ಹೊರನಾಡು ಅನ್ನಪೂರ್ಣೇಶ್ವರಿಗೆ ಹೋಗಿದ್ದ 48 ಜನರಿದ್ದ ಪ್ರವಾಸಿಗರ ಬಸ್ ಪಲ್ಟಿ!

ಹೊರನಾಡು ಅನ್ನಪೂರ್ಣೇಶ್ವರಿಗೆ ಹೋಗಿದ್ದ 48 ಜನರಿದ್ದ ಪ್ರವಾಸಿಗರ ಬಸ್ ಪಲ್ಟಿ!



ಹೊರನಾಡು ಅನ್ನಪೂರ್ಣೇಶ್ವರಿಗೆ ಹೋಗಿದ್ದ 48 ಜನರಿದ್ದ ಪ್ರವಾಸಿಗರ ಬಸ್ ಪಲ್ಟಿ!
<p>ಚಿಕ್ಕಮಗಳೂರಿನ ಕಳಸ ತಾಲೂಕಿನ ಬಳಿ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಪ್ರವಾಸಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.</p><img><p><strong>ಚಿಕ್ಕಮಗಳೂರು: </strong>ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಪಲ್ಟಿಯಾದ ಭೀಕರ ಘಟನೆ ನಡೆದಿದೆ. ಬೆಂಗಳೂರು ಮೂಲದ ಈ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><img><p>ಬೆಂಗಳೂರಿನಿಂದ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕಾಗಿ ಪ್ರವಾಸಿಗರು ಬಸ್ಸಿನಲ್ಲಿ ಹೊರಟಿದ್ದರು. ಕಳಸ ತಾಲೂಕಿನ ಕಲ್ಮಕ್ಕಿ ಸಮೀಪದ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಬದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 45 ಪ್ರಯಾಣಿಕರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><img><p>ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಸ್ಸಿನ ಗಾಜುಗಳನ್ನು ಒಡೆದು ಪ್ರವಾಸಿಗರನ್ನು ಹೊರತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಯಾವುದೇ ಸಾವು-ನೋವು ಸಂಭವಿಸದಿರುವುದು ಸದ್ಯಕ್ಕೆ ಸಮಾಧಾನಕರ ಸಂಗತಿಯಾಗಿದೆ.</p><img><p>ವಿಷಯ ತಿಳಿಯುತ್ತಿದ್ದಂತೆ ಕಳಸ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ತಿರುವಿನ ಅಂದಾಜು ಸಿಗದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ವಾಹನ ಚಾಲನೆ ಮಾಡುವಾಗ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.</p>



Source link

Leave a Reply

Your email address will not be published. Required fields are marked *