15

Image Credit : Asianet News
ಹೊಸಕೋಟೆಯಲ್ಲಿತ್ತು ಹಣ
ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದ ಮಾಹಿತಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಹೊಸಕೋಟೆ ಕೆರೆ ಬಳಿಯಲ್ಲಿ ಹಣ ತುಂಬಿಸಲಾಗುವ ಪೆಟ್ಟಿಗೆಗಳನ್ನು ಎಸೆಯಲಾಗಿತ್ತು. ಹಣವನ್ನು ಹೊಸಕೋಟೆ ಬಳಿ ಪಾಳು ಮನೆಯಲ್ಲಿ ಇರಿಸಲಾಗಿತ್ತು. ಅನುಮಾನದ ಮೇಲೆ ಮನೆ ಬಳಿ ಹೋಗಿ ಬಾಗಿಲು ತೆರೆದು ನೋಡಿದಾಗ ಹಣ ಸಿಕ್ಕಿದೆ.
25
Image Credit : Asianet News
ಚಿತ್ತೂರಿನತ್ತ ಪ್ರಯಾಣ
ಕಾರ್ ತೆಗೆದುಕೊಂಡು ಹೊಸಕೋಟೆ ಟೋಲ್ಗೆ ಹೋಗದೇ ಕೆರೆ ಬಳಿ ಹೋಗಿದ್ದರು. ಕೆರೆ ಬಳಿ ಹಣ ಬಚ್ಚಿಟ್ಟ ಗ್ಯಾಂಗ್ ಚಿತ್ತೂರು ಕಡೆ ಹೋಗಿತ್ತು. ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಹೊಸಕೋಟೆಯ ಪಾಳು ಮನೆಯಲ್ಲಿ ಹಣ ಇಟ್ಟಿರೋದಾಗಿ ಬಾಯಿ ಬಿಟ್ಟಿದ್ದರು.
35
Image Credit : Asianet News
ಕೆಲಸವಿಲ್ಲದೇ ಕುಳಿತಿದ್ದ ಗ್ಯಾಂಗ್
ದರೋಡೆ ಗುಂಪಿನಲ್ಲಿದ್ದ ಬಹುತೇಕರಿಗೆ ಕೆಲಸವೇ ಇರಲಿಲ್ಲ. ಸಿಎಂಎಸ್ ಉದ್ಯೋಗಿಯಾಗಿದ್ದ ಗೋಪಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಸಂಬಳ ಸಿಗುತ್ತಿತ್ತು. ದಿನನಿತ್ಯ ಕೋಟಿ ಕೋಟಿ ಹಣ ನೋಡುತ್ತಿದ್ದ ಗೋಪಿಗೆ, ಹೇಗಾದ್ರು ಮಾಡಿ ಒಂದಿಷ್ಟು ಹಣ ಲಪಟಾಯಿಸಬೇಕೆಂಬ ದುರಾಸೆ ಬಂದಿತ್ತು. ಎಟಿಎಂ ಹಣ ಸಾಗಣೆ ವಿಚಾರ ತಿಳಿದಿದ್ದ ಗೋಪಿ ಮತ್ತು ಕ್ಸೇವಿಯರ್ ಜೊತೆಯಾಗಿ ದರೋಡೆಗೆ ಪ್ಲಾನ್ ಮಾಡುವಂತೆ ಕಾನ್ಸ್ಟೇಬಲ್ ಅಣ್ಣಪ್ಪನಿಗೆ ಹೇಳಿದ್ದರು.
45
Image Credit : Asianet News
ಅಣ್ಣಪ್ಪ ಪವರ್ ಸೆಂಟರ್
55
Image Credit : Asianet News
ಹಾವೇರಿ ಜಿಲ್ಲೆ ಮೂಲದವನು ಅಣ್ಣಪ್ಪ
2018ರಲ್ಲಿ ಪೊಲೀಸ್ ಇಲಾಖೆಗೆ ಹಾವೇರಿ ಜಿಲ್ಲೆ ವೀರಾಪುರ ತಾಲೂಕಿನ ಹಳೇ ವೀರಾಪುರ ಗ್ರಾಮದ ಅಣ್ಣಪ್ಪ ನಾಯಕ್ ಸೇರಿದ್ದ. ಮೊದಲು ಬಾಣಸವಾಡಿ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಆತ, ಕಳೆದ ಒಂದೂವರೆ ವರ್ಷದಿಂದ ಗೋವಿಂದಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ವೃತ್ತಿ ಜೀವನದಲ್ಲಿ ಅಣ್ಣಪ್ಪ ನಾಯಕ್ ಹಿನ್ನೆಲೆ ಉತ್ತಮವಾಗಿರಲಿಲ್ಲ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ದರೋಡೆ, ಕಾರು ಅಡ್ಡಗಟ್ಟಿ 1.2 ಕೆಜಿ ಚಿನ್ನ ದೋಚಿದ ಖದೀಮರು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ