
<p>ಉಡುಪಿ: ಕರಾವಳಿಯ ಕುವರಿ, ಬಿಗ್ ಬಾಸ್ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ತವರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು ರಕ್ಷಿತಾ ಶೆಟ್ಟಿಗೆ ತಮ್ಮ ನೆಚ್ಚಿನ ಬಂಗುಡೆ ಮೀನು ಕೊಟ್ಟು ಸ್ವಾಗತಿಸಿದ್ದು, ಹೆಚ್ಚು ಗಮನ ಸೆಳೆದಿದೆ.</p><p> </p><img><p>12ನೇ ಸೀಸನ್ ಬಿಗ್ ಬಾಸ್ ಮನೆಯಲ್ಲಿ ಚಟಪಟ ಮಾತುಗಳ ಮೂಲಕವೇ ಕನ್ನಡಿಗರ ಮನಗೆದ್ದು ಫೈನಲ್ ಪ್ರವೇಶಿಸಿದ್ದ ರಕ್ಷಿತಾ ಶೆಟ್ಟಿ ಅಂತಿಮವಾಗಿ ರನ್ನರ್-ಅಪ್ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.</p><img><p>ಬಿಗ್ ಬಾಸ್ ರನ್ನರ್ ಅಪ್ ಆದ ರಕ್ಷಿತಾಗೆ ಬರೋಬ್ಬರಿ 25 ಲಕ್ಷ ರುಪಾಯಿ ನಗದು ಬಹುಮಾನ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ರಕ್ಷಿತಾ ತನ್ನ ತವರೂರಾದ ತುಳುನಾಡಿಗೆ ಎಂಟ್ರಿ ಕೊಟ್ಟಿದ್ದಾರೆ.</p><img><p>ಉಡುಪಿಯ ಹೆಜಮಾಡಿಯಿಂದ ಪಡುಬಿದ್ರೆ ಪೇಟೆಯ ತನಕ ರಕ್ಷಿತಾ ಶೆಟ್ಟಿಯವರನ್ನು ತೆರೆದ ವಾಹನದ ಮೂಲಕ ಅವರ ಅಭಿಮಾನಿಗಳು ಮೆರವಣಿಗೆ ನಡೆಸಿದರು. ಕರಾವಳಿಯ ಚಂಡೆ ನುಡಿಸುವ ಮೂಲಕ ರಕ್ಷಿತಾ ಅವರನ್ನು ಸ್ವಾಗತಿಸಲಾಯಿತು. ಇದರ ಜತೆಗೆ ಶಾಲು ಹಾಕಿ ಅಭಿಮಾನಿಗಳು ಸ್ವಾಗತಿಸಿದರು.</p><img><p>ಬಂಗುಡೆ ಮೀನಂದ್ರೆ ರಕ್ಷಿತಾಗೆ ಬಲು ಇಷ್ಟ. ಇದೇ ಕಾರಣಕ್ಕೆ ರಕ್ಷಿತಾಗೆ ಅಭಿಮಾನಿಗಳು ಬಂಗುಡೆ ಮೀನನ್ನು ಗಿಫ್ಟ್ ನೀಡಿದರು. ರಕ್ಷಿತಾ ಕೈಯ್ಯಲ್ಲಿ ಬಂಗುಡೆ ಮೀನು ಹಿಡಿದು ಸಂಭ್ರಮಿಸಿದರು.</p><img><p>ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಜೊತೆ ಸೆಲ್ಫಿ ತೆಗೆದುಕೊಳ್ಳಲು ಸ್ಥಳೀಯರು ಮುಗಿಬಿದ್ದರು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನೂರಾರು ಜನ ರಕ್ಷಿತಾ ಅವರನ್ನು ನೋಡಲು ಮುಗಿಬಿದ್ದರು.</p><img><p>ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಸೀಸನ್ 12ರಲ್ಲಿ ಸ್ಪರ್ಧೆ ಮಾಡಿದ್ದ ಅತ್ಯಂತ ಕಿರಿಯ ಕಂಟೆಸ್ಟೆಂಟ್. ಆದ್ರೆ ವಯಸ್ಸಲ್ಲಿ ಕಿರಿಯಳಾದ್ರು ಈಗ ಕೀರ್ತಿಯಲ್ಲಿ ದೊಡ್ಡವಳಾಗಿದ್ದಾರೆ. ರಕ್ಷಿತಾ ಶೆಟ್ಟಿ ಅಂದ್ರೆ ಎಲ್ಲರ ಮನಸ್ಸು ಗೆದ್ದ ಮನೆ ಮಗಳಾಗಿದ್ದಾರೆ.</p>
Source link
ಉಡುಪಿ: ಬಂಗಡೆ ಮೀನು ಕೊಟ್ಟು ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾಗೆ ಅದ್ಧೂರಿ ಸ್ವಾಗತ