ಬೆಂಗಳೂರು, ಜ.22: ಸಾಮಾನ್ಯವಾಗಿ ಎಲ್ಲಾ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು ತಪ್ಪು, ಕಾರಣದಿಂದ ಕೂಡಿರುವ ಜನರನ್ನು ರಕ್ಷಣೆ ಮಾಡಿರುವ ಹಲವು ಘಟನೆಗಳು . ಇದೀಗ ಇಲ್ಲೊಂದು ಪೊಲೀಸರ ತಕ್ಷಣ ಸ್ಪಂದನೆಯಿಂದ ಜೀವವೊಂದು ಉಳಿದಿದೆ. ಈ ಘಟನೆಯಿಂದ ಪೊಲೀಸರ ಮೇಲೆ ಮತ್ತಷ್ಟು ನಂಬಿಕೆಯನ್ನು ಹುಟ್ಟಿಸಿದೆ. ಸರಿಯಾದ ಸಮಯಕ್ಕೆ ಬಂದು ಒಂದು ಜೀವವನ್ನು ಉಳಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬೆಂಗಳೂರಿನ ಜನರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹುಳಿಮಾವು ವ್ಯಾಪ್ತಿಯ ಬಸವನಪುರದಲ್ಲಿ ಜ.20ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಶ್ಚಿಮ ಬಂಗಾಳದ ಯುವತಿಯನ್ನು ರಕ್ಷಿಸಲಾಗಿದೆ.
ಕೋಣನಕುಂಟೆ ಹೊಯ್ಸಳ ಪೊಲೀಸರಿಗೆ ಸರಿಯಾದ ಸಮಯಕ್ಕೆ ಬಂದು ಯುವತಿಯ ಜೀವ. ಯುವತಿ ವಿಷ ಸೇವಿಸಿದ ಬಳಿಕ ತಂದೆಗೆ ಕರೆ ಮಾಡಿದ್ದಾಳೆ. ಇದರಿಂದ ಗಾಬರಿಗೊಂಡು ಏನು ಮಾಡಬೇಕು ಎಂದು ತೋಚದೆ, ತಂದೆ 112’ ಗೆ ಕರೆ ಮಾಡಿದ್ದಾರೆ. ತಕ್ಷಣ ಕೋಣನಕುಂಟೆ ಠಾಣೆ ಹೊಯ್ಸಳ ವೈದ್ಯರ ಕಾರ್ಯಪ್ರವೃತ್ತರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಣನಕುಂಟೆ ಠಾಣೆ ಎಸ್ಎಸ್ಐ ಶ್ರೀನಿವಾಸ ಮೂರ್ತಿ, ಕಾನ್ಸಟೇಬಲ್ ಮಂಜುನಾಥ್ ಈ ಯುವತಿಯ ರಕ್ಷಣೆ ಮಾಡಿದ್ದಾರೆ. ಈಗ ಯುವತಿ ಸುರಕ್ಷಿತವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಹೇಳಲಾಗಿದೆ. ಆದರೆ ಆಕೆ ಯಾವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದಿಲ್ಲ.
ಇದನ್ನೂ ಓದಿ: ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ
ಕಿರುಕುಳ ನೀಡುತ್ತಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ (ಪ್ರತ್ಯೇಕ ಘಟನೆ)
ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಕಿರುಕುಳ ನೀಡುತ್ತಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಮೊದಲನೇ ಮಗಳು ಮನೆಬಿಟ್ಟು ಹೋಗಿದ್ದಕ್ಕೆ ಪತ್ನಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಮುರುಗೇಶ್ (50), ಇದರಿಂದ ಬೆಸತ್ತು ಪತ್ನಿ ಲಕ್ಷ್ಮೀ ಕೊಲೆ ಮಾಡಿದ್ದಾಳೆ. ಈ ಘಟನೆ ಜ.20ರಂದು ನಡೆದಿದೆ. ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ರೂ ಮೊದಲನೇ ಮಗಳಿಗೆ ಮದುವೆಯಾಗಿತ್ತು. ಆದರೆ ಎರಡನೇ ಮಗಳು ಮನೆ ಬಿಟ್ಟು ಹೋಗಿದ್ದಳು. ಈ ಕಾರಣಕ್ಕೆ ಅದೇ ದಿನ ರಾತ್ರಿ ಲಕ್ಷ್ಮೀ ಜೊತೆಗೆ ಮುರುಗೇಶ್ ಜಗಳ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡು ಲಕ್ಷ್ಮೀ ಮುರುಗೇಶ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಇದೀಗ ಈ ಬಗ್ಗೆ ಬೊಮ್ಮನಹಳ್ಳಿ ಪೊಲೀಸರ ದೂರು ದಾಖಲಿಸಿದ್ದು, ತನಿಖೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ