57 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಆ ನಂತರ ಕೇವಲ 4.3 ಓವರ್‌ಗಳಲ್ಲಿ ಗುರಿ ತಲುಪಿದೆ.ಇದೀಗ ಭಾರತ ತಂಡವು ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.</p><img><p>ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇದೇ ಸೆಪ್ಟೆಂಬರ್ 14ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ.</p><img><p>ಇದೀಗ ಪಾಕ್‌ ಎದುರಿನ ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾದ ಪ್ರಮುಖ ವೇಗದ ಅಸ್ತ್ರ ಅರ್ಶದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲು ಸೂರ್ಯ-ಗಂಭೀರ್ ಜೋಡಿ ರಣತಂತ್ರ ಹೆಣೆದಿದೆ.</p><img><p>ಅರ್ಶದೀಪ್ ಸಿಂಗ್ ಹೊಸ ಚೆಂಡಿನಲ್ಲಿ ಹಾಗೂ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅರ್ಶದೀಪ್ ಸಿಂಗ್ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.</p><img><p>ಪಾಕ್ ಅಪಾಯಕಾರಿ ಬ್ಯಾಟರ್‌ಗಳನ್ನು ಆರಂಭದಲ್ಲೇ ಕಟ್ಟಿಹಾಕುವ ಉದ್ದೇಶದಿಂದ, ಅರ್ಶದೀಪ್ ಸಿಂಗ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಮಣೆಹಾಕಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತೀರ್ಮಾನಿಸಿದೆ ಎಂದು ವರದಿಯಾಗಿದೆ.</p><img><p>ಭಾರತ ಸೂಪರ್ 4 ಹಂತ ಪ್ರವೇಶಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಎದುರಿನ ಪಂದ್ಯವು ಟೀಂ ಇಂಡಿಯಾ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿರುವುದರಿಂದ, ಅರ್ಶದೀಪ್ ಸಿಂಗ್ ಮೇಲೆ ಸಾಕಷ್ಟು ನಿರೀಕ್ಷೆಯಿಡಲಾಗಿದೆ.</p>



Source link

Leave a Reply

Your email address will not be published. Required fields are marked *