ಬೆಂಗಳೂರು, ನವೆಂಬರ್ 20: ಎಟಿಎಂಗಳಿಗೆ ಹಣ ಪೂರೈಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ 7 ಕೋಟಿ 11 ಲಕ್ಷ ನಗದು ದರೋಡೆ ಪ್ರಕರಣದ ತನಿಖೆ ಮುಂದುವರಿದಿದೆ. ಅರ್ಜಿದಾರರ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಆರೋಪಿಗಳನ್ನು ನಕಲಿ ನಂಬರ್ ಪ್ಲೇಟ್ ಬಳಸಿ ರಾಬರಿ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಆರೋಪಿಗಳು ರಾಜ್ಯದಿಂದ ಹೊರಗೆ ಹೋಗಿದ್ದಾರೆಯೇ ಎಂಬ ಕುರಿತು ಪರಿಶೀಲಿಸಲಾಗುತ್ತಿದೆ. ನಗರದಾದ್ಯಂತ ಅಳವಡಿಸಲಾದ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ವಿಜಯಪುರ ಇದೇ ರೀತಿಯ ಎರಡು ಪ್ರಕರಣಗಳಲ್ಲಿ ಅಪರಾಧಿಗಳನ್ನು ಹಿಡಿದ ಉದಾಹರಣೆಗಳಿವೆ, ಈ ಪ್ರಕರಣದಲ್ಲಿಯೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.