
ಇದೀಗ ವೃದ್ಧನ ಸಾವಿನ ಬಗ್ಗೆ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದೆ. ಆದರೆ, ಈ ಘಟನೆಗೆ ಕಾರಣವಾದ ನಿರ್ಲಕ್ಷ್ಯಕ್ಕೆ ಯಾರು ಹೊಣೆ ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದ್ದುದ್ದನ್ನು ಸರ್ಕಾರ ಜನಸಂಖ್ಯೆಗೆ ಅನುಗುಣ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾಡಿದೆ. ಆದರೆ, ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂಬ ಆಕ್ರೋಶ ಜನರಿಂದ ಕೇಳಿಬಂದಿದೆ.