ತನ್ನ ಪಾಸ್ಪೋರ್ಟ್, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್!
ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಒಂದೇ ಪಾಸ್ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.
ಪಾಸ್ಪೋರ್ಟ್ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ
ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ ಪ್ಯಾಸೆಂಜರ್ ಎಕ್ಸ್ಚೇಂಜ್ ಪ್ರದೇಶದಲ್ಲಿ ಫ್ಲೈಟ್ಗಾಗಿ ಕಾಯುತ್ತಿದ್ದರೆ, ತನ್ನ ಪಾಸ್ಪೋರ್ಟ್ ಮತ್ತು ವೀಸಾ ಕಳೆದುಹೋಗಿದೆ ಎಂದು ಆರೋಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬದಲಿ ದಾಖಲಾತಿ ಪಡೆಯಲು ಯತ್ನಿಸಿದ್ದ.ಆದರೆ ಪೊಲೀಸ್ ವಿಚಾರಣೆ ವೇಳೆ ಆರೋಪಿ ಸಂಚು ಬಹಿರಂಗವಾಗಿದೆ. ಆರೋಪಿಯ ಸ್ನೇಹಿತ ಶಾರುಷನ್ ಕುನಸೇಕರನ್ ಎಂಬಾತ ರಾಜಗೋಪಾಲ್ನ ಪಾಸ್ಪೋರ್ಟ್ ಮತ್ತು ವೀಸಾವನ್ನು ಬಳಸಿ ಯುಕೆ ಪ್ರಯಾಣಿಸಿರುವುದು.
ಈ ಅಕ್ರಮ ನಡೆದಿದ್ದು ಹೇಗೆ?
ಆರೋಪಿ ತನ್ನ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು, ತನ್ನ ಮೂಲ ದಾಖಲಾತಿಗಳನ್ನು ನೀಡಿದ್ದಾನೆ. ನಂತರ ದಾಖಲೆಗಳು ಕಳೆದುಹೋಗಿವೆ ಎಂದು ನಾಟಕವಾಡಿ ಅಧಿಕಾರಿಗಳನ್ನು ದಾರಿ ತಪ್ಪಿಸಿದ್ದಾರೆ. ಯುಕೆಯಲ್ಲಿ ಶರಣಾರ್ಥಿ (ನಿರಾಶ್ರಿತ) ಸ್ಥಾನ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ, ಮತ್ತೊಬ್ಬ ಆರೋಪಿ ಹೇಗೆ ಕಣ್ತಪ್ಪಿಸಿ ಪ್ರಯಾಣಿಸಿದ್ದಾನೆ ಎಂದು ತನಿಖೆ ಮುಂದುವರಿದಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.