Headlines

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?


ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್ ನ (ಕಾಂಗ್ರೆಸ್) ಎಚ್‌ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (ಬಾಗಲಕೋಟ ಉಪಚುನಾವಣೆ) ಇದೇ ಏಪ್ರಿಲ್ 9 ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಟಿವಿ9 ಜತೆ ಮಾತನಾಡಿದ ರಾಮುಲು, ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು. ಈ ವೇಳೆ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *