ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ


ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ, ಏಪ್ರಿಲ್ 08: ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ (ಕೊಲೆ) ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿರುವಂತಹ ಘಟನೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್ ಕುಣಿಯುತ್ತಿದ್ದ. ಈ ವೇಳೆ ಮನೆಯ ಮುಂದೆ ಕುಣಿಯಬೇಡ ಎಂದು ಆರೋಪಿಗಳು ಹೇಳಿದ್ದಾರೆ. ಈ ನಡುವೆ ಗಲಾಟೆ ನಡೆದಿದ್ದು, ಬಳಿಕ ಕೊಲೆಗೈಯಲಾಗಿದೆ. ಕುಡಗೋಲು, ಕೊಡಲಿ, ಕಬ್ಬಿಣದ ರಾಡ್ ನಿಂದು ಹೊಡೆದು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಂಗನಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ದೇಮಪ್ಪ ಬಳಗನ್ನವರ, ಮಂಜುನಾಥ ಬಳಗನ್ನವರ, ರುದ್ರಪ್ಪ, ವಿಜಯ್, ಸೂರಪ್ಪ, ಸಿದ್ದಪ್ಪ, ನಾಗರಾಜ, ಬಸವಂತಪ್ಪ ಬಂಧಿತ ಆರೋಪಿಗಳು.

ಬೆಂಗಳೂರಿನಲ್ಲಿ ಭೀಕರ ಅಪಘಾತ: ಲಾರಿ ಚಾಲಕ ದುರ್ಮರಣ

ಬೆಂಗಳೂರಿನಲ್ಲಿ ಭೀಕರ ರಸ್ತೆಗೆ ಲಾರಿ ಚಾಲಕ ದುರ್ಮರಣ ಹೊಂದಿರುವಂತಹ ಘಟನೆ ಮೈಸೂರು ರಸ್ತೆ ಸಾಟ್ ಲೈಟ್ ಬಸ್ ನಿಲ್ದಾಣದ ಸಿಗ್ನಲ್ ನಲ್ಲಿ ನಡೆದಿದೆ. ಸಿಗ್ನಲ್ ನಲ್ಲಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ವಿಜಯ್ ಕುಮಾರ್(60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್ ಜಿಹಾದ್ ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಿಂದ ಆರ್ .ನಗರಕ್ಕೆ ಲಾರಿ ಬರುತ್ತಿತ್ತು. ಸದ್ಯ ಬ್ಯಾಟರಾಯನಪುರ ಸಂಚಾರಿ ವಾಹನ ತೆರವು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *