
<p>Bhagyalakshmi Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ ಮನೆ ಮುಂದೆ ತಾಂಡವ್ ಕ್ಷಮೆ ಕೇಳಿದ್ದೂ ಆಯ್ತು, ಶ್ರೇಷ್ಠ ಬಂದು ಇನ್ನೊಂದಿಷ್ಟು ರಾಮಾಯಣ ಮಾಡಿದ್ದೂ ಆಯ್ತು. ಅಷ್ಟೇ ಯಾಕೆ? ಶ್ರೇಷ್ಠಾಳಿಗೆ ತಾಂಡವ್ ಬಾರಿಸಿದ್ದೂ ಆಯ್ತು.</p><p> </p><img><p>ತಾಂಡವ್ ಬದಲಾಗಿದ್ದಾನೆ ಎಂದು ಸುನಂದಾ, ತನ್ವಿ ಬಿಟ್ಟು ಬೇರೆ ಯಾರೂ ಕೂಡ ಒಪ್ಪುತ್ತಿಲ್ಲ. ಹೀಗಾಗಿ ತಾಂಡವ್ನನ್ನು ಮನೆಯೊಳಗಡೆ ಕರೆಯಲು ಯಾರೂ ಕೂಡ ರೆಡಿ ಇಲ್ಲ. ಆದರೆ ತನ್ವಿ ಮಾತ್ರ ತಂದೆಯನ್ನು ಬಿಟ್ಟುಕೊಡಲು ರೆಡಿ ಇಲ್ಲ.</p><img><p>ಇದನ್ನೇ ದಾಳವಾಗಿಟ್ಟುಕೊಂಡು ಶ್ರೇಷ್ಠ ಕೂಡ ಒಂದಿಷ್ಟು ನಾಟಕ ಮಾಡಿದಳು, ಭಾಗ್ಯಗೆ ಬಾಯಿಗೆ ಬಂದಹಾಗೆ ಮಾತನಾಡಿದಳು. ಆದರೂ ಕೂಡ ತಾಂಡವ್ ಮಾತ್ರ ಎಲ್ಲಿಯೂ ಭಾಗ್ಯಳನ್ನು ಬಿಟ್ಟುಕೊಡಲೇ ಇಲ್ಲ. ಇದು ಭಾಗ್ಯಗೆ ಅಚ್ಚರಿ ತಂದಿದೆ.</p><img><p>ತಂದೆ ಮನೆಯೊಳಗಡೆ ಬಂದಿಲ್ಲ ಅಂದ್ರೆ, ನಾನು ಕೂಡ ಅವರ ಜೊತೆ ಹೋಗ್ತೀನಿ ಎಂದು ತನ್ವಿ ಹಠ ಹಿಡಿದಳು. ಮಗಳನ್ನು ಕಳೆದುಕೊಳ್ಳುವ ಭಯಕ್ಕೆ ಈಗ ಭಾಗ್ಯ ಕೂಡ, ತಾಂಡವ್ಗೆ ಮನೆಯೊಳಗಡೆ ಬರೋಕೆ ಓಕೆ ಎಂದಿದ್ದಾಳೆ. ಇದು ಅಚ್ಚರಿ ತಂದಿದೆ.</p><img><p>ಭಾಗ್ಯಗೆ ಪ್ರೇಮ ನಿವೇದನೆ ಮಾಡಬೇಕು, ಅವಳನ್ನು ಮದುವೆ ಆಗಬೇಕು ಎಂದು ಆದಿ ಕನಸು ಕಾಣುತ್ತಿದ್ದಾನೆ. ಅತ್ತ ತಾಂಡವ್, ಭಾಗ್ಯ ಬೇಕು ಎಂದು ಪರಿತಪಿಸುತ್ತಿದ್ದಾನೆ. ಅಪ್ಪ-ಅಮ್ಮ ಮೊದಲಿನ ಥರ ಇರಲಿ ಎಂದು ತನ್ವಿ ಬಯಸುತ್ತಿದ್ದಾಳೆ. ಸುನಂದಾ ಬಿಟ್ಟು ಉಳಿದವರು ಕೂಡ ಆದಿ-ಭಾಗ್ಯ ಮದುವೆಯಾಗಿ ಚೆನ್ನಾಗಿರಲಿ ಎಂದು ನೋಡುತ್ತಿದ್ದಾರೆ.</p><img><p>ಈಗ ಭಾಗ್ಯ ಹೇಳಿದಂತೆ ತಾಂಡವ್ ಮನೆಯೊಳಗಡೆ ಬಂದಿದ್ದಾನೆ. ಇದರಿಂದ ಆದಿ-ಭಾಗ್ಯ ದೂರ ಆಗ್ತಾರಾ? ಇವರ ನಡುವಿನ ಸ್ನೇಹ ದೂರ ಆಗತ್ತಾ ಎಂಬ ಪ್ರಶ್ನೆ ಇದೆ. ಅಷ್ಟೇ ಅಲ್ಲದೆ ಭಾಗ್ಯ ಮುಂದಿನ ನಡೆ ಏನು? ತಾಂಡವ್ ಬದಲಾಗಿದ್ದು ನೋಡಿ ಭಾಗ್ಯ ಅವನನ್ನು ಮನ್ನಿಸುತ್ತಾಳಾ ಎಂಬ ಕುತೂಹಲ ಕೂಡ ಇದೆ.</p>
Source link
Bhagyalakshmi Serial: ಎಲ್ರಿಗೂ ಶಾಕ್ ನೀಡುವಂಥ ನಿರ್ಧಾರ ತಗೊಂಡ ಭಾಗ್ಯ; ಮೂಕವಿಸ್ಮಿತರಾದ ಮನೆಯವ್ರು