ಕಾರಲ್ಲಿ ಬಂದು ರಸ್ತೆ ಬದಿ ಕಸ ಸುರಿಯುತ್ತಿದೆ.
ಬೆಂಗಳೂರು, ಡಿಸೆಂಬರ್ 12: ಎಲ್ಲೆಂದರಲ್ಲಿ ಕಸ ಹಾಕುವುದನ್ನು ತಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ಜನ ಮಾತ್ರ ಕಲಿಯುವಂತೆ ಕಾಣುತ್ತಿಲ್ಲ. ದಂಡದ ಜೊತೆಗೆ ಕಸ ಎಸೆಯುವವರ ಮನೆ ಮುಂದೆಯೇ ಜಿಬಿಎ ಲೋಡ್ ಗಟ್ಟಲೆ ಕಸ ಸುರಿದರೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಹೋಗುವ ಪ್ರಕರಣಗಳಿಗೆ ಬ್ರೇಕ್ ಬಿದ್ದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.
ಸರ್ವಜ್ಞನಗರದ ವಾರ್ಡ್ 29ರಲ್ಲಿ SUV ಕಾರಿನಲ್ಲಿ ಬಂದವರು ರಸ್ತೆ ಬದಿ ರಾಶಿ ರಾಶಿ ಕಸವನ್ನು ಎಸೆದು ಹೋಗಿದ್ದಾರೆ. ಟ್ರಾಫಿಕ್ ಪೊಲೀಸರ ಸಹಾಯದಿಂದ ಅವರ ಮನೆಯನ್ನು ಪತ್ತೆ ಮಾಡಲಾಗಿದ್ದು, 5 ಸಾವಿರ ರೂ. ದಂಡವನ್ನು ಜಿಬಿಎ ಅಧಿಕಾರಿಗಳು ವಸೂಲಿ ಮಾಡಿದ್ದಾರೆ. ಮನೆಗೆ ಭೇಟಿ ನೀಡಿದ್ದ ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಸಂದೀಪ್ ಮತ್ತು ಇತರ ಅಧಿಕಾರಿಗಳು ಫೈನ್ ಅವರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎತ್ತದಂತೆ ಎಚ್ಚರಿಕೆ ನೀಡಿ ಜಿಬಿಎಗಾಗಿ.
ಇದನ್ನೂ ಓದಿ: 5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ
ರಸ್ತೆ ಬದಿ ಕಸ ತೆಗೆಯುವ ಪ್ರಕರಣಗಳ ತಡೆಗೆ ಇತ್ತೀಚೆಗಷ್ಟೇ ‘ಕಸ ಸುರಿಯುವ ಹಬ್ಬ’ದ ಹೆಸರಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಕಸ ಎಸೆಯುವವರ ಮನೆಗಳನ್ನು ಪತ್ತೆ ಮಾಡಿ ದಂಡ ವಿಧಿಸುವ ಜೊತೆಗೆ, ಮನೆ ಮುಂದೆ ಕಸ ಸುರಿದ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಅವರಿಗೆ ಅವಮಾನ ಮಾಡುವ ಕೆಲಸಕ್ಕೆ ಜಿಬಿಎ ಮುಂದಾಗಿತ್ತು.
ಉದ್ಯಮಿ ಕಿರಣ್ ಮಜುಂದಾರ್ ಶಾ ಕಿಡಿ
ದಂಡ ವಿಧಿಸದ ಹೊರತು ಯಾರೂ ಕಾಳಜಿ ವಹಿಸುವುದಿಲ್ಲ. ಈ ದುಷ್ಕರ್ಮಿಗಳಿಗೆ ₹ 50 ಸಾವಿರ ದಂಡ ವಿಧಿಸಬೇಕು ಮತ್ತು ದಂಡ ಪಾವತಿಸುವವರೆಗೆ ವಾಹನವನ್ನು ವಶಪಡಿಸಿಕೊಳ್ಳಬೇಕು. ವೀಡಿಯೊದಲ್ಲಿರುವ 2 ಜನರನ್ನು ಸಹ ಬಂಧಿಸಬೇಕು https://t.co/NkkWYliXZa
– ಕಿರಣ್ ಮಜುಂದಾರ್-ಶಾ (@kiranshaw) ಡಿಸೆಂಬರ್ 11, 2025
ಇನ್ನು ಸರ್ವಜ್ಞನಗರದ ವಾರ್ಡ್ 29ರಲ್ಲಿ ಕಾರಲ್ಲಿ ಬಂದು ಕಸ ಸುರಿದಿದ್ದವರಿಗೆ ದಂಡ ವಿಧಿಸಿರುವ ಬಗ್ಗೆ ಜಿಬಿಎ ತನ್ನ ಖಾತೆಯಲ್ಲಿ ಪೋಸ್ಟ್ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಬಯೋಕಾನ್ ಮುಖ್ಯಸ್ಥ ಕಿರಣ್ ಮಜುಂದಾರ್ ಶಾ, ದಂಡ ಹೆಚ್ಚಿಲ್ಲದಿದ್ದರೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈ ದುಷ್ಟರಿಗೆ 50 ಸಾವಿರ ರೂ. ದಂಡ ವಿಧಿಸಬೇಕಿತ್ತು. ಜೊತೆಗೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು. ವಿಡಿಯೋದಲ್ಲಿ ಕಾಣುವ ಇಬ್ಬರು ವ್ಯಕ್ತಿಗಳನ್ನು ಸಹ ಬಂಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 11:40 am, ಶುಕ್ರ, 12 ಡಿಸೆಂಬರ್ 25