ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಾಮಾನ್ಯ ಜನರಿಗೆ ಬಹಳ ಉಪಯುಕ್ತ: ಗೃಹ ಸಚಿವ ಡಾ. ಜಿ.ಪರಮೇಶ್ವರ
ಬೆಂಗಳೂರು, ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಾಮಾನ್ಯ ಜನರಿಗೆ ಬಹಳಸ ಉಪಯುಕ್ತವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಗೋವಿಂದರಾಜನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮನೆಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರನ್ನು ಬಹುತೇಕರು ಭಯದ ವಾತಾವರಣದಿಂದ ನೋಡುತ್ತಾರೆ. ಮನೆಗೆ ಬಂದು ಆತ್ಮೀಯವಾಗಿ ನಡೆದುಕೊಳ್ಳುವುದರಿಂದ ಜನಸ್ನೇಹಿಯಾಗುತ್ತಾರೆ ಎಂಬುದಾಗಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಕುರಿತು ಫೀಡ್ಬ್ಯಾಕ್ ತೆಗೆದುಕೊಳ್ಳುತ್ತೇವೆ. ಈ ಕಾರ್ಯಕ್ರಮದಲ್ಲಿ ಏನಾದರೂ ಬದಲಾವಣೆ ಮಾಡುವುದಿದ್ದರೆ…