ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್?

ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್?


ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ ತಂಡ ಟಿ20 ಪಂದ್ಯಗಳನ್ನು ಬದಲಾಯಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಲಾಗುವುದು. ಇಂಡಿಯನ್ ಪ್ರೀಮಿಯರ್ ಬ್ಯಾಗ್‌ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ ತಂಡ ಟಿ20 ಪಂದ್ಯಗಳು ಭಾರತದಲ್ಲಿ ನಡೆಯುತ್ತಿರುವುದು ಅನುಮಾನವಾಗಿದೆ.

ಈ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಪೋಸ್ಟ್ ಮಾಡಿದ್ದಾರೆ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್, ಬಾಂಗ್ಲಾ ತಂಡ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು ಮಧ್ಯಂತರ ಸರ್ಕಾರವು ಬಿಸಿಬಿಗೆ ನಿರ್ದೇಶನ ನೀಡಲಾಗಿದೆ ಎಂದು.

ಬಾಂಗ್ಲಾದೇಶ, ಬಾಂಗ್ಲಾದೇಶ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ತೀವ್ರವಾದಿ ಕೋಮುವಾದಿ ಶಕ್ತಿಗಳಿಗೆ ಮಣಿದುಭಾರತೀಯ ಕ್ರಿಕೆಟ್ ಮಂಡಳಿಯು ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ನಿರ್ದೇಶನ ನೀಡಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಮತ್ತು ಪ್ರತಿಭಟಿಸುತ್ತೇನೆ ಎಂದು ಆಸಿಫ್ ನಜ್ರುಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವನಾಗಿಇಡೀ ವಿಷಯವನ್ನು ವಿವರಿಸಿ ಐಸಿಸಿಗೆ ಪತ್ರ ಬರೆಯುವಂತೆ ನಾನು ಕ್ರಿಕೆಟ್ ಮಂಡಳಿಗೆ ಸೂಚಿಸಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟಿಗನೊಬ್ಬ ಮಾನ್ಯ ಒಪ್ಪಂದವನ್ನು ಹೊಂದಿದ್ದರೂ ಭಾರತದಲ್ಲಿ ಆಡಲು ಸಾಧ್ಯವಾಗದಿದ್ದರೆ, ಬಾಂಗ್ಲಾದೇಶ ತನ್ನ ಇಡೀ ಕ್ರಿಕೆಟ್ ತಂಡವು ಆಗಿದೆ ಭಾರತಕ್ಕೆ ಪ್ರಯಾಣಿಸುವುದು ಸುರಕ್ಷಿತವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಂಡಳಿಯು ಸ್ಪಷ್ಟವಾಗಿ ಹೇಳಬೇಕು. ಬಾಂಗ್ಲಾದೇಶದ ಆಗಿದೆ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವಂತೆ ಔಪಚಾರಿಕವಾಗಿ ವಿನಂತಿಸುವಂತೆ ನಾನು ಮಂಡಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಬಾಂಗ್ಲಾದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯಗಳು ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದಾರೆ. ಯಾವುದೇ ಸಂದರ್ಭದಲ್ಲೂ ಬಾಂಗ್ಲಾದೇಶ, ಬಾಂಗ್ಲಾದೇಶ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ” ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ.

ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವರಾಗಿರುವ ಆಸಿಫ್ ನಜ್ರುಲ್ ಅವರ ನಿರ್ದೇಶನದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಬದಲಾಯಿಸುವಂತೆ ಐಸಿಸಿಗೆ ಪತ್ರ ಬರೆಯಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ ಮೂವರು ಆಟಗಾರರು ಔಟ್

ಹೀಗಾಗಿ ಮುಂಬರುವ ಟಿ20 ನಲ್ಲಿ ಬಾಂಗ್ಲಾದೇಶ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುವ ಸಾಧ್ಯತೆಯಿದೆ. ಪಾಕಿಸ್ತಾನದ ಪಂದ್ಯಗಳಿಗೆ ಶ್ರೀಲಂಕಾದ ಮೈದಾನಗಳನ್ನು ನಿಗದಿಪಡಿಸಲಾಗಿದೆ, ಅದೇ ರೀತಿ ಬಾಂಗ್ಲಾ ತಂಡದ ಮ್ಯಾಚ್‌ಗಳಿಗೆ ಶ್ರೀಲಂಕಾ ಆತಿಥ್ಯ ವಹಿಸಬಹುದು.



Source link

Leave a Reply

Your email address will not be published. Required fields are marked *