ಹನಿಮೂನ್ ಅರ್ಧಕ್ಕೆ ಬಿಟ್ಟು ಬಂದು ಗಂಡನ ಮನೆಯಲ್ಲಿ ಆತ್ಮ*ಹತ್ಯೆಗೆ ಯತ್ನಿಸಿದ ನವವಧು ಗಾನವಿ!

ಹನಿಮೂನ್ ಅರ್ಧಕ್ಕೆ ಬಿಟ್ಟು ಬಂದು ಗಂಡನ ಮನೆಯಲ್ಲಿ ಆತ್ಮ*ಹತ್ಯೆಗೆ ಯತ್ನಿಸಿದ ನವವಧು ಗಾನವಿ!



ಹನಿಮೂನ್ ಅರ್ಧಕ್ಕೆ ಬಿಟ್ಟು ಬಂದು ಗಂಡನ ಮನೆಯಲ್ಲಿ ಆತ್ಮ*ಹತ್ಯೆಗೆ ಯತ್ನಿಸಿದ ನವವಧು ಗಾನವಿ!
<p>ಮದುವೆಯಾದ ಒಂದೂವರೆ ತಿಂಗಳಲ್ಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ನವವಿವಾಹಿತೆ ಗಾನವಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ವೈದ್ಯರು ‘ಬ್ರೈನ್ ಡೆಡ್’ ಎಂದು ತಿಳಿಸಿದ್ದಾರೆ.</p><img><p>ಬೆಂಗಳೂರು (ಡಿ.24): ಮದುವೆಯಾಗಿ ಕೇವಲ ಒಂದೂವರೆ ತಿಂಗಳು ಕಳೆಯುವಷ್ಟರಲ್ಲೇ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 26 ವರ್ಷದ ನವವಿವಾಹಿತೆ ಗಾನವಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.</p><img><p>ಪ್ರಸ್ತುತ ಗಾನವಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ವೈದ್ಯರು ‘ಬ್ರೈನ್ ಡೆಡ್’ ಎಂದು ತಿಳಿಸಿರುವುದು ಕುಟುಂಬಸ್ಥರನ್ನು ಆತಂಕಕ್ಕೆ ತಳ್ಳಿದೆ.</p><img><p>ಗಾನವಿ ಮತ್ತು ಸೂರಜ್ ಅವರ ಮದುವೆ ಕಳೆದ ಅಕ್ಟೋಬರ್ 29ರಂದು ನಡೆದಿತ್ತು. ಗಂಡನ ಮನೆಯವರ ಬೇಡಿಕೆಯಂತೆ ನವೆಂಬರ್ 23ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಸುಮಾರು ₹40 ಲಕ್ಷ ರೂಪಾಯಿ ಖರ್ಚು ಮಾಡಿ ಅತ್ಯಂತ ಅದ್ದೂರಿಯಾಗಿ ರಿಸೆಪ್ಷನ್ ಮಾಡಲಾಗಿತ್ತು.</p><img><p>ಅದ್ಧೂರಿ ಮದುವೆಯ ಬೆನ್ನಲ್ಲಿಯೇ ಮಕ್ಕಳ ಸಂತೋಷವೇ ಮುಖ್ಯವೆಂದು ನವ ದಂಪತಿಗಳು 10 ದಿನಗಳ ಪ್ರವಾಸಕ್ಕಾಗಿ ಶ್ರೀಲಂಕಾಗೆ ಹನಿಮೂನ್ ತೆರಳಿದ್ದರು.</p><img><p>ನಿಗದಿತ ಪ್ರವಾಸ ಮುಗಿಯುವ 5 ದಿನಗಳ ಮೊದಲೇ ಅಂದರೆ ಕಳೆದ ಭಾನುವಾರವೇ ಸೂರಜ್ ಪತ್ನಿಯನ್ನು ವಾಪಸ್ ಕರೆತಂದಿದ್ದರು. ಪ್ರವಾಸದ ವೇಳೆ ದಂಪತಿಗಳ ನಡುವೆ ಯಾವುದೋ ವಿಚಾರಕ್ಕೆ ದೊಡ್ಡ ಜಗಳ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ.</p><img><p>ಇನ್ನು ನವದಂಪತಿ ಮನೆಗೆ ಬಂದ ನಂತರ ‘ನಿಮ್ಮ ಮಗಳನ್ನು ನಿಮ್ಮ ಮನೆಗೇ ಕರೆದುಕೊಂಡು ಹೋಗಿ’ ಎಂದು ಸೂರಜ್ ಮನೆಯವರು ಗಾನವಿ ಪೋಷಕರಿಗೆ ಅವಾಜ್ ಹಾಕಿದ್ದರು ಎನ್ನಲಾಗಿದೆ.</p><img><p>ಮದುವೆಯಾದ ದಿನದಿಂದಲೇ ಪತಿ ಸೂರಜ್, ಅತ್ತೆ ಜಯಂತಿ ಮತ್ತು ಸೂರಜ್ ಅಣ್ಣ ಸಂಜಯ್ ಅವರು ಹೆಚ್ಚಿನ ವರದಕ್ಷಿಣೆ ಮತ್ತು ಒಡವೆಗಾಗಿ ಗಾನವಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.</p><img><p>ಇದೇ ಬೇಸರದಲ್ಲಿ ಗಾನವಿ ನಿನ್ನೆ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.</p>



Source link

Leave a Reply

Your email address will not be published. Required fields are marked *