ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು


ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (ಬಳ್ಳಾರಿ ಹಿಂಸಾಚಾರ ಪ್ರಕರಣ) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಕೂಡಲೆ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣದ ನಂಬರ್ ಕ್ರೈಮ್ 4ರಲ್ಲಿ 25 ಆರೋಪಿಗಳಿಗೆ ಜಾಮೀನು (ಜಾಮೀನು) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.

25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು

ಬಳ್ಳಾರಿ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಪ್ರಮುಖ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗೆ ಸಂಬಂಧಿಸಿದ ಗನ್ ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್ ಸಿಂಗ್ ಪಡಿಸಿ ಕ್ರೈಮ್ ನಂಬರ್ 4ರಲ್ಲಿ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಿದ್ದಾರೆ.

ಜನವರಿ 05ರಂದು ಪ್ರಮುಖ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದೇಶದ ಬೆನ್ನಲ್ಲೇ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇನ್ನು ಬಳ್ಳಾರಿ ಬ್ಯಾನರ್ ಘರ್ಷಣೆ ವಿಚಾರವಾಗಿ ದಿನಕ್ಕೊಂದು ವಿಡಿಯೋ ಬಯಲಾಗುತ್ತಿದೆ. ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಬ್ಯಾನರ್ ಗಲಭೆಯ ಮತ್ತಷ್ಟು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯಕ್ರಿಯೆ ವೇಳೆ ಸ್ಮಶಾನದಲ್ಲಿನ ವ್ಯಕ್ತಿಯೊಬ್ಬ ಮಣ್ಣು ಮಾಡಲು ಗುಂಡಿ ತೋಡಿ, ಬಳಿಕ ಮೃತದೇಹ ಸುಡಲಾಗುತ್ತೆ ಅನ್ನೋ ವಿಡಿಯೋ ರಿಲೀಸ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:16 pm, ಶುಕ್ರ, 9 ಜನವರಿ 26



Source link

Leave a Reply

Your email address will not be published. Required fields are marked *