ಧಾಕಾ, ಡಿಸೆಂಬರ್ 25: ಬಾಂಗ್ಲಾದೇಶದಲ್ಲಿ ಹಿಂಸಾಚಾರ (ಬಾಂಗ್ಲಾದೇಶ ಹಿಂಸೆ) ಘಟನೆಗಳು ನಿಲ್ಲುತ್ತಲೇ ಇಲ್ಲ. ರಕ್ತಪಿಪಾಸುಗಳಂತೆ ವರ್ತಿಸುತ್ತಿರುವ ಕೆಲ ಜನರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ದೀಪು ಚಂದ್ರದಾಸ್ ಎಂಬ ಹಿಂದೂ ವ್ಯಕ್ತಿಯನ್ನು ಬಲಿಪಡೆದಿದ್ದ ದುರುಳರು ಇದೀಗ ಮತ್ತೊಬ್ಬ ಹಿಂದೂ ಧರ್ಮೀಯನನ್ನು ಕೊಂದಿದ್ದಾರೆ. ರಾಜ್ಬಾರಿ ಜಿಲ್ಲೆಯಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ.
ಈ ಘಟನೆ ನಿನ್ನೆ ಬುಧವಾರ ರಾತ್ರಿ 11 ಗಂಟೆಗೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಾಜಬರಿ ಜಿಲ್ಲೆಯ ಹೊಸಾಯಿದಂಗ ಓಲ್ಡ್ ಮಾರ್ಕೆಟ್ ಬಳಿ ಜನರ ಗುಂಪೊಂದು ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ನ ಮೇಲೆ ಹಲ್ಲೆ ಎಸಗಿದೆ. ಪಂಗಶಾ ಠಾಣೆ ಪೊಲೀಸರ ಪ್ರಕಾರ ಅಮೃತ್ ಮಂಡಲ್ ಹೊಸಾಯಿದಂಗ ಗ್ರಾಮದನಾಗಿದ್ದಾನೆ. ಆತ ಒಬ್ಬ ಸುಲಿಗೆಕೋರನಾಗಿದ್ದನೆಂದು ಸ್ಥಳೀಯ ನಿವಾಸಿಗಳು ಆರೋಪಿಸುತ್ತಿದ್ದಾರೆ ಎಂಬುದು ವಿಚಾರಣೆ ನಡೆಸುತ್ತಿರುವ ಮಾಹಿತಿ.
ಇದನ್ನೂ ಓದಿ: ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್ಪಿ ನಾಯಕ ತಾರಿಖ್ ರಹಮಾನ್
ಹಿಂದೆ ಇದೇ ರೀತಿ ಹಲ್ಲೆ ಮಾಡಿ ಸಾಯಿಸಿ ಸುಟ್ಟುಹಾಕಲಾಗಿದ್ದ ದೀಪು ಚಂದ್ರದಾಸ್ ವಿರುದ್ಧವೂ ಹೀಗೆ ಆರೋಪಗಳಿದ್ದುವು. ಆತ ಇಸ್ಲಾಂ ಧರ್ಮ ನಿಂದನೆ ಮಾಡಿದ್ದು ಸಾಯಿಸಿದ್ದಾನೆ ಎಂದು ಹೇಳಿದ್ದಾನೆ. ಆ ಆರೋಪ ಸುಳ್ಳೆಂಬುದು ಆದರೆ ಆಗಿತ್ತು. ಈಗ ಸಾಮ್ರಾಟ್ ಮೇಲೂ ಕೂಡ ಸುಲಿಗೆಯ ಆರೋಪ ಹೊರಿಸಿ, ಕೊಲೆಯನ್ನು ಸಮರ್ಥನೆ ಮಾಡಿಕೊಳ್ಳಲು ಯತ್ನಿಸುತ್ತಿರಬಹುದು.
ಬಾಂಗ್ಲಾದಲ್ಲಿ ದಟ್ಟವಾಗುತ್ತಿದೆ ಭಾರತ ವಿರೋಧಿ ಮನೋಭಾವ
2024ರ ಬಾಂಗ್ಲಾ ದಂಗೆಯ ರೂವಾರಿಯಾಗಿದ್ದ ಭಾರತ ಮತ್ತು ವಿರೋಧಿ ಧೋರಣೆಯನ್ನು ಹೊಂದಿದ್ದ ಉಸ್ಮಾನ್ ಹದಿ ಎಂಬಾತನ ಮೇಲೆ ಡಿಸೆಂಬರ್ 12 ರಂದು ಗುಂಡಿನ ದಾಳಿ. ಕೆಲವು ದಿನಗಳ ನಂತರ ಆತ ಸತ್ತಿದ್ದ. ಅದಾದ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ಹೆಚ್ಚಾಗುತ್ತಿವೆ. ಭಾರತ ವಿರೋಧಿ ಮನೋಭಾವ ಹೆಚ್ಚುತ್ತಿದೆ. ಭಾರತದ ರಾಜತಾಂತ್ರಿಕ ಕಚೇರಿಗಳನ್ನು ಗುರಿಯಾಗಿಸಲಾಗುತ್ತಿದೆ. ಹಿಂದೂ ಧರ್ಮೀಯರನ್ನೂ ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ.
ಹೆಚ್ಚಿನ ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ