Headlines

ಇದು ರಾಜ್ಯದ ದುಸ್ಥಿತಿ: ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನ

ಇದು ರಾಜ್ಯದ ದುಸ್ಥಿತಿ: ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನ


ಬೆಂಗಳೂರು, ಅ.22; ಬೆಂಗಳೂರಿನ ರಸ್ತೆ ಸಮಸ್ಯೆ (ಬೆಂಗಳೂರು ಗುಂಡಿಗಳು) ಮುಗಿಯದ ಕಥೆ, ದಿನಕ್ಕೊಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜನ ಪ್ರತಿದಿನ ಸರ್ಕಾರಕ್ಕೆ ರಸ್ತೆ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಅದ್ರೂ ಯಾವುದಕ್ಕೂ ಸರ್ಕಾರ ಕೇರ್ ಮಾಡುತ್ತಿಲ್ಲ. ಇನ್ನು ಕೊನೆಗೆ ಉಳಿದಿರುವುದು ಒಂದೇ ದಾರಿ, ಜನರೇ ಗುಂಡಿ ಮುಚ್ಚುವುದು. ಈಗ ಅದೇ ಕಾರ್ಯ ನಡೆಯುತ್ತಿದೆ. ಇಲ್ಲೊಂದು ಅಂಥಹದೇ ಪೋಸ್ಟ್ ರೆಡ್ಡಿಟ್ ನಲ್ಲಿ ವೈರಲ್ ಆಗಿದೆ. ಈ ಪೋಸ್ಟ್‌ಗೆ ತುಂಬಾ ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ. ಶಿಥಿಲಗೊಂಡ ರಸ್ತೆಗಳ ಬಗ್ಗೆ ಸಾರ್ವಜನಿಕರು ಅಸಮಾಧನ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಈ ಪೋಸ್ಟ್ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲೊಂದು ರಸ್ತೆ ಗುಂಡಿಯನ್ನು ಹಳೆಯ ಸೋಫಾದಿಂದ ಮುಚ್ಚಿರುವ ಪೋಸ್ಟ್ ಭಾರೀ ವೈರಲ್ ಆಗಿದೆ.

ಇನ್ನು ಪೋಸ್ಟ್ ನಿಂದ ಹೊಸ ಚರ್ಚೆಗಳು ಶುರುವಾಗಿದೆ. ಕೆ.ಆರ್. ರಸ್ತೆಯ ಬಳಿಯ ಒಂದು ಪ್ರದೇಶದಲ್ಲಿ ಈ ದೃಶ್ಯ ಕಂಡು ಬಂದಿದೆ. ಈ ಪೋಸ್ಟ್ ಅನ್ನು ರೆಡ್ಡಿ ಹಂಚಿಕೊಂಡಿದ್ದು, ಬಳಕೆದಾರರು ಈ ರಸ್ತೆ ಗುಂಡಿಯನ್ನು ನೋಡಿ, ಅಬ್ಬಾಬ್ಬ ಈ ಗುಂಡಿ ಎಷ್ಟು ಆಳವಾಗಿದೆ. ಒಂದು ದ್ವಿಚಕ್ರ ವಾಹನವು ಬೀಳುವಷ್ಟು ಅಗಲವಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್‌ನಲ್ಲಿ ತಿಳಿಸಿರುವ ಪ್ರಕಾರ, ರಸ್ತೆಗೆ ಶಾಶ್ವತ ಪರಿಹಾರ ಸಿಗದ ಕಾರಣ ಸ್ಥಳೀಯ ಅಂಗಡಿಯವರು ಈ ಪರಿಹಾರವನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಕೆ.ಆರ್.ರಸ್ತೆ ಬಳಿ ಬಳಕೆಯಾಗದ ಮಂಚದಿಂದ ಹೊಂಡ ಆವರಿಸಿದೆ. byu/fisherfishyfish inbangalore

ಪೊಲೀಸರು ಕೂಡ ಜನರಿಗೆ ಇಲ್ಲಿ ಗುಂಡಿಗೆ ಎಂದು ಎಚ್ಚರಿಕೆ ಬ್ಯಾರಿಕೇಡ್ ಕೂಡ ಹಾಕಿದ್ದಾರೆ. ಆದರೆ ಗುಂಡಿ ಮುಚ್ಚಬೇಕು ಎನ್ನುವ ಮನಸ್ಸು ಯಾರು ಮಾಡಿಲ್ಲ, ಪಕ್ಕದಲ್ಲಿ ವ್ಯಾಪಾರ ಮಾಡುವ ಜನರು ಸಹ ಗುಂಡಿಯನ್ನು ಮುಚ್ಚುವ ಯೋಚನೆಯನ್ನು ಮಾಡಿಲ್ಲ ಎಂದು ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೇವೆ, ಆದರೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹೇಳಿದ್ದಾರೆ. ನೀವು ಬಿಬಿಎಂಪಿ ಅಥವಾ ಬ್ರಾಂಡ್ ಬೆಂಗಳೂರಿಗೂ ಈ ಬಗ್ಗೆ ದೂರು ನೀಡಿದ್ರು ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಹಾಳಾದ ಬೆಂಗಳೂರು ರಸ್ತೆ: 500 ಕಿ.ಮೀ ವೈಟ್ ಟಾಪಿಂಗ್, ನಗರದ ರಸ್ತೆಗಳ ಉದ್ದ ಅಗಲ ಬಿಚ್ಚಿಟ್ಟ ಡಿಕೆಶಿ

ಇರುವ ರಸ್ತೆಗಳು ಇಷ್ಟೊಂದು ಕೆಟ್ಟದಾಗಿರಬಾರದು, ಮುಂದಿನ ಹತ್ತು ವರ್ಷಗಳ ಕಾಲ ಈ ಬದಲಾವಣೆಗಳು ಆಗುವುದಿಲ್ಲ. ಒಂದಾ ಸರ್ಕಾರ ಈ ಬಗ್ಗೆ ಬದಲಾವಣೆ ತರಬೇಕು. ಇಲ್ಲ ಜನರೇ ಬದಲಾವಣೆಯನ್ನು ಮಾಡಬೇಕು ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಆಧುನಿಕ ಸಮಸ್ಯೆಗಳಿಗೆ ಕೆಲವು ರೀತಿಯ ಪರಿಹಾರದ ಅಗತ್ಯವಿದೆ ಎಂದು ಮತ್ತೊಬ್ಬ ಬಳಕೆದಾರ ಕಮೆಂಟ್ ಮಾಡಲಾಗಿದೆ. ಯಾರಾದರೂ ಸೋಫಾವನ್ನು ತಿರುಗಿಸಿ ಟ್ರಾಫಿಕ್ ಸಮಯದಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಬಹುದು ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *