ಬೆಂಗಳೂರು (ನವೆಂಬರ್ 04): ಬೆಂಗಳೂರಿನ ರಸ್ತೆ ಗುಂಡಿಗಳಿಂದ ಅವಘಡಗಳು ಸಂಭವಿಸುತ್ತಿವೆ, ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಸಾರ್ವಜನಿಕರು ಸಹ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಾ ಹಿಡಿ ಶಾಪ ಹಾಕುತ್ತಿದ್ದಾರೆ. ಭಾರಿ ಆಕ್ರೋಶದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ನವೆಂಬರ್ 3 ರಂದು ಗಡುವು ನೀಡಿದ್ದರು. ಆದರೆ ಹಾಗೂ ಡಿಸಿಎಂ ಡೆಡ್ಲೈನ್ ಮಾತಿಗೆ ಗ್ರೇಟರ್ ಸಿಎಂ ಬೆಂಗಳೂರು ಪ್ರಾಧಿಕಾರ ಅವಮಾನ ಮಾಡಿದೆ. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸಿಎಂ, ಡಿಸಿಎಂ ಡೆಡ್ಲೈನ್ಗೂ ಬೆಲೆ ನೀಡಿಲ್ಲ. ಇದರ ಬೆನ್ನಲ್ಲೇ ಇದೀಗ ವಿಪಕ್ಷ ಬಿಜೆಪಿ ರಸ್ತೆ ಗುಂಡಿಗಳನ್ನು ಸರಿ ಮಾಡಿ ಸಹಿ ಸಂಗ್ರಹಣೆ ಚಳವಳಿ ಮಾಡಲು ಮುಂದಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಎರಡೂವರೆ ವರ್ಷದ ರಸ್ತೆಗಳು ಅಧೋಗತಿಗೆ ಹೋಗಿವೆ. ಕಸ ಪೂರ್ತಿ ಸಂಗ್ರಹ ಆಗಿದೆ. ಅಭಿವೃದ್ಧಿ ಆಗಿಲ್ಲ, ಹಣ ಬಿಡುಗಡೆ ಆಗಿಲ್ಲ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಇಂದು ಸಭೆ ನಡೆಸಿದ್ದೇವೆ. ಬೆಂಗಳೂರಿನ ಜನತೆಗೆ ದ್ರೋಹ ಬಗೆದ ಕಾಂಗ್ರೆಸ್ ವಿರುದ್ಧ ಜನಾಂದೋಲನ ನಡೆಯಲಿದೆ. ಒಂದು ವಾರಗಳ ಕಾಲ (ನವೆಂಬರ್ 7 ರಿಂದ 15 ರವರೆಗೆ) ರಸ್ತೆ ಗುಂಡಿಗಳನ್ನು ಸರಿ ಮಾಡಿ ಸಹಿ ಸಂಗ್ರಹ ಚಳವಳಿ ನಡೆಸಲಾಗುವುದು ಎಂದು ಹೇಳಿದರು.