ಬೆಂಗಳೂರು, ಫೆಬ್ರವರಿ 25: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು 6 ತಿಂಗಳು ಮಗುವಿನ ಬೆರಳನ್ನೇ ನರ್ಸ್ ಕತ್ತರಿಸಿರುವ ಬೆಂಗಳೂರಿನ ಘಟನೆ ನಗರದಲ್ಲಿ ನಡೆದಿದೆ. ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದು 19 ರಂದು ಫೇಜ್ ದಾಖಲಾಗಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಯಿತು. ಆದರೆ ನಿನ್ನೆ ಡ್ರಿಪ್ಸ್ ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಭಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ ಕಂದಮ್ಮ ನರಳಾಡುತ್ತಿರುವಾಗ, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ದೂರಿನಲ್ಲಿ ಏನಿದೆ?
6 ತಿಂಗಳ ತಮ್ಮ ಗಂಡು ಮಗು ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಹಿನ್ನೆಲೆ ಇಂದಿರಾನಗರದಲ್ಲಿರುವ ಚಿನ್ಮಯ ಮಿಷನ್ ಆತನನ್ನು ಕರೆತಂದು ಸಂಪರ್ಕಿಸಿದೆ. ಮಗುವಿಗೆ ತೀವ್ರ ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ಅವರು ಸೂಚಿಸಿದ್ದರು. 5-6 ದಿನಗಳ ನಂತರ ಫೆಬ್ರವರಿ 24 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಡಿಸ್ಚಾರ್ಜ್ಗೆ ನಿರ್ಧರಿಸಲಾಗಿದೆ. ನಾವು ಬಿಲ್ಲಿಂಗ್ ಕೌಂಟರ್ಗೆ ಹಣ ಪಾವತಿಸಲು ಹೋಗಿರುವ ಸಂದರ್ಭ, ನರ್ಸ್ ನಿರ್ಲಕ್ಷ್ಯಕ್ಕೆ ಮಗುವಿನ ಎಡಗೈ ಕಿರು ಬೆರಳು ಕಟ್ ಆಗಿದೆ. ಹೀಗಾಗಿ ವೈದ್ಯರು, ಸಿಬ್ಬಂದಿ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಂದೆ ವಿಜಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಶರಣಾದ ಯತ್ನ!
ಸತ್ಯ ಮರೆಮಾಚಲು ಯತ್ನ?
ಘಟನೆ ಬಳಿಕ ತುರ್ತು ಚಿಕಿತ್ಸಾ ಘಟಕಕ್ಕೆ ಕರೆದೊಯ್ದಿದೆ, ಗಾಯಕ್ಕೆ ಡ್ರೆಸ್ಸಿಂಗ್ ಮಾಡಲಾಗಿದೆ. ಹೀಗಿದ್ದರೂ ಯಾವುದೇ ದೊಡ್ಡ ಗಾಯವಾಗಿಲ್ಲ. ಮಗು ಚಿಕ್ಕದಾಗಿರುವ ಕಾರಣ ಗಾಯ ಆದಾಗಲೇ ಗುಣವಾಗುವುದು. ಆದರೆ ಘಟನೆಯಲ್ಲಿ ಮಗುವಿನ ಅರ್ಧ ಬೆರಳು ಕಟ್ ಆಗಿದೆ ಎಂದು ವಿಜಯ್ ಕುಮಾರ್ ಹೇಳಿದ್ದಾರೆ.
ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 12:34 pm, ಬುಧವಾರ, 25 ಫೆಬ್ರವರಿ 26