ಕರ್ನಾಟಕದ ಐಟಿ ಸಚಿವರಿಗೆ ಅಸ್ಸಾಂ ಕೌಂಟರ್ ಸಿಎಂ
ಬೆಂಗಳೂರು, ಅಕ್ಟೋಬರ್ 27: ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ (ಪ್ರಿಯಾಂಕ್ ಖರ್ಗೆ) ನೀಡಿದ್ದ ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ. ಐಸಿಸಿ ಅಧ್ಯಕ್ಷ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನ ‘ಫಸ್ಟ್ ಆಡಿಟ್’ ಎಂದು ಕರೆದಿರುವ ಹಿಮಂತ್, ಪ್ರಿಯಾಂಕ್ ಹೇಳಿಕೆ ಅಸ್ಸಾಂ ರಾಜ್ಯದ ವಿದ್ಯಾವಂತ ಯುವಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ಕೌಂಟರ್
🚨ಅಸ್ಸಾಂ Vs ಕರ್ನಾಟಕ
ಪ್ರಿಯಾಂಕ್ ಖರ್ಗೆ ವಿರುದ್ಧ ಹಿಮಂತ ಬಿಸ್ವ ಶರ್ಮಾ
ಸೆಮಿಕಂಡಕ್ಟರ್ ಯೋಜನೆಗಳನ್ನು ಕರ್ನಾಟಕದಿಂದ ಗುಜರಾತ್ ಮತ್ತು ಅಸ್ಸಾಂಗೆ ಸ್ಥಳಾಂತರಿಸಲಾಗಿದೆ ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯ ನಂತರ ವಿವಾದವನ್ನು ಹುಟ್ಟುಹಾಕಿದರು, ಅವರು “ಪ್ರತಿಭೆಯ ಕೊರತೆ” ಎಂದು ವರದಿ ಮಾಡಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ… pic.twitter.com/3xMU7Ukq2y
— ನಬಿಲಾ ಜಮಾಲ್ (@nabilajamal_) ಅಕ್ಟೋಬರ್ 27, 2025
ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಸ್ಸಾಂ ಸಿಎಂ, ಈ ರೀತಿಯ ಹೇಳಿಕೆಗಳು ತೀವ್ರ ಅವಮಾನಕಾರಿ ಮತ್ತು ಅಪಹಾಸ್ಯಕರ. ಅಸ್ಸಾಂ ಯುವಕರ ಶ್ರಮ ಮತ್ತು ಪ್ರತಿಭೆಯನ್ನು ತೀವ್ರವಾಗಿ ಅವಹೇಳನ ಮಾಡುವಂತಿವೆ. ಅಸ್ಸಾಂನಲ್ಲಿ ಪ್ರತಿಭಾವಂತ ಯುವಕರು ಇಲ್ಲ ಎಂದು ಅವರು ಹೇಳಿರೋದು ಅಸ್ಸಾಂ ಯುವಜನರಿಗೆ ಮಾಡಿದ ಅವಮಾನ. ಹೀಗಾಗಿ ಪ್ರಿಯಾಂಕ್ ವಿರುದ್ಧ ನಾವು ಪ್ರಕರಣ ದಾಖಲಿಸಬಹುದು ಎಂದು ಮಾಧ್ಯಮಗಳಿಗೆ ಅವರು ಬಯಸುತ್ತಾರೆ
ಪ್ರಿಯಾಂಕ್ ಖರ್ಗೆ ಹೇಳಿಕೆ ಏನಾಗಿತ್ತು?
ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ತೀರ್ಮಾನವನ್ನು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ಗೆ ಏಕೆ ಹೋಗುತ್ತಿವೆ? ವಾಸ್ತವದಲ್ಲಿ ಬಯಸಿರೋದು ಬೆಂಗಳೂರನ್ನು. ಆದರೆ ಕರ್ನಾಟಕಕ್ಕೆ ಬರಬೇಕಾದ ಹೂಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ತಿರುಗಿಸುತ್ತಿದೆ. ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಅಲ್ಲಿ ಪ್ರತಿಭೆಗಳು ಇವೆಯೇ ಎಂದು ಪ್ರಶ್ನಿಸಿದರು. ಅವರ ಈ ಹೇಳಿಕೆಯೀಗ ವಿವಾದದ ರೂಪವಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 6:31 pm, ಸೋಮ, 27 ಅಕ್ಟೋಬರ್ 25