ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?

ಬೆಂಗಳೂರಿನಲ್ಲಿ ಇದೇ ತಿಂಗಳಲ್ಲಿ ಎರಡೆರಡು ಕಡಲೆಕಾಯಿ ಪರಿಷೆ: ಎಲ್ಲೆಲ್ಲಿ? ಯಾವಾಗ? ಏನು ವಿಶೇಷ?


ಬೆಂಗಳೂರು, (ನವೆಂಬರ್ 05): ಈ ಬಾರಿ ಬೆಂಗಳೂರಿಗರಿಗೆ (ಬೆಂಗಳೂರು) ಒಂದೇ ತಿಂಗಳಿನಲ್ಲಿ ಎರಡೆರಡು ಕಡಲೆಕಾಯಿ (ಕಡಲೆಕಾಯಿ ಪರಿಷೆ) ಪರಿಷೆ ಬಂದಿವೆ. ಬಸವನಗುಡಿ ಕಡಲೆಕಾಯಿ ಪರಿಷೆ 2025 ರ ಸಿದ್ಧತೆ ಪ್ರಾರಂಭವಾಯಿತು, ಐತಿಹಾಸಿಕವಾಗಿ ಮೊದಲ ಬಾರಿಗೆ 2 ದಿನಗಳಿಂದ 5 ದಿನಗಳನ್ನು ವಿಸ್ತರಿಸಲಾಗಿದೆ. ಇದೇ ನವೆಂಬರ್ 17 ರಿಂದ 21 ರವರೆಗೆ ಈ ಪರಿಷೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಪ್ಲಾಸ್ಟಿಕ್ ಮುಕ್ತ ಪರಿಷೆ ಇದೆ, ಈ ಬಾರಿಯೂ ಮಾದರಿಯಲ್ಲಿ ಆಚರಣೆ ಮಾಡಬಾರದು. ಇದಕ್ಕೂ ಮೊದಲೇ ಮಲ್ಲೇಶ್ವರ ಕಡಲೆಕಾಯಿ ಪರಿಷೆ. ಹೌದು.. ಕಾಡುಮಲ್ಲೇಶ್ವರ ಗೆಳಯರ ಬಳಗದ ಶ್ರೀ ಭ್ರಮರಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ 8 ರಿಂದ 9,10 ರಂದು ಮೂರು ದಿನ 9ನೇ ವರ್ಷದ ರೈತಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ.

ರೈತ ಸ್ನೇಹಿ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರದ ಮೂಲಕ ರೈತರಿಗೆ ಬೀದಿ ಬದಿಯ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ. ನವೆಂಬರ್ 8ರಂದು ಸಂಜೆ 5ಗಂಟೆಗೆ ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿರವರು, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಹಾಗೂ ಕಲಾವಿದರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಕುರಿತು ಕಾಡುಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷರಾದ ಬಿ.ಕೆ.ಶಿವರಾಂರವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ನ.17 ಬಸವನಗುಡಿ ಕಡಲೆಕಾಯಿ ಪರಿಷೆ

ಬಹು ನಿರೀಕ್ಷಿತ ಐತಿಹಾಸಿಕ ಹಾಗೂ ಲಕ್ಷಾಂತರ ಮಂದಿ ಸಾಕ್ಷಿಯಾಗುವ ದಿನಾಂಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ, ಕಡೆಯ ಕಾರ್ತಿಕ ಮಾಸ ನವೆಂಬರ್ 17 ರಿಂದ 5 ದಿನಗಳ ಕಾಲ. 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ ವಿಶೇಷ ಸಲ್ಲಿಸುವ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಸೇರಿ ಹಲವು ಮಂದಿ ಉಪಸ್ಥಿತರಿರಲಿದ್ದಾರೆ. ಕಳೆದ ವರ್ಷ ಪರಿಷೆಗೆ ಸುಮಾರು 5 ಲಕ್ಷ ಮಂದಿ ಭಾಗಿ ಆಗಿದ್ದು, ಈ ಬಾರಿ ಇನ್ನೂ ಹೆಚ್ಚಿನ ಜನಸಾಗರ ಸೇರುವ ನಿರೀಕ್ಷೆ ಇದೆ.

ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಸಹಕಾರ ಕೋರಲಾಗಿದೆ. ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ. ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಅಳವಡಿಸಲಾಗುತ್ತಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಇದೇ 8ರಿಂದ ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದೆ, ನವೆಂಬರ್ 17 ರಿಂದ ಬಸವನಗುಡಿ ಪರಿಷೆ ಕೂಡ ನಡೆಯಲಿದೆ.

ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ನೈರ್ಮಲ್ಯಕ್ಕೆ ಒತ್ತು ಮತ್ತು ನೂಕು ನುಗ್ಗಲು ತಡೆಯಲು ಪೊಲೀಸ್ ಇಲಾಖೆಯ ಸಹಕಾರ ಅಗತ್ಯ ವ್ಯವಸ್ಥೆ ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿ. ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ ಮಾಡಲಾಗುತ್ತಿದೆ.



Source link

Leave a Reply

Your email address will not be published. Required fields are marked *