ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ದಾವಣಗೆರೆ, ಏಪ್ರಿಲ್ 13: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನ ಉಚ್ಚಾಟನೆ ಮಾಡಿದ್ದಕ್ಕೆ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದರ್ಶಿಗಳು ಹೋಗುತ್ತಿದ್ದ ವಾಹನಕ್ಕೆ ಚಪ್ಪಲಿ ತೋರಿಸಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಹೀಗಾಗಿ ಹನಗವಾಡಿಯ ಪಂಚಮಸಾಲಿ ಗುರುಪೀಠದ ಎದುರು ಭಾರೀ ಹೈಡ್ರಾಮಾವೇ ನಡೆದಿದೆ. ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದಶ್ರೀ, ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್ ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು….