Headlines

ಟ್ಯಾರಿಫ್ ಎಂದರೆ ಭಯೋತ್ಪಾದನೆ; 3ನೇ ವಿಶ್ವಮಹಾಯುದ್ಧ ಇದು: ಟ್ರಂಪ್ ನೀತಿ ಖಂಡಿಸಿದ ಬಾಬಾ ರಾಮದೇವ್

ಟ್ಯಾರಿಫ್ ಎಂದರೆ ಭಯೋತ್ಪಾದನೆ; 3ನೇ ವಿಶ್ವಮಹಾಯುದ್ಧ ಇದು: ಟ್ರಂಪ್ ನೀತಿ ಖಂಡಿಸಿದ ಬಾಬಾ ರಾಮದೇವ್


ನವೆಂಬರ್ 5: ಯೋಗ ಗುರು ಬಾಬಾ ರಾಮದೇವ್ (ಬಾಬಾ ರಾಮ್‌ದೇವ್) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ನೀತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ದೇಶದ ಮೇಲೆ ಟ್ಯಾರಿಫ್ ವಿಧಿಸುವುದು ಭಯೋತ್ಪಾದನೆ ಹರಿಬಿಟ್ಟಂತೆ ಎಂದು ಬಾಬಾ ರಾಮದೇವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಅಮೆರಿಕದ ಟ್ಯಾರಿಫ್ ಕ್ರಮವು ಭಾರತವೂ ಸೇರಿದಂತೆ ಇತರ ದೇಶಗಳ ಮೇಲೆ ಮಾಡಲಾಗುತ್ತಿರುವ ಆರ್ಥಿಕ ಯುದ್ಧವಾಗಿದೆ ಎಂದು ವಿಷಾದಿಸಿರುವ ಅವರು, ಈ ಆರ್ಥಿಕ ಯುದ್ಧವನ್ನು ಮೂರನೇ ವಿಶ್ವ ಮಹಾಯುದ್ಧದಂತೆ ಎಂದು ತುಲನೆ ಮಾಡಲಾಗಿದೆ.

ಆರ್ಥಿಕ ಯುದ್ಧಕ್ಕೆ ಸ್ವದೇಶೀ ಉತ್ತರ: ಬಾಬಾ ಕರೆ

ಅಮೆರಿಕ ಘೋಷಿಸಿರುವ ಆರ್ಥಿಕ ಯುದ್ಧಕ್ಕೆ ಭಾರತೀಯರು ಸ್ವದೇಶೀ ಮೂಲಕ ಪ್ರತ್ಯುತ್ತರ ಕೊಡಬೇಕು ಎಂದು ಪತಂಜಲಿ ಸಂಸ್ಥಾಪಕರು ಕರೆ ನೀಡಿದ್ದಾರೆ. ಸ್ವದೇಶೀ ವಸ್ತುಗಳನ್ನು ಜನರು ಖರೀದಿಸಿದರೆ ಸರ್ವಜನರ ಏಳ್ಗೆ ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: ವಂದೇ ಭಾರತ್ ಸ್ಲೀಪರ್ ಟ್ರೈನುಗಳ ಬಿಡುಗಡೆ ಮತ್ತಷ್ಟು ವಿಳಂಬ; ಕೆಲವು ಸಮಸ್ಯೆಗಳ ಪತ್ತೆ

‘ಟ್ಯಾರಿಫ್ ಎಂಬುದು ಭೀಕರವಾಗಿರುವ ಭಯೋತ್ಪಾದನೆ. ಮೂರನೇ ವಿಶ್ವ ಮಹಾಯುದ್ಧ ಎಂದರೆ ಅದು ಈ ಆರ್ಥಿಕ ಯುದ್ಧವೇ ಆಗಿದೆ. ಈ ಸಂದರ್ಭದಲ್ಲಿ ಬಡ ಮತ್ತು ಅಭಿವೃದ್ಧಿಶೀಲ ದೇಶಗಳ ಯೋಗಕ್ಷೇಮವು ಕನಿಷ್ಠ ಅಗತ್ಯವಾಗಿದೆ. ಅಧಿಕಾರದಲ್ಲಿರುವವರು ಸಾಮ್ರಾಜ್ಯವಾದಿ ಮತ್ತು ವಿಸ್ತರಣಾವಾದಿಗಳಾಗಿದ್ದಾರೆ’ ಎಂದು ಡೊನಾಲ್ಡ್ ಟ್ರಂಪ್ ವಿರುದ್ಧ ಬಾಬಾ ರಾಮದೇವ್ ಸಿಡಿಗುಟ್ಟಿದ್ದಾರೆ.

ಕೆಲವೇ ವ್ಯಕ್ತಿಗಳ ಬಳಿ ಅಧಿಕಾರ ಕೇಂದ್ರಿತವಾಗಿದೆ. ಅಸಮಾನತೆ, ಅನ್ಯಾಯ, ಶೋಷಣೆ ಹೆಚ್ಚಿನ ರೀತಿಯ ವ್ಯವಸ್ಥೆ ನಿರ್ಮಾಣವಾಗುತ್ತದೆ. ವಿಶ್ವಾದ್ಯಂತ ರಕ್ತಪಾತ, ಸಂಘರ್ಷ ಹೆಚ್ಚಾಗುತ್ತದೆ. ಹೀಗಾಗಿ ಅವರು ಕೂಡ ತಮ್ಮಯೊಳಗೆ ಇದ್ದು ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಮಿತಿಹೊಂದಿರುವಂತಹ ಧೋರಣೆಯನ್ನು ಬೆಳೆಸಿಕೊಳ್ಳಬೇಕು ಎಂದು ಪತಂಜಲಿ ಸಹ-ಸಂಸ್ಥಾಪಕರು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಸ್ವರ್ಗಸ್ಥ ಅಮ್ಮನ ಆಸೆ ತೀರಿಸಿದ ಮಗ; ಅದರಲ್ಲಿ ಎಲ್ಲ ರೈತರ ಸಾಲ ತೀರಿಸಿದ ಉದ್ಯಮಿ

ಆರ್ಥಿಕ ಯುದ್ಧಕ್ಕೆ ಸ್ವದೇಶೀ ಉತ್ತರ

ಅಮೆರಿಕದ ಟ್ಯಾರಿಫ್ ಕ್ರಮವು ಆರ್ಥಿಕ ಯುದ್ಧವಾಗಿದೆ. ಇದಕ್ಕೆ ಸ್ವದೇಶೀ ತತ್ವದ ಮೂಲಕ ಉತ್ತರ ಕೊಡಬಹುದು ಎಂದು ಹೇಳಿದ ರಾಮದೇವ್, ಭಾರತದ ಮಹೋನ್ನತ ವ್ಯಕ್ತಿಗಳಾದ ಮಹರ್ಷಿ ದಯಾನಂದ್, ಸ್ವಾಮಿ ವಿವೇಕಾನಂದ್ ಮೊದಲಾದ ಮಹನೀಯರು ಸ್ವದೇಶೀ ತತ್ವದ ಪ್ರತಿಪಾದನೆಯನ್ನು ಉಲ್ಲೇಖಿಸಿದ್ದಾರೆ.

‘ಸ್ವದೇಶೀ ಎಂಬುದು ಸ್ವಾವಲಂಬನೆ, ಹಾಗೂ ಕೊತ್ತಕೊನೆಯ ವ್ಯಕ್ತಿಯ ಅಭ್ಯುದಯ ಸಾಧಿಸುವಂತಹ ತತ್ವವಾಗಿದೆ. ಮಹರ್ಷಿ ದಯಾನಂದರಿಂದ ಹಿಡಿದಿ ಸ್ವಾಮಿ ವಿವೇಕಾನಂದವರೆಗೆ ಸಾಕಷ್ಟು ಮನಿಯರು ಸ್ವದೇಶೀ ತತ್ವ ಪ್ರತಿಪಾದನೆ ಮಾಡಿದ್ದಾರೆ. ಸರ್ವಜನರ ಏಳ್ಗೆ ಆಗಬೇಕು ಎಂದು ಎಲ್ಲರೂ ಹೇಳಿದ್ದಾರೆ. ನಿಮ್ಮ ಜೊತೆಗೆ, ನಿಮ್ಮ ಸುತ್ತಲಿರುವ ಜನರ ಏಳ್ಗೆ ಬದ್ಧರಾಗಿ. ಇದು ಸ್ವದೇಶೀ ತತ್ವದ ಮೂಲ’ ಎಂದು ಯೋಗ ಗುರುಗಳು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *